<p><strong>ಬಳ್ಳಾರಿ:</strong> ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ. </p><p>ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಇವರೆಲ್ಲರೂ 9ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. </p><p>ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ.</p><p>ವಿಮ್ಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ಬಾಲಕನ ತಂದೆ ಲಕ್ಷ್ಮೀಕಾಂತ, 'ತಡರಾತ್ರಿ ಹಾಸ್ಟೆಲ್ನಿಂದ ಕರೆ ಬಂತು. ನಿಮ್ಮ ಮಗ ಗಂಭೀರಗೊಂಡಿದ್ದಾನೆ ಎಂದು ತಿಳಿಸಲಾಯಿತು. ಬಳ್ಳಾರಿಗೆ ಬಂದು ನೋಡಿದಾಗ ಮಗ ಮೃತಪಟ್ಟಿದ್ದ' ಎಂದು ತಿಳಿಸಿದ್ದಾರೆ.</p><p>ಬ್ರೂಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ. </p><p>ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಇವರೆಲ್ಲರೂ 9ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. </p><p>ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ.</p><p>ವಿಮ್ಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ಬಾಲಕನ ತಂದೆ ಲಕ್ಷ್ಮೀಕಾಂತ, 'ತಡರಾತ್ರಿ ಹಾಸ್ಟೆಲ್ನಿಂದ ಕರೆ ಬಂತು. ನಿಮ್ಮ ಮಗ ಗಂಭೀರಗೊಂಡಿದ್ದಾನೆ ಎಂದು ತಿಳಿಸಲಾಯಿತು. ಬಳ್ಳಾರಿಗೆ ಬಂದು ನೋಡಿದಾಗ ಮಗ ಮೃತಪಟ್ಟಿದ್ದ' ಎಂದು ತಿಳಿಸಿದ್ದಾರೆ.</p><p>ಬ್ರೂಸ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>