<p><strong>ಬಳ್ಳಾರಿ</strong>: ‘ಸ್ವಚ್ಛ, ಸುಂದರ ದೇಶ ನಿರ್ಮಾಣ ಮಾಡುವ ಪೌರಕಾರ್ಮಿಕರು ನೈಜ ಕಾಯಕಯೋಗಿಗಳು’ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.</p><p>ನಗರದ ವಾಲ್ಮೀಕಿ ಭವನದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p><p>‘ನಗರದಲ್ಲಿ 130 ಪೌರಕಾರ್ಮಿಕರ ಹುದ್ದೆ ಕಾಯಂ ಆಗಿದ್ದು, ಇನ್ನೂ 121 ಪೌರಕಾರ್ಮಿಕರನ್ನು ಕಾಯಂ ನೇಮಕ ಮಾಡಲಾಗುವುದು’ ಎಂದರು.</p><p>ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿ, ‘ನಿವೃತ್ತ ಪೌರಕಾರ್ಮಿಕರಿಗೆ ಪಿಂಚಣಿ, ಇನ್ನಿತರೆ ಸೌಲಭ್ಯಗಳ ಚೆಕ್ ನೀಡುವುದರಿಂದ ಅವರು ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಈ ನಿಯಮವನ್ನು ಇಲ್ಲಿಯೂ ಜಾರಿಗೊಳಿಸಲು ಆಯುಕ್ತರ ಜೊತೆ ಚರ್ಚಿಸಿದ್ದೇನೆ’ ಎಂದು ತಿಳಿಸಿದರು.</p><p>ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿದರು. ಉಪಮೇಯರ್ ಡಿ.ಸುಕುಂ, ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಕಂದಕೂರು ರಾಮುಡು, ಮಾಜಿ ಮೇಯರ್ ರಾಜೇಶ್ವರಿ, ಉಪ ಆಯುಕ್ತ ನಂದೀಶ್, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪದ್ಮರೋಜ ಇದ್ದರು. </p>.<p><strong>‘ಕಾಯಂಗೊಳಿಸಲು ಆಯ್ಕೆ ಪ್ರಕ್ರಿಯೆ’</strong></p><p>‘ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 452 ಕಾಯಂ ಪೌರಕಾರ್ಮಿಕರಿದ್ದು 183 ಪೌರಕಾರ್ಮಿಕರು ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಯಂ ಮತ್ತು ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ₹2000 ಸಂಕಷ್ಟ ಭತ್ಯೆ ಹಾಗೂ ₹7000 ವಿಶೇಷ ಭತ್ಯೆ ನೀಡಲಾಗುತ್ತದೆ’ ಎಂದು ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಹೇಳಿದರು.</p><p>‘ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಪ್ರತಿ ವರ್ಷ 21 ದಿನಗಳ ರಜಾ ವೇತನ ಹಾಗೂ 10 ವರ್ಷಗಳಿಗೊಮ್ಮೆ ವೇತನ ಮುಂಬಡ್ತಿ ಸಹ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಸ್ವಚ್ಛ, ಸುಂದರ ದೇಶ ನಿರ್ಮಾಣ ಮಾಡುವ ಪೌರಕಾರ್ಮಿಕರು ನೈಜ ಕಾಯಕಯೋಗಿಗಳು’ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.</p><p>ನಗರದ ವಾಲ್ಮೀಕಿ ಭವನದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p><p>‘ನಗರದಲ್ಲಿ 130 ಪೌರಕಾರ್ಮಿಕರ ಹುದ್ದೆ ಕಾಯಂ ಆಗಿದ್ದು, ಇನ್ನೂ 121 ಪೌರಕಾರ್ಮಿಕರನ್ನು ಕಾಯಂ ನೇಮಕ ಮಾಡಲಾಗುವುದು’ ಎಂದರು.</p><p>ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿ, ‘ನಿವೃತ್ತ ಪೌರಕಾರ್ಮಿಕರಿಗೆ ಪಿಂಚಣಿ, ಇನ್ನಿತರೆ ಸೌಲಭ್ಯಗಳ ಚೆಕ್ ನೀಡುವುದರಿಂದ ಅವರು ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಈ ನಿಯಮವನ್ನು ಇಲ್ಲಿಯೂ ಜಾರಿಗೊಳಿಸಲು ಆಯುಕ್ತರ ಜೊತೆ ಚರ್ಚಿಸಿದ್ದೇನೆ’ ಎಂದು ತಿಳಿಸಿದರು.</p><p>ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಮಾತನಾಡಿದರು. ಉಪಮೇಯರ್ ಡಿ.ಸುಕುಂ, ಸಫಾಯಿ ಕರ್ಮಚಾರಿ ನಿಗಮದ ಸದಸ್ಯ ಕಂದಕೂರು ರಾಮುಡು, ಮಾಜಿ ಮೇಯರ್ ರಾಜೇಶ್ವರಿ, ಉಪ ಆಯುಕ್ತ ನಂದೀಶ್, ಸ್ಥಾಯಿ ಸಮಿತಿಯ ಅಧ್ಯಕ್ಷೆ ಪದ್ಮರೋಜ ಇದ್ದರು. </p>.<p><strong>‘ಕಾಯಂಗೊಳಿಸಲು ಆಯ್ಕೆ ಪ್ರಕ್ರಿಯೆ’</strong></p><p>‘ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 452 ಕಾಯಂ ಪೌರಕಾರ್ಮಿಕರಿದ್ದು 183 ಪೌರಕಾರ್ಮಿಕರು ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಯಂ ಮತ್ತು ನೇರಗುತ್ತಿಗೆಯಡಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ₹2000 ಸಂಕಷ್ಟ ಭತ್ಯೆ ಹಾಗೂ ₹7000 ವಿಶೇಷ ಭತ್ಯೆ ನೀಡಲಾಗುತ್ತದೆ’ ಎಂದು ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಹೇಳಿದರು.</p><p>‘ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಪ್ರತಿ ವರ್ಷ 21 ದಿನಗಳ ರಜಾ ವೇತನ ಹಾಗೂ 10 ವರ್ಷಗಳಿಗೊಮ್ಮೆ ವೇತನ ಮುಂಬಡ್ತಿ ಸಹ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>