<p><strong>ಬಳ್ಳಾರಿ:</strong> ಗುರುವಾರವಷ್ಟೇ (ಜ.1) ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು, ಕರ್ತವ್ಯ ಲೋಪದ ಆರೋಪದ ಮೇಲೆ ಶುಕ್ರವಾರ ಅಮಾನತು ಮಾಡಲಾಗಿದೆ. </p><p>ಬುಧವಾರ ರಾತ್ರಿಯಷ್ಟೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬಿದ್ದಿತ್ತು. ನೆಜ್ಜೂರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಅದೇ ದಿನ ಕಾಂಗ್ರೆಸ್, ಬಿಜೆಪಿ ನಾಯಕರ ಬೆಂಬಲಿಗರ ಮಧ್ಯೆ ಘರ್ಷಣೆ ನಡೆದಿತ್ತು. ಈ ಬಗ್ಗೆ ವರದಿ ನೀಡುವಂತೆ ಬಳ್ಳಾರಿ ವಲಯದ ಡಿಐಜಿಪಿ ವರ್ತಿಕಾ ಕಟಿಯಾರ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಸೂಚಿಸಿದ್ದರು.</p><p>‘ಪರಿಸ್ಥಿತಿ ನಿಭಾಯಿಸುವಲ್ಲಿ ಹಾಗೂ ಹಿರಿಯ ಅಧಿಕಾರಿಗಳಿಗೆ ಘಟನೆಯ ಗಂಭೀರತೆ ಬಗ್ಗೆ ಮಾಹಿತಿ ನೀಡುವಲ್ಲಿ ಎಸ್ಪಿ ವಿಫಲರಾಗಿದ್ದಾರೆ’ ಎಂದು ವರ್ತಿಕಾ ಕಟಿಯಾರ್ ವರದಿ ನೀಡಿದ್ದರು. ಅದನ್ನು ಆಧರಿಸಿ ಅಮಾನತು ಮಾಡಲಾಗಿದೆ.</p><p>ಚಿತ್ರದುರ್ಗ ಜಿಲ್ಲಾ ಎಸ್ಪಿ ರಂಜಿತ್ ಕುಮಾರ್ ಭಂಡಾರಿ ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಲಾಗಿದೆ.</p>.ಜನಾರ್ದನ ರೆಡ್ಡಿ ಮನೆ ಎದುರು ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಬಲಿ, ನಿಷೇಧಾಜ್ಞೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಗುರುವಾರವಷ್ಟೇ (ಜ.1) ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು, ಕರ್ತವ್ಯ ಲೋಪದ ಆರೋಪದ ಮೇಲೆ ಶುಕ್ರವಾರ ಅಮಾನತು ಮಾಡಲಾಗಿದೆ. </p><p>ಬುಧವಾರ ರಾತ್ರಿಯಷ್ಟೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬಿದ್ದಿತ್ತು. ನೆಜ್ಜೂರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಅದೇ ದಿನ ಕಾಂಗ್ರೆಸ್, ಬಿಜೆಪಿ ನಾಯಕರ ಬೆಂಬಲಿಗರ ಮಧ್ಯೆ ಘರ್ಷಣೆ ನಡೆದಿತ್ತು. ಈ ಬಗ್ಗೆ ವರದಿ ನೀಡುವಂತೆ ಬಳ್ಳಾರಿ ವಲಯದ ಡಿಐಜಿಪಿ ವರ್ತಿಕಾ ಕಟಿಯಾರ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಸೂಚಿಸಿದ್ದರು.</p><p>‘ಪರಿಸ್ಥಿತಿ ನಿಭಾಯಿಸುವಲ್ಲಿ ಹಾಗೂ ಹಿರಿಯ ಅಧಿಕಾರಿಗಳಿಗೆ ಘಟನೆಯ ಗಂಭೀರತೆ ಬಗ್ಗೆ ಮಾಹಿತಿ ನೀಡುವಲ್ಲಿ ಎಸ್ಪಿ ವಿಫಲರಾಗಿದ್ದಾರೆ’ ಎಂದು ವರ್ತಿಕಾ ಕಟಿಯಾರ್ ವರದಿ ನೀಡಿದ್ದರು. ಅದನ್ನು ಆಧರಿಸಿ ಅಮಾನತು ಮಾಡಲಾಗಿದೆ.</p><p>ಚಿತ್ರದುರ್ಗ ಜಿಲ್ಲಾ ಎಸ್ಪಿ ರಂಜಿತ್ ಕುಮಾರ್ ಭಂಡಾರಿ ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಲಾಗಿದೆ.</p>.ಜನಾರ್ದನ ರೆಡ್ಡಿ ಮನೆ ಎದುರು ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಬಲಿ, ನಿಷೇಧಾಜ್ಞೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>