<p><strong>ಬಳ್ಳಾರಿ:</strong> ನಗರದ ದುರ್ಗಮ್ಮನಗುಡಿ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ಹಸಿರು ಹೊದಿಕೆಯ ಮೂಲಕ ನೆರಳಿನ ವ್ಯವಸ್ಥೆ ಮಾಡಿಲಾಗಿದ್ದು, ಇತರ ಟ್ರಾಫಿಕ್ ಸಿಗ್ನಲ್ಗಳ ಬಳಿಯೂ ಇದೇ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ. </p>.<p>ದುರ್ಗಮ್ಮನಗುಡಿ ಬಳಿಯ ಸಿಗ್ನಲ್ನಲ್ಲಿ ನೆರಳಿನ ವ್ಯವಸ್ಥೆ ಮಾಡಿರುವುದಕ್ಕೆ ವಾಹನ ಸವಾರರೂ ಸೇರಿದಂತೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. </p>.<p>ಈ ಬಾರಿ ಬೇಸಿಗೆ ಹೆಚ್ಚು ಪ್ರಖರವಾಗಿರಲಿದ್ದು, ನಗರದ ಟ್ರಾಫಿಕ್ ಸಿಗ್ನಲ್ಗಳಲ್ಲಿ ನೆರಳಿನ ವ್ಯವಸ್ಥೆ ಮಾಡುವಂತೆ ಇತ್ತೀಚೆಗೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಯು ಬಳ್ಳಾರಿ ಮಹಾನಗರ ಪಾಲಿಕೆಗೆ ಸೂಚನೆ ನೀಡಿದ್ದರು. </p>.<p>ಅದರಂತೆ ಮೊದಲ ಹಂತದಲ್ಲಿ ಮೇಯರ್ ನಿಧಿಯಲ್ಲಿ ಬಳ್ಳಾರಿಯ ದುರ್ಗಮ್ಮನ ಗುಡಿಯ ಸಿಗ್ನಲ್ನಲ್ಲಿ ಮೂರು ಕಡೆಗಳಲ್ಲಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆಗೆ ನೆರಳಿನ ವ್ಯವಸ್ಥೆ ಮಾಡಲು ₹50 ಸಾವಿರ ಖರ್ಚಾಗುತ್ತದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ. </p>.<p>ಇಂದಿರಾ ವೃತ್ತ, ತಾಳೂರು ವೃತ್ತ, ರಂಗಮಂದಿರ ಸೇರಿದಂತೆ ಎಲ್ಲೆಲ್ಲಿ ಸಿಗ್ನಲ್ಗಳಿವೆಯೋ ಅಲ್ಲಿ ನೆರಳು ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಇದಕ್ಕಾಗಿ ಈಗಾಗಲೇ ಸಂಘ ಸಂಸ್ಥೆಗಳನ್ನು ಸಂಪರ್ಕಿಸಿದ್ದು, ಮೂರುನಾಲ್ಕು ಸಂಘಗಳು ವ್ಯವಸ್ಥೆ ಮಾಡಲು ಮುಂದಾಗಿವೆ ಎಂದು ಅವರು ಮಾಹಿತಿ ನೀಡಿದರು. </p>.<p>ದುರ್ಗಮ್ಮನ ಗುಡಿ ಬಳಿ 2022ರಲ್ಲಿ ಇಂಥದ್ದೇ ವ್ಯವಸ್ಥೆ ಮಾಡಲಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. </p>.<p>ಬಳ್ಳಾರಿಯಲ್ಲಿ ಕಳೆದ ಎರಡು ದಿನಗಳಿಂದ 38ರಿಂದ 39 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಈಗಾಗಲೇ ಹಲವು ಕಡೆಗಳಲ್ಲಿ ಸಂಘ ಸಂಸ್ಥೆಗಳು ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ನಗರದ ದುರ್ಗಮ್ಮನಗುಡಿ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ಹಸಿರು ಹೊದಿಕೆಯ ಮೂಲಕ ನೆರಳಿನ ವ್ಯವಸ್ಥೆ ಮಾಡಿಲಾಗಿದ್ದು, ಇತರ ಟ್ರಾಫಿಕ್ ಸಿಗ್ನಲ್ಗಳ ಬಳಿಯೂ ಇದೇ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ. </p>.<p>ದುರ್ಗಮ್ಮನಗುಡಿ ಬಳಿಯ ಸಿಗ್ನಲ್ನಲ್ಲಿ ನೆರಳಿನ ವ್ಯವಸ್ಥೆ ಮಾಡಿರುವುದಕ್ಕೆ ವಾಹನ ಸವಾರರೂ ಸೇರಿದಂತೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. </p>.<p>ಈ ಬಾರಿ ಬೇಸಿಗೆ ಹೆಚ್ಚು ಪ್ರಖರವಾಗಿರಲಿದ್ದು, ನಗರದ ಟ್ರಾಫಿಕ್ ಸಿಗ್ನಲ್ಗಳಲ್ಲಿ ನೆರಳಿನ ವ್ಯವಸ್ಥೆ ಮಾಡುವಂತೆ ಇತ್ತೀಚೆಗೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಯು ಬಳ್ಳಾರಿ ಮಹಾನಗರ ಪಾಲಿಕೆಗೆ ಸೂಚನೆ ನೀಡಿದ್ದರು. </p>.<p>ಅದರಂತೆ ಮೊದಲ ಹಂತದಲ್ಲಿ ಮೇಯರ್ ನಿಧಿಯಲ್ಲಿ ಬಳ್ಳಾರಿಯ ದುರ್ಗಮ್ಮನ ಗುಡಿಯ ಸಿಗ್ನಲ್ನಲ್ಲಿ ಮೂರು ಕಡೆಗಳಲ್ಲಿ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆಗೆ ನೆರಳಿನ ವ್ಯವಸ್ಥೆ ಮಾಡಲು ₹50 ಸಾವಿರ ಖರ್ಚಾಗುತ್ತದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ತಿಳಿಸಿದ್ದಾರೆ. </p>.<p>ಇಂದಿರಾ ವೃತ್ತ, ತಾಳೂರು ವೃತ್ತ, ರಂಗಮಂದಿರ ಸೇರಿದಂತೆ ಎಲ್ಲೆಲ್ಲಿ ಸಿಗ್ನಲ್ಗಳಿವೆಯೋ ಅಲ್ಲಿ ನೆರಳು ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಇದಕ್ಕಾಗಿ ಈಗಾಗಲೇ ಸಂಘ ಸಂಸ್ಥೆಗಳನ್ನು ಸಂಪರ್ಕಿಸಿದ್ದು, ಮೂರುನಾಲ್ಕು ಸಂಘಗಳು ವ್ಯವಸ್ಥೆ ಮಾಡಲು ಮುಂದಾಗಿವೆ ಎಂದು ಅವರು ಮಾಹಿತಿ ನೀಡಿದರು. </p>.<p>ದುರ್ಗಮ್ಮನ ಗುಡಿ ಬಳಿ 2022ರಲ್ಲಿ ಇಂಥದ್ದೇ ವ್ಯವಸ್ಥೆ ಮಾಡಲಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. </p>.<p>ಬಳ್ಳಾರಿಯಲ್ಲಿ ಕಳೆದ ಎರಡು ದಿನಗಳಿಂದ 38ರಿಂದ 39 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಈಗಾಗಲೇ ಹಲವು ಕಡೆಗಳಲ್ಲಿ ಸಂಘ ಸಂಸ್ಥೆಗಳು ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>