<p><strong>ಬಳ್ಳಾರಿ</strong>: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ಮಾಹಿತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ್ದು, ಸಂಡೂರು ತಾಲ್ಲೂಕಿನಲ್ಲಿ ಮೂರು ಪೋಕ್ಸೊ ಪ್ರಕರಣ ದಾಖಲಾಗಿದೆ.</p>.<p>ಚೋರನೂರು ಠಾಣೆ ವ್ಯಾಪ್ತಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಹೊನ್ನೂರು ಸ್ವಾಮಿ ಎಂಬಾತ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.</p>.<p>ಸಂಡೂರು ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅನಂತಕುಮಾರ ಎಂಬಾತನನ್ನು ಬಂಧಿಸಲಾಗಿದೆ. ಈತನ ಮೇಲೆ ಪೋಕ್ಸೊ ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.<p><strong>ವಂಚನೆ:</strong> ಬಳ್ಳಾರಿ ತಾಲ್ಲೂಕಿನ ಬಿಸಿಲಹಳ್ಳಿ ಗ್ರಾಮದ ಮಂಜುನಾಥ್ ಎಂಬುವವರಿಗೆ ಫೇಸ್ಬುಕ್ ಮೂಲಕ ಸಂಪರ್ಕಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ‘ಪಿಎಂ-ಮುದ್ರಾ’ ಯೋಜನೆ ಅಡಿಯಲ್ಲಿ ಶೇ 30ರಷ್ಟು ಸಬ್ಸಿಡಿಯೊಂದಿಗೆ ₹20 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ, ವಂಚಿಸಿದ್ದಾರೆ. ಸಂತ್ರಸ್ತರಿಂದ ಯುಪಿಐ ಮೂಲಕ ಒಟ್ಟು ₹2,34,139 ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಬಳ್ಳಾರಿ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಅಪಘಾತದಲ್ಲಿ ವೃದ್ಧ ಸಾವು:</strong> ಮೇ 10ರಂದು ಮಧ್ಯಾಹ್ನ ತೆಕ್ಕಲಕೋಟೆ-ಸಿರಿಗೇರಿ ರಸ್ತೆಯಲ್ಲಿ ಸಂಭವಿಸಿದ ಆಟೊ ಅಪಘಾತದಲ್ಲಿ ಅಂಜಿನಪ್ಪ (65) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಅಕ್ರಮ ಸ್ಫೋಟಕ:</strong> ಕುರುಗೋಡು ಸಮೀಪದ ದಮ್ಮೂರು ಗ್ರಾಮದ ಹೊಲವೊಂದರಲ್ಲಿ ಪರವಾನಗಿ ಇಲ್ಲದೆ ಬಂಡೆ ಸ್ಫೋಟಿಸಲು ಸಿದ್ಧತೆ ನಡೆಸಿದ್ದ ಕವಿರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ, ಸ್ಫೋಟಕಗಳನ್ನು ಜಪ್ತು ಮಾಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-25-2069124574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ಮಾಹಿತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ್ದು, ಸಂಡೂರು ತಾಲ್ಲೂಕಿನಲ್ಲಿ ಮೂರು ಪೋಕ್ಸೊ ಪ್ರಕರಣ ದಾಖಲಾಗಿದೆ.</p>.<p>ಚೋರನೂರು ಠಾಣೆ ವ್ಯಾಪ್ತಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಹೊನ್ನೂರು ಸ್ವಾಮಿ ಎಂಬಾತ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.</p>.<p>ಸಂಡೂರು ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಅನಂತಕುಮಾರ ಎಂಬಾತನನ್ನು ಬಂಧಿಸಲಾಗಿದೆ. ಈತನ ಮೇಲೆ ಪೋಕ್ಸೊ ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.</p>.<p><strong>ವಂಚನೆ:</strong> ಬಳ್ಳಾರಿ ತಾಲ್ಲೂಕಿನ ಬಿಸಿಲಹಳ್ಳಿ ಗ್ರಾಮದ ಮಂಜುನಾಥ್ ಎಂಬುವವರಿಗೆ ಫೇಸ್ಬುಕ್ ಮೂಲಕ ಸಂಪರ್ಕಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ‘ಪಿಎಂ-ಮುದ್ರಾ’ ಯೋಜನೆ ಅಡಿಯಲ್ಲಿ ಶೇ 30ರಷ್ಟು ಸಬ್ಸಿಡಿಯೊಂದಿಗೆ ₹20 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ, ವಂಚಿಸಿದ್ದಾರೆ. ಸಂತ್ರಸ್ತರಿಂದ ಯುಪಿಐ ಮೂಲಕ ಒಟ್ಟು ₹2,34,139 ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಬಳ್ಳಾರಿ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಅಪಘಾತದಲ್ಲಿ ವೃದ್ಧ ಸಾವು:</strong> ಮೇ 10ರಂದು ಮಧ್ಯಾಹ್ನ ತೆಕ್ಕಲಕೋಟೆ-ಸಿರಿಗೇರಿ ರಸ್ತೆಯಲ್ಲಿ ಸಂಭವಿಸಿದ ಆಟೊ ಅಪಘಾತದಲ್ಲಿ ಅಂಜಿನಪ್ಪ (65) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಅಕ್ರಮ ಸ್ಫೋಟಕ:</strong> ಕುರುಗೋಡು ಸಮೀಪದ ದಮ್ಮೂರು ಗ್ರಾಮದ ಹೊಲವೊಂದರಲ್ಲಿ ಪರವಾನಗಿ ಇಲ್ಲದೆ ಬಂಡೆ ಸ್ಫೋಟಿಸಲು ಸಿದ್ಧತೆ ನಡೆಸಿದ್ದ ಕವಿರಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ, ಸ್ಫೋಟಕಗಳನ್ನು ಜಪ್ತು ಮಾಡಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-25-2069124574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>