<p><strong>ಬಳ್ಳಾರಿ</strong>: ‘ನಗರದ ಟ್ರಾಫಿಕ್ ಸಮಸ್ಯೆಗೆ ಹಂತ- ಹಂತವಾಗಿ ಪರಿಹಾರ ಕಲ್ಪಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ಅವರು ಹೇಳಿದರು.</p>.<p>ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. </p>.<p>‘ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ. ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯೂ ಮುಖ್ಯ’ ಎಂದರು. </p>.<p>‘ನಗರದ ಟ್ರಾಫಿಕ್ ಸಮಸ್ಯೆಗಳನ್ನು ಆಲಿಸಲು ಈ ಸಭೆಯು ಉಪಯುಕ್ತವಾಗಿದೆ. ಸಮಸ್ಯೆಗಳನ್ನು ಅರಿತು ಹಂತ- ಹಂತವಾಗಿ ಪರಿಹಾರ ಕಲ್ಪಿಸಲಾಗುವುದು’ ಎಂದರು.</p>.<p>‘ವಾಹನ ಸವಾರರು ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಮಾತನಾಡಿ, ‘ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತ, ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ’ ಎಂದರು.</p>.<p>‘ನಗರದಲ್ಲಿ ಆಟೋ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ನಡುರಸ್ತೆಯಲ್ಲಿ ಬ್ರೇಕ್ ಹಾಕುವುದು, ಹಿಂಬದಿ ಸವಾರರಿಗೆ ತೊಂದರೆ ಉಂಟುಮಾಡುವುದು ಮಾಡಬಾರದು. ಹಾಗಾಗಿ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಬೇಕು’ ಎಂದರು.</p>.<p>ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ನಗರದ ಟ್ರಾಫಿಕ್ ಸಮಸ್ಯೆಗಳ ಕುರಿತು ಸಾರ್ವಜನಿಕರೂ ಅಭಿಪ್ರಾಯ ವ್ಯಕ್ತಪಡಿಸಿದರು. </p>.<p>ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ.ರವಿಕುಮಾರ್, ನವೀನ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಬಸರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ರುದ್ರಪ್ಪ, ಕೆಕೆಆರ್ಟಿಸಿ, ಕೆಇಬಿ ಅಧಿಕಾರಿಗಳು ಇದ್ದರು. </p>.<div><blockquote>ಟ್ರಾಫಿಕ್ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಜನ ಸ್ವಯಂ ಪ್ರೇರಿತರಾಗಿ ಟ್ರಾಫಿಕ್ ವಾರ್ಡನ್ಗಳಾಗಿ ಕೆಲಸ ಮಾಡಲು ಅವಕಾಶವಿದೆ. ಆಸಕ್ತರು ನೋಂದಾಯಿಸಿಕೊಳ್ಳಬಹುದು </blockquote><span class="attribution">– ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ನಗರದ ಟ್ರಾಫಿಕ್ ಸಮಸ್ಯೆಗೆ ಹಂತ- ಹಂತವಾಗಿ ಪರಿಹಾರ ಕಲ್ಪಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ಅವರು ಹೇಳಿದರು.</p>.<p>ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು. </p>.<p>‘ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ. ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯೂ ಮುಖ್ಯ’ ಎಂದರು. </p>.<p>‘ನಗರದ ಟ್ರಾಫಿಕ್ ಸಮಸ್ಯೆಗಳನ್ನು ಆಲಿಸಲು ಈ ಸಭೆಯು ಉಪಯುಕ್ತವಾಗಿದೆ. ಸಮಸ್ಯೆಗಳನ್ನು ಅರಿತು ಹಂತ- ಹಂತವಾಗಿ ಪರಿಹಾರ ಕಲ್ಪಿಸಲಾಗುವುದು’ ಎಂದರು.</p>.<p>‘ವಾಹನ ಸವಾರರು ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಮಾತನಾಡಿ, ‘ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತ, ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ’ ಎಂದರು.</p>.<p>‘ನಗರದಲ್ಲಿ ಆಟೋ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ನಡುರಸ್ತೆಯಲ್ಲಿ ಬ್ರೇಕ್ ಹಾಕುವುದು, ಹಿಂಬದಿ ಸವಾರರಿಗೆ ತೊಂದರೆ ಉಂಟುಮಾಡುವುದು ಮಾಡಬಾರದು. ಹಾಗಾಗಿ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಬೇಕು’ ಎಂದರು.</p>.<p>ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ನಗರದ ಟ್ರಾಫಿಕ್ ಸಮಸ್ಯೆಗಳ ಕುರಿತು ಸಾರ್ವಜನಿಕರೂ ಅಭಿಪ್ರಾಯ ವ್ಯಕ್ತಪಡಿಸಿದರು. </p>.<p>ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ.ರವಿಕುಮಾರ್, ನವೀನ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಬಸರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ರುದ್ರಪ್ಪ, ಕೆಕೆಆರ್ಟಿಸಿ, ಕೆಇಬಿ ಅಧಿಕಾರಿಗಳು ಇದ್ದರು. </p>.<div><blockquote>ಟ್ರಾಫಿಕ್ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಜನ ಸ್ವಯಂ ಪ್ರೇರಿತರಾಗಿ ಟ್ರಾಫಿಕ್ ವಾರ್ಡನ್ಗಳಾಗಿ ಕೆಲಸ ಮಾಡಲು ಅವಕಾಶವಿದೆ. ಆಸಕ್ತರು ನೋಂದಾಯಿಸಿಕೊಳ್ಳಬಹುದು </blockquote><span class="attribution">– ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>