<p><strong>ಬಳ್ಳಾರಿ:</strong> ಬಳ್ಳಾರಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಾಮೀಣ ಗ್ರಂಥಾಲಯಗಳನ್ನು ಸ್ಥಾಪಿಸುವ ಎರಡು ಪ್ರಮುಖ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿರುವ ‘ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ)’ವು ಗಣಿ ಬಾಧಿತ ಪ್ರದೇಶಗಳಲ್ಲಿ ಗ್ರಾಮೀಣ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಪ್ರಯತ್ನಕ್ಕೆ ಬೆಂಬಲ ನೀಡಿದೆ.</p>.<p>ಕೆಎಂಇಆರ್ಸಿಯ ‘ಗಣಿಗಾರಿಕೆ ಪರಿಣಾಮ ವಲಯದ ಸಮಗ್ರ ಪರಿಸರ ಯೋಜನೆ (ಸಿಇಪಿಎಂಐಝಡ್)’ಗಳ 27ನೇ ಸಭೆಯಲ್ಲಿ ₹14.40 ಕೋಟಿ ವೆಚ್ಚದ ಈ ಎರಡು ಪ್ರಸ್ತಾವನೆಗಳಿಗೆ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರ ನೇತೃತ್ವದ ಮೇಲುಸ್ತುವಾರಿ ಪ್ರಾಧಿಕಾರ ಸಮ್ಮತಿ ನೀಡಿದೆ.</p>.<p>ಮಾರ್ಚ್ 11ರಂದು ನಡೆದ ಮೇಲುಸ್ತುವಾರಿ ಪ್ರಾಧಿಕಾರದ ಸಭೆಯ ನಡಾವಳಿಗಳು ‘ಪ್ರಜಾವಾಣಿ’ಗೆ ಲಭ್ಯವಾಗಿದ್ದು, ಸಭೆಯಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆಯಾಗಿರುವುದು ತಿಳಿದುಬಂದಿದೆ.</p>.<p>ಗ್ರಾಮೀಣ ಡಿಜಿಟಲ್ ಗ್ರಂಥಾಲಯ ಯೋಜನೆಯನ್ನು ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್’ ಇಲಾಖೆ ಜಾರಿಗೆ ತರುತ್ತಿದೆ. ಬಳ್ಳಾರಿ ಮತ್ತು ಸಂಡೂರು ತಾಲ್ಲೂಕುಗಳಲ್ಲಿ ಒಟ್ಟು 31 ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ಸಂಕೀರ್ಣಗಳನ್ನು ನಿರ್ಮಿಸುವುದಾಗಿ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.</p>.<p>₹4.90 ಕೋಟಿ ವೆಚ್ಚದಲ್ಲಿ ಬಳ್ಳಾರಿ ತಾಲ್ಲೂಕಿನಲ್ಲಿ 12 ಗ್ರಂಥಾಲಯಗಳು, ಸಂಡೂರು ತಾಲ್ಲೂಕಿನಲ್ಲಿ ₹9.50 ಕೋಟಿ ವೆಚ್ಚದಲ್ಲಿ 19 ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸುವುದಾಗಿ ಇಲಾಖೆ ತಿಳಿಸಿದೆ.</p>.<p>ಗ್ರಂಥಾಲಯಗಳ ಜೊತೆಗೆ ಓದುವ ಕೊಠಡಿ, ಕಂಪ್ಯೂಟರ್ ಲ್ಯಾಬ್, ಶಿಶುವಿಹಾರ, ಉದ್ಯಾನ, ಪುಸ್ತಕ, ಡಿಜಿಟಲ್ ಕಲಿಕಾ ಪರಿಕರ, ಪೀಠೋಪಕರಣ ಮತ್ತು ಒಳಾಂಗಣ ಆಟೋಪಕರಣಗಳನ್ನು ಯೋಜನೆ ಒಳಗೊಂಡಿದೆ.</p>.<p>ಜಿಲ್ಲೆಗೆ ವಿಸ್ತರಣೆ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಯೋಜನೆಯನ್ನು ವಿಸ್ತರಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದ್ದು, ಗಣಿಗಾರಿಕೆ ನಡೆಯದ ಜಿಲ್ಲೆಯ ಇತರ ತಾಲ್ಲೂಕುಗಳಿಗೂ ಇದೇ ರೀತಿಯ ಸವಲತ್ತು ಒದಗಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಸಭೆಯಲ್ಲಿ ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೇಲುಸ್ತುವಾರಿ ಪ್ರಾಧಿಕಾರ ಜಿಲ್ಲೆಯ ಇತರ ತಾಲ್ಲೂಕುಗಳಿಗೂ ಹೆಚ್ಚುವರಿ ಪ್ರಸ್ತಾವನೆಗಳನ್ನು ಸಲ್ಲಿಸಲು ಅನುಮತಿ ನೀಡಿತು.</p>.<p>ಗ್ರಾಮೀಣ ಡಿಜಿಟಲ್ ಗ್ರಂಥಾಲಯಗಳ ಅಭಿವೃದ್ಧಿ ಕುರಿತ ವಿವರವಾದ ಚರ್ಚೆಯ ಬಳಿಕ ಮೇಲುಸ್ತುವಾರಿ ಪ್ರಾಧಿಕಾರವು ಎರಡೂ ಪ್ರಸ್ತಾವನೆಗಳನ್ನು ಅನುಮೋದಿಸಿತು.</p>.<p><strong>ಯೋಜನೆಗಳ ಮೇಲ್ವಿಚಾರಣೆಗೆ ಏಜೆನ್ಸಿ</strong></p><p>‘ಗಣಿಗಾರಿಕೆ ಪರಿಣಾಮ ವಲಯದ ಸಮಗ್ರ ಪರಿಸರ ಯೋಜನೆಯ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ತೃತೀಯ ಪಕ್ಷದ ಮೇಲ್ವಿಚಾರಣಾ ವ್ಯವಸ್ಥೆಯನ್ನು ಜಾರಿಗೆ ತಂದಿರುವುದಾಗಿ ಕೆಎಂಇಆರ್ಸಿ ವ್ಯವಸ್ಥಾಪಕ ನಿರ್ದೇಶಕ ಸಂಜಯ ಬಿಜ್ಜೂರು ಸಭೆಗೆ ತಿಳಿಸಿದರು.</p><p>‘ಸುಪ್ರೀಂ ಕೋರ್ಟ್ ಮತ್ತು ಕೇಂದ್ರದ ಉನ್ನತಾಧಿಕಾರ ಸಮಿತಿ ಶಿಫಾರಸಿನಂತೆ ನೇಮಕಗೊಂಡಿರುವ ಈ ಏಜೆನ್ಸಿಗಳು (ಬ್ಯೂರೋ ವೆರಿಟಾಸ್ ಮತ್ತು ಗ್ರೀನ್ ಡಿಸೈನ್ ಆ್ಯಂಡ್ ಎಂಜಿನಿಯರಿಂಗ್) ಕಾಮಗಾರಿಗಳ ಮೌಲ್ಯಮಾಪನದಲ್ಲಿ ತೊಡಗಿವೆ. ಈ ಸಂಸ್ಥೆಗಳು ಈ ವರ್ಷ 13 ಕಾಮಗಾರಿಗಳನ್ನು ತಪಾಸಣೆ ಮಾಡಿವೆ. ನ್ಯೂನತೆಗಳನ್ನು ಪರಿಹರಿಸಲು ಕಟ್ಟುನಿಟ್ಟಾದ ಕಾರ್ಯವಿಧಾನಗಳನ್ನು ಸೂಚಿಸಿವೆ’ ಎಂದು ತಿಳಿಸಿದರು.</p><p>ಅಲ್ಲದೆ, ಯೋಜನೆಗಳನ್ನು ಜಾರಿಗೊಳಿಸುವಾಗ ಈ ಸ್ವತಂತ್ರ ಏಜೆನ್ಸಿಗಳ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸಬೇಕೆಂದು ಇಲಾಖೆಗಳಿಗೆ ತಿಳಿಸಿರುವುದಾಗಿ ಮೇಲುಸ್ತುವಾರಿ ಪ್ರಾಧಿಕಾರದ ಗಮನಕ್ಕೆ ತಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಾಮೀಣ ಗ್ರಂಥಾಲಯಗಳನ್ನು ಸ್ಥಾಪಿಸುವ ಎರಡು ಪ್ರಮುಖ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿರುವ ‘ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್ಸಿ)’ವು ಗಣಿ ಬಾಧಿತ ಪ್ರದೇಶಗಳಲ್ಲಿ ಗ್ರಾಮೀಣ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಪ್ರಯತ್ನಕ್ಕೆ ಬೆಂಬಲ ನೀಡಿದೆ.</p>.<p>ಕೆಎಂಇಆರ್ಸಿಯ ‘ಗಣಿಗಾರಿಕೆ ಪರಿಣಾಮ ವಲಯದ ಸಮಗ್ರ ಪರಿಸರ ಯೋಜನೆ (ಸಿಇಪಿಎಂಐಝಡ್)’ಗಳ 27ನೇ ಸಭೆಯಲ್ಲಿ ₹14.40 ಕೋಟಿ ವೆಚ್ಚದ ಈ ಎರಡು ಪ್ರಸ್ತಾವನೆಗಳಿಗೆ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರ ನೇತೃತ್ವದ ಮೇಲುಸ್ತುವಾರಿ ಪ್ರಾಧಿಕಾರ ಸಮ್ಮತಿ ನೀಡಿದೆ.</p>.<p>ಮಾರ್ಚ್ 11ರಂದು ನಡೆದ ಮೇಲುಸ್ತುವಾರಿ ಪ್ರಾಧಿಕಾರದ ಸಭೆಯ ನಡಾವಳಿಗಳು ‘ಪ್ರಜಾವಾಣಿ’ಗೆ ಲಭ್ಯವಾಗಿದ್ದು, ಸಭೆಯಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆಯಾಗಿರುವುದು ತಿಳಿದುಬಂದಿದೆ.</p>.<p>ಗ್ರಾಮೀಣ ಡಿಜಿಟಲ್ ಗ್ರಂಥಾಲಯ ಯೋಜನೆಯನ್ನು ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್’ ಇಲಾಖೆ ಜಾರಿಗೆ ತರುತ್ತಿದೆ. ಬಳ್ಳಾರಿ ಮತ್ತು ಸಂಡೂರು ತಾಲ್ಲೂಕುಗಳಲ್ಲಿ ಒಟ್ಟು 31 ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ಸಂಕೀರ್ಣಗಳನ್ನು ನಿರ್ಮಿಸುವುದಾಗಿ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.</p>.<p>₹4.90 ಕೋಟಿ ವೆಚ್ಚದಲ್ಲಿ ಬಳ್ಳಾರಿ ತಾಲ್ಲೂಕಿನಲ್ಲಿ 12 ಗ್ರಂಥಾಲಯಗಳು, ಸಂಡೂರು ತಾಲ್ಲೂಕಿನಲ್ಲಿ ₹9.50 ಕೋಟಿ ವೆಚ್ಚದಲ್ಲಿ 19 ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸುವುದಾಗಿ ಇಲಾಖೆ ತಿಳಿಸಿದೆ.</p>.<p>ಗ್ರಂಥಾಲಯಗಳ ಜೊತೆಗೆ ಓದುವ ಕೊಠಡಿ, ಕಂಪ್ಯೂಟರ್ ಲ್ಯಾಬ್, ಶಿಶುವಿಹಾರ, ಉದ್ಯಾನ, ಪುಸ್ತಕ, ಡಿಜಿಟಲ್ ಕಲಿಕಾ ಪರಿಕರ, ಪೀಠೋಪಕರಣ ಮತ್ತು ಒಳಾಂಗಣ ಆಟೋಪಕರಣಗಳನ್ನು ಯೋಜನೆ ಒಳಗೊಂಡಿದೆ.</p>.<p>ಜಿಲ್ಲೆಗೆ ವಿಸ್ತರಣೆ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಯೋಜನೆಯನ್ನು ವಿಸ್ತರಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದ್ದು, ಗಣಿಗಾರಿಕೆ ನಡೆಯದ ಜಿಲ್ಲೆಯ ಇತರ ತಾಲ್ಲೂಕುಗಳಿಗೂ ಇದೇ ರೀತಿಯ ಸವಲತ್ತು ಒದಗಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಸಭೆಯಲ್ಲಿ ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೇಲುಸ್ತುವಾರಿ ಪ್ರಾಧಿಕಾರ ಜಿಲ್ಲೆಯ ಇತರ ತಾಲ್ಲೂಕುಗಳಿಗೂ ಹೆಚ್ಚುವರಿ ಪ್ರಸ್ತಾವನೆಗಳನ್ನು ಸಲ್ಲಿಸಲು ಅನುಮತಿ ನೀಡಿತು.</p>.<p>ಗ್ರಾಮೀಣ ಡಿಜಿಟಲ್ ಗ್ರಂಥಾಲಯಗಳ ಅಭಿವೃದ್ಧಿ ಕುರಿತ ವಿವರವಾದ ಚರ್ಚೆಯ ಬಳಿಕ ಮೇಲುಸ್ತುವಾರಿ ಪ್ರಾಧಿಕಾರವು ಎರಡೂ ಪ್ರಸ್ತಾವನೆಗಳನ್ನು ಅನುಮೋದಿಸಿತು.</p>.<p><strong>ಯೋಜನೆಗಳ ಮೇಲ್ವಿಚಾರಣೆಗೆ ಏಜೆನ್ಸಿ</strong></p><p>‘ಗಣಿಗಾರಿಕೆ ಪರಿಣಾಮ ವಲಯದ ಸಮಗ್ರ ಪರಿಸರ ಯೋಜನೆಯ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ತೃತೀಯ ಪಕ್ಷದ ಮೇಲ್ವಿಚಾರಣಾ ವ್ಯವಸ್ಥೆಯನ್ನು ಜಾರಿಗೆ ತಂದಿರುವುದಾಗಿ ಕೆಎಂಇಆರ್ಸಿ ವ್ಯವಸ್ಥಾಪಕ ನಿರ್ದೇಶಕ ಸಂಜಯ ಬಿಜ್ಜೂರು ಸಭೆಗೆ ತಿಳಿಸಿದರು.</p><p>‘ಸುಪ್ರೀಂ ಕೋರ್ಟ್ ಮತ್ತು ಕೇಂದ್ರದ ಉನ್ನತಾಧಿಕಾರ ಸಮಿತಿ ಶಿಫಾರಸಿನಂತೆ ನೇಮಕಗೊಂಡಿರುವ ಈ ಏಜೆನ್ಸಿಗಳು (ಬ್ಯೂರೋ ವೆರಿಟಾಸ್ ಮತ್ತು ಗ್ರೀನ್ ಡಿಸೈನ್ ಆ್ಯಂಡ್ ಎಂಜಿನಿಯರಿಂಗ್) ಕಾಮಗಾರಿಗಳ ಮೌಲ್ಯಮಾಪನದಲ್ಲಿ ತೊಡಗಿವೆ. ಈ ಸಂಸ್ಥೆಗಳು ಈ ವರ್ಷ 13 ಕಾಮಗಾರಿಗಳನ್ನು ತಪಾಸಣೆ ಮಾಡಿವೆ. ನ್ಯೂನತೆಗಳನ್ನು ಪರಿಹರಿಸಲು ಕಟ್ಟುನಿಟ್ಟಾದ ಕಾರ್ಯವಿಧಾನಗಳನ್ನು ಸೂಚಿಸಿವೆ’ ಎಂದು ತಿಳಿಸಿದರು.</p><p>ಅಲ್ಲದೆ, ಯೋಜನೆಗಳನ್ನು ಜಾರಿಗೊಳಿಸುವಾಗ ಈ ಸ್ವತಂತ್ರ ಏಜೆನ್ಸಿಗಳ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸಬೇಕೆಂದು ಇಲಾಖೆಗಳಿಗೆ ತಿಳಿಸಿರುವುದಾಗಿ ಮೇಲುಸ್ತುವಾರಿ ಪ್ರಾಧಿಕಾರದ ಗಮನಕ್ಕೆ ತಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>