<p>ಬಳ್ಳಾರಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ಸಿ–ವಿಮ್ಸ್)ಕ್ಕೆ ದಾಖಲಾಗಿದ್ದ ಬಳ್ಳಾರಿ ಕೇಂದ್ರ ಕಾರಾಗೃಹದ ಸಜಾಬಂಧಿ ಹನುಮಂತು (25) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಪೋಕ್ಸೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ, ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂಕನಾಳು ಗ್ರಾಮದ ಹನುಮಂತುನನ್ನು ಜನವರಿಯಲ್ಲಿ ರಾಯಚೂರು ಜಿಲ್ಲೆಯಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಏಪ್ರಿಲ್ 29ರಂದು ಹೊಟ್ಟೆನೋವು ಉಲ್ಭಣಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ವಿಷಯವನ್ನು ನಮಗೆ ಪೊಲೀಸರು ತಿಳಿಸಲಿಲ್ಲ. ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದರು.</p>.<p>‘ನಮ್ಮ ಅಣ್ಣ ಮೃತಪಟ್ಟನೆಂದು ಮೇ 6ರಂದು ರಾತ್ರಿ 12ರ ಸುಮಾರಿಗೆ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ’ ಎಂದು ತಂಗಿ ಮರಿಯಮ್ಮ ತಿಳಿಸಿದರು. ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮರಿಯಮ್ಮನಹಳ್ಳಿ: ಸಮೀಪದ 114 ಡಣಾಪುರ ಬಳಿಯ ಬಿಎಂಎಂ ಇಸ್ಪಾತ್ ಕಂಪನಿಯ ಕಾರ್ಖಾನೆಯಲ್ಲಿ ಬಿಸಿಯಾದ ದ್ರವ ಸಿಡಿದು ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕ, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.</p>.<p>ಒಡಿಶಾ ಮೂಲದ ಕಾರ್ಮಿಕ ಲಾಲ್ ತೆಂಡು ಜೇನಾ (33) ಮೃತರು. ಈ ಕುರಿತು ಕಂಪನಿಯ ನಾಲ್ಕು ಜನರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-25-880995272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ಬಿಎಂಸಿಆರ್ಸಿ–ವಿಮ್ಸ್)ಕ್ಕೆ ದಾಖಲಾಗಿದ್ದ ಬಳ್ಳಾರಿ ಕೇಂದ್ರ ಕಾರಾಗೃಹದ ಸಜಾಬಂಧಿ ಹನುಮಂತು (25) ಎಂಬುವರು ಮೃತಪಟ್ಟಿದ್ದಾರೆ.</p>.<p>‘ಪೋಕ್ಸೊ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ, ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂಕನಾಳು ಗ್ರಾಮದ ಹನುಮಂತುನನ್ನು ಜನವರಿಯಲ್ಲಿ ರಾಯಚೂರು ಜಿಲ್ಲೆಯಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಏಪ್ರಿಲ್ 29ರಂದು ಹೊಟ್ಟೆನೋವು ಉಲ್ಭಣಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ವಿಷಯವನ್ನು ನಮಗೆ ಪೊಲೀಸರು ತಿಳಿಸಲಿಲ್ಲ. ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದರು.</p>.<p>‘ನಮ್ಮ ಅಣ್ಣ ಮೃತಪಟ್ಟನೆಂದು ಮೇ 6ರಂದು ರಾತ್ರಿ 12ರ ಸುಮಾರಿಗೆ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದಾರೆ’ ಎಂದು ತಂಗಿ ಮರಿಯಮ್ಮ ತಿಳಿಸಿದರು. ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮರಿಯಮ್ಮನಹಳ್ಳಿ: ಸಮೀಪದ 114 ಡಣಾಪುರ ಬಳಿಯ ಬಿಎಂಎಂ ಇಸ್ಪಾತ್ ಕಂಪನಿಯ ಕಾರ್ಖಾನೆಯಲ್ಲಿ ಬಿಸಿಯಾದ ದ್ರವ ಸಿಡಿದು ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕ, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.</p>.<p>ಒಡಿಶಾ ಮೂಲದ ಕಾರ್ಮಿಕ ಲಾಲ್ ತೆಂಡು ಜೇನಾ (33) ಮೃತರು. ಈ ಕುರಿತು ಕಂಪನಿಯ ನಾಲ್ಕು ಜನರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-25-880995272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>