<p>ಸಿರುಗುಪ್ಪ: ಇಲ್ಲಿನ 24ನೇ ವಾರ್ಡನ್ ಹುಚ್ಚೀರಪ್ಪ ಮಠದ ಬಳಿ ಮನೆಯಲ್ಲಿ ಕಟ್ಟಿದ್ದ ಸೀರೆಯ ಜೋಳಿಗೆಗೆ ಸಿಲುಕಿ 11 ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಮೃತಪಟ್ಟಿದ್ದು, ಶವಪರೀಕ್ಷೆ ನಡೆಸಲು ವೈದ್ಯರು ಹಿಂದೇಟು ಹಾಕಿದ್ದರಿಂದ ಗೊಂದಲ ಉಂಟಾಯಿತು.</p>.<p>ಗೋವಿಂದಪ್ಪ ಅವರ ಪುತ್ರಿ ನಂದಿತಾ ಮೃತ ಬಾಲಕಿ. ಶನಿವಾರ ಸಂಜೆ 5 ಗಂಟೆಗೆ ಮೃತಪಟ್ಟಿದ್ದ ಬಾಲಕಿಯ ಶವವನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. 11ವರ್ಷದ ಒಳಗಿನ ಬಾಲಕಿಯಾಗಿರುವುದರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ, ಬಳ್ಳಾರಿಯ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ವಿಮ್ಸ್)ಕ್ಕೆ ತೆಗೆದುಕೊಂಡು ಹೋಗುವಂತೆ ಕರ್ತವ್ಯ ನಿರತ ವೈದ್ಯೆ ಅಮೀನಾ ಹೇಳಿದರು.</p>.<p>‘ಬಾಲಕಿ ಆಟವಾಡುತ್ತ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಮಗುವಿನ ಮರಣೋತ್ತರ ಶಪ ಪರೀಕ್ಷೆ ಮಾಡಿಕೊಡುವಂತೆ ಮನವಿ ಪತ್ರ ನೀಡಿದರೂ ಶವ ಪರೀಕ್ಷೆ ಮಾಡದೇ ಆಸ್ಪತ್ರೆಯ ವೈದ್ಯಾಧಿಕಾರಿ ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.</p>.<p>ಕಡೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗೆ ವಾಸ್ತವ ತಿಳಿಸಿದ ಬಳಿಕ ಶವ ಪರೀಕ್ಷೆ ಮಾಡಲು ವೈದ್ಯರು ಒಪ್ಪಿದ್ದಾರೆ ಎಂದು ಸಿಪಿಐ ಹನುಮಂತಪ್ಪ ಹೇಳಿದರು. ಶವ ಪರೀಕ್ಷೆ ವಿಳಂಬವಾದ ಕಾರಣ ಆಸ್ಪತ್ರೆಯ ಬಳಿ ನೂರಾರು ಮಂದಿ ಜಮಾಯಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-25-1253471042</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ: ಇಲ್ಲಿನ 24ನೇ ವಾರ್ಡನ್ ಹುಚ್ಚೀರಪ್ಪ ಮಠದ ಬಳಿ ಮನೆಯಲ್ಲಿ ಕಟ್ಟಿದ್ದ ಸೀರೆಯ ಜೋಳಿಗೆಗೆ ಸಿಲುಕಿ 11 ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಮೃತಪಟ್ಟಿದ್ದು, ಶವಪರೀಕ್ಷೆ ನಡೆಸಲು ವೈದ್ಯರು ಹಿಂದೇಟು ಹಾಕಿದ್ದರಿಂದ ಗೊಂದಲ ಉಂಟಾಯಿತು.</p>.<p>ಗೋವಿಂದಪ್ಪ ಅವರ ಪುತ್ರಿ ನಂದಿತಾ ಮೃತ ಬಾಲಕಿ. ಶನಿವಾರ ಸಂಜೆ 5 ಗಂಟೆಗೆ ಮೃತಪಟ್ಟಿದ್ದ ಬಾಲಕಿಯ ಶವವನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. 11ವರ್ಷದ ಒಳಗಿನ ಬಾಲಕಿಯಾಗಿರುವುದರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ, ಬಳ್ಳಾರಿಯ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ವಿಮ್ಸ್)ಕ್ಕೆ ತೆಗೆದುಕೊಂಡು ಹೋಗುವಂತೆ ಕರ್ತವ್ಯ ನಿರತ ವೈದ್ಯೆ ಅಮೀನಾ ಹೇಳಿದರು.</p>.<p>‘ಬಾಲಕಿ ಆಟವಾಡುತ್ತ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಮಗುವಿನ ಮರಣೋತ್ತರ ಶಪ ಪರೀಕ್ಷೆ ಮಾಡಿಕೊಡುವಂತೆ ಮನವಿ ಪತ್ರ ನೀಡಿದರೂ ಶವ ಪರೀಕ್ಷೆ ಮಾಡದೇ ಆಸ್ಪತ್ರೆಯ ವೈದ್ಯಾಧಿಕಾರಿ ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.</p>.<p>ಕಡೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗೆ ವಾಸ್ತವ ತಿಳಿಸಿದ ಬಳಿಕ ಶವ ಪರೀಕ್ಷೆ ಮಾಡಲು ವೈದ್ಯರು ಒಪ್ಪಿದ್ದಾರೆ ಎಂದು ಸಿಪಿಐ ಹನುಮಂತಪ್ಪ ಹೇಳಿದರು. ಶವ ಪರೀಕ್ಷೆ ವಿಳಂಬವಾದ ಕಾರಣ ಆಸ್ಪತ್ರೆಯ ಬಳಿ ನೂರಾರು ಮಂದಿ ಜಮಾಯಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-25-1253471042</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>