<p><strong>ಬಳ್ಳಾರಿ</strong>: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಸಂಚಾರ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ವಾಹನ ಚಾಲಕರು ನಿಧಾನವಾಗಿ ವಾಹನ ಚಲಾಯಿಸಬೇಕು ಎಂದು ಬಳ್ಳಾರಿಯ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. </p>.<p>2026ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆ.26ರ ಬೆಳಿಗ್ಗೆ 6 ರಿಂದ ಫೆ.28ರ ಬೆಳಿಗ್ಗೆ 6 ಗಂಟೆಯವರೆಗೆ 3 ದಿನ ನಡೆಯಲಿದೆ. ಇದಕ್ಕಾಗಿ ರಸ್ತೆಗಳ ಮೇಲೆ ಕ್ಯಾಮೆರಾ ಸಮೇತ ಸಮೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.</p>.<p>ಸಮೀಕ್ಷಾ ಕೇಂದ್ರಗಳಿದ್ದಲ್ಲಿ ‘ವಾಹನ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ’ ಎಂದು ಸೂಚನಾ ಫಲಕಗಳನ್ನು ಅಳವಡಿಸಲಾಗಿರುತ್ತದೆ.</p>.<p>ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲ ಅಳತೆ ನಿರ್ಧರಿಸಲು, ರಸ್ತೆಗಳ ಮೇಲ್ದರ್ಜೆಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.</p>.<p>ರಸ್ತೆ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಸಂಚಾರ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಎಲ್ಲಾ ವಾಹನ ಚಾಲಕರು ನಿಧಾನವಾಗಿ ವಾಹನ ಚಲಾಯಿಸಬೇಕು ಎಂದು ಬಳ್ಳಾರಿಯ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. </p>.<p>2026ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಫೆ.26ರ ಬೆಳಿಗ್ಗೆ 6 ರಿಂದ ಫೆ.28ರ ಬೆಳಿಗ್ಗೆ 6 ಗಂಟೆಯವರೆಗೆ 3 ದಿನ ನಡೆಯಲಿದೆ. ಇದಕ್ಕಾಗಿ ರಸ್ತೆಗಳ ಮೇಲೆ ಕ್ಯಾಮೆರಾ ಸಮೇತ ಸಮೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.</p>.<p>ಸಮೀಕ್ಷಾ ಕೇಂದ್ರಗಳಿದ್ದಲ್ಲಿ ‘ವಾಹನ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ’ ಎಂದು ಸೂಚನಾ ಫಲಕಗಳನ್ನು ಅಳವಡಿಸಲಾಗಿರುತ್ತದೆ.</p>.<p>ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ತೀವ್ರತೆ ಕಂಡುಹಿಡಿಯುವುದಕ್ಕೆ ರಸ್ತೆಗಳ ಅಗಲ ಅಳತೆ ನಿರ್ಧರಿಸಲು, ರಸ್ತೆಗಳ ಮೇಲ್ದರ್ಜೆಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.</p>.<p>ರಸ್ತೆ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>