<p>ಬಳ್ಳಾರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಂಸದ ಈ. ತುಕಾರಾಂ ಅವರ ಕಚೇರಿ ಎದುರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಪ್ರತಿಭಟನೆಯ ಬಳಿಕ ಸಂಸದ ಈ. ತುಕಾರಾಂ ಮನವಿ ಪತ್ರ ಸಲ್ಲಿಸಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆ ಆಧಾರದ ಮೇಲೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ನ್ಯಾ. ಎಚ್.ಎನ್. ನಾಗಮೋಹನ ದಾಸ್ ಆಯೋಗವು ನೀಡಿದ ವರದಿಯ ಪ್ರಕಾರ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಹಾಗೂ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಲಾಗಿದೆ. ಈ ವರದಿಯನ್ನು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.</p>.<p>ಕರ್ನಾಟಕ ವಿಧಾನಸಭೆಯ ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿ, ಸಂವಿಧಾನದ 9ನೇ ಅನುಬಂಧಕ್ಕೆ ಸೇರಿಸುವಂತೆ ಒತ್ತಾಯಿಸಲಾಯಿತು.</p>.<p>ಇದೇ ವೇಳೆ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಮನವಿ ಮಾಡಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜೆ. ಸತ್ಯಬಾಬು, ಎಚ್. ತಿಪ್ಪಯ್ಯ, ಜೆ. ಚಂದ್ರಕುಮಾರಿ, ವಿ.ಎಸ್. ಶಿವಶಂಕರ್, ಜೆ. ಚೆನ್ನಬಸಯ್ಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-25-597305794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಂಸದ ಈ. ತುಕಾರಾಂ ಅವರ ಕಚೇರಿ ಎದುರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷದಿಂದ ಸೋಮವಾರ ಪ್ರತಿಭಟನೆ ನಡೆಯಿತು.</p>.<p>ಪ್ರತಿಭಟನೆಯ ಬಳಿಕ ಸಂಸದ ಈ. ತುಕಾರಾಂ ಮನವಿ ಪತ್ರ ಸಲ್ಲಿಸಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆ ಆಧಾರದ ಮೇಲೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ನ್ಯಾ. ಎಚ್.ಎನ್. ನಾಗಮೋಹನ ದಾಸ್ ಆಯೋಗವು ನೀಡಿದ ವರದಿಯ ಪ್ರಕಾರ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಹಾಗೂ ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಲಾಗಿದೆ. ಈ ವರದಿಯನ್ನು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.</p>.<p>ಕರ್ನಾಟಕ ವಿಧಾನಸಭೆಯ ಈ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿ, ಸಂವಿಧಾನದ 9ನೇ ಅನುಬಂಧಕ್ಕೆ ಸೇರಿಸುವಂತೆ ಒತ್ತಾಯಿಸಲಾಯಿತು.</p>.<p>ಇದೇ ವೇಳೆ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಮನವಿ ಮಾಡಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜೆ. ಸತ್ಯಬಾಬು, ಎಚ್. ತಿಪ್ಪಯ್ಯ, ಜೆ. ಚಂದ್ರಕುಮಾರಿ, ವಿ.ಎಸ್. ಶಿವಶಂಕರ್, ಜೆ. ಚೆನ್ನಬಸಯ್ಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-25-597305794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>