<p>ಕುರುಗೋಡು: ಬಸವ ಕಲ್ಯಾಣದಲ್ಲಿ ಬಸವಣ್ಣನವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ಶಿವ ಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ತಹಶೀಲ್ದಾರ್ ನರಸಪ್ಪ ಅವರಿಗೆ ಮಂಗಳವಾರ ಸಲ್ಲಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಪಂಪಾಪತಿ ಮಾತನಾಡಿ, ‘ಬಸವ ಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆಯ ಬಳಿ ಯ ಅರಿವಿನ ಗುಹೆ ಯಲ್ಲಿ ವಿಶ್ವಗುರು ಬಸವಣ್ಣ ಅವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಬದಲು ಶಿವಶರಣೆ ಲಿಂಗಮಾತೆ ಅವರ ಮೂರ್ತಿ ಸ್ಥಾಪನೆ ಮಾಡಿದ್ದಾರೆ. ಇದರಿಂದ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ’ ಎಂದರು.</p>.<p>‘ಸರ್ಕಾರ ಮಧ್ಯಪ್ರವೇಶಿಸಿ ಬಸವಣ್ಣನವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಿ ನಮ್ಮ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಮಾಜಕ್ಕೆ ನ್ಯಾಯದೊರಕಿಸಿಕೊಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು</p>.<p>ಮನವಿ ಸ್ವೀಕರಿಸಿದ ನರಸಪ್ಪ ತಹಶೀಲ್ದಾರ್, ಮನವಿಯನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಎಚ್.ಮಂಜುನಾಥ, ಎಚ್.ಶೇಖ ರಪ್ಪ, ಎಚ್.ನಾಗರಾಜ, ಶೇಖರಪ್ಪ, ಎಚ್.ವೀರೇಶ್ ಮತ್ತು ಎಚ್.ರಾಜಶೇಖರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-25-1134103187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರುಗೋಡು: ಬಸವ ಕಲ್ಯಾಣದಲ್ಲಿ ಬಸವಣ್ಣನವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ಶಿವ ಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ತಹಶೀಲ್ದಾರ್ ನರಸಪ್ಪ ಅವರಿಗೆ ಮಂಗಳವಾರ ಸಲ್ಲಿಸಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಪಂಪಾಪತಿ ಮಾತನಾಡಿ, ‘ಬಸವ ಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆಯ ಬಳಿ ಯ ಅರಿವಿನ ಗುಹೆ ಯಲ್ಲಿ ವಿಶ್ವಗುರು ಬಸವಣ್ಣ ಅವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಬದಲು ಶಿವಶರಣೆ ಲಿಂಗಮಾತೆ ಅವರ ಮೂರ್ತಿ ಸ್ಥಾಪನೆ ಮಾಡಿದ್ದಾರೆ. ಇದರಿಂದ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ’ ಎಂದರು.</p>.<p>‘ಸರ್ಕಾರ ಮಧ್ಯಪ್ರವೇಶಿಸಿ ಬಸವಣ್ಣನವರ ಪಕ್ಕದಲ್ಲಿ ಹಡಪದ ಅಪ್ಪಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಿ ನಮ್ಮ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸಮಾಜಕ್ಕೆ ನ್ಯಾಯದೊರಕಿಸಿಕೊಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು</p>.<p>ಮನವಿ ಸ್ವೀಕರಿಸಿದ ನರಸಪ್ಪ ತಹಶೀಲ್ದಾರ್, ಮನವಿಯನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಎಚ್.ಮಂಜುನಾಥ, ಎಚ್.ಶೇಖ ರಪ್ಪ, ಎಚ್.ನಾಗರಾಜ, ಶೇಖರಪ್ಪ, ಎಚ್.ವೀರೇಶ್ ಮತ್ತು ಎಚ್.ರಾಜಶೇಖರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-25-1134103187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>