<p>ತೆಕ್ಕಲಕೋಟೆ: ರಾಷ್ಟ್ರೀಯ ಹೆದ್ದಾರಿ 150 ಎ ಸಮೀಪದ ಭೈರಾಪುರ ಹಳ್ಳದ ಬಳಿ ಮಿನಿ ಗೂಡ್ಸ್ ಆಟೋ ಏಕಾಏಕಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.</p>.<p>ಪಟ್ಟಣದ ವರವಿನ ಮಲ್ಲೇಶ್ವರ ದೇವಸ್ಥಾನಕ್ಕೆ ಬಳ್ಳಾರಿಯಿಂದ ಆಗಮಿಸಿದ್ದ 15 ಜನರ ತಂಡ, ದೇವರ ದರ್ಶನ ಪಡೆದು ಮರಳಿ ಬಳ್ಳಾರಿಗೆ ತೆರಳುವ ಸಂದರ್ಭದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ವಾಹನದಲ್ಲಿದ್ದವರು ಕೆಳಗಿಳಿದು ದೂರ ಹೋಗಿದ್ದಾರೆ.</p>.<p>ಮಾರ್ಗ ಮಧ್ಯೆ ತೆರಳುತ್ತಿದ್ದ ಬಳ್ಳಾರಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್ ಸಿದ್ದಪ್ಪ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1718801822</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ: ರಾಷ್ಟ್ರೀಯ ಹೆದ್ದಾರಿ 150 ಎ ಸಮೀಪದ ಭೈರಾಪುರ ಹಳ್ಳದ ಬಳಿ ಮಿನಿ ಗೂಡ್ಸ್ ಆಟೋ ಏಕಾಏಕಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.</p>.<p>ಪಟ್ಟಣದ ವರವಿನ ಮಲ್ಲೇಶ್ವರ ದೇವಸ್ಥಾನಕ್ಕೆ ಬಳ್ಳಾರಿಯಿಂದ ಆಗಮಿಸಿದ್ದ 15 ಜನರ ತಂಡ, ದೇವರ ದರ್ಶನ ಪಡೆದು ಮರಳಿ ಬಳ್ಳಾರಿಗೆ ತೆರಳುವ ಸಂದರ್ಭದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ವಾಹನದಲ್ಲಿದ್ದವರು ಕೆಳಗಿಳಿದು ದೂರ ಹೋಗಿದ್ದಾರೆ.</p>.<p>ಮಾರ್ಗ ಮಧ್ಯೆ ತೆರಳುತ್ತಿದ್ದ ಬಳ್ಳಾರಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಎಸ್ ಸಿದ್ದಪ್ಪ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1718801822</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>