<p><strong>ಬಳ್ಳಾರಿ:</strong> ‘ತುಂಗಭದ್ರ ಜಲಾಶಯದಲ್ಲಿ ದಶಕಗಳಿಂದ ಸಂಗ್ರಹವಾಗಿರುವ ಹೂಳಿನಿಂದ ನೀರಿನ ಸಂಗ್ರಹ ಸಾಮರ್ಥ್ಯ ಕುಂಠಿತಗೊಂಡಿದೆ. ಸರ್ಕಾರದ ಗಮನ ಸೆಳೆಯಲು ತುಂಗಭದ್ರ ರೈತ ಸಂಘದ ವತಿಯಿಂದ ಜೂನ್ 2ರಂದು ಸಾಂಕೇತಿಕವಾಗಿ ಹೂಳೆತ್ತುವ ಕಾರ್ಯ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಜೂನ್ 1ರಂದು ದರೂರು ವೀರಭದ್ರೇಶ್ವರ ದೇವಸ್ಥಾನ ಹಾಗೂ ಕೊಂಚಿಗೇರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, 105 ಟ್ರಾಕ್ಟರ್ಗಳೊಂದಿಗೆ ಕುರುಗೋಡು, ಕಂಪ್ಲಿ, ಕಮಲಾಪುರ ಹಾಗೂ ಹೊಸಪೇಟೆ ಮಾರ್ಗವಾಗಿ ಜಲಾಶಯದತ್ತ ಪ್ರಯಾಣ ಆರಂಭಿಸಲಾಗುವುದು.</p>.<p>ಜೂನ್ 2ರಂದು ಜಲಾಶಯದ ಗುಂಡಾ ಅರಣ್ಯದ ಪಕ್ಕದ ಪ್ರದೇಶದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೂಳೆತ್ತುವ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. 105 ಟ್ರಾಕ್ಟರ್ಗಳಿಗೆ ಜೆಸಿಬಿಗಳ ಮೂಲಕ ಡ್ಯಾಂನಲ್ಲಿನ ಹೂಳನ್ನು ತುಂಬಿಸಿ, ಹೊರತೆಗೆದು ‘ಹೂಳಿನ ಜಾತ್ರೆ’ ಮಾಡಲಾಗುವುದು. ಎರಡು ದಿನಗಳ ಕಾಲ ನಡೆಯುವ ಈ ಸಾಂಕೇತಿಕ ಹೋರಾಟದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ಜಾತ್ರೆಯಲ್ಲಿ ಪಾಲ್ಗೊಳ್ಳುವ ಟ್ರಾಕ್ಟರ್, ಬೈಕ್ ಹಾಗೂ ಜೆಸಿಬಿ ವಾಹನಗಳಿಗೆ ಯಾವುದೇ ಅಡ್ಡಿಯಾಗದಂತೆ ಪೊಲೀಸ್, ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದ್ದು, ಅಧಿಕಾರಿಗಳು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ದರೂರು ಸಾಗರ್ ಗೌಡ, ಶ್ರೀಧರ್ ಗೌಡ, ಶಿವಯ್ಯ, ವೀರಭದ್ರ ನಾಯ್ಕ್, ಲಿಂಗಮೂರ್ತಿ, ವೀರನಗೌಡ ಸೇರಿದಂತೆ ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-25-1051623781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ತುಂಗಭದ್ರ ಜಲಾಶಯದಲ್ಲಿ ದಶಕಗಳಿಂದ ಸಂಗ್ರಹವಾಗಿರುವ ಹೂಳಿನಿಂದ ನೀರಿನ ಸಂಗ್ರಹ ಸಾಮರ್ಥ್ಯ ಕುಂಠಿತಗೊಂಡಿದೆ. ಸರ್ಕಾರದ ಗಮನ ಸೆಳೆಯಲು ತುಂಗಭದ್ರ ರೈತ ಸಂಘದ ವತಿಯಿಂದ ಜೂನ್ 2ರಂದು ಸಾಂಕೇತಿಕವಾಗಿ ಹೂಳೆತ್ತುವ ಕಾರ್ಯ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಜೂನ್ 1ರಂದು ದರೂರು ವೀರಭದ್ರೇಶ್ವರ ದೇವಸ್ಥಾನ ಹಾಗೂ ಕೊಂಚಿಗೇರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, 105 ಟ್ರಾಕ್ಟರ್ಗಳೊಂದಿಗೆ ಕುರುಗೋಡು, ಕಂಪ್ಲಿ, ಕಮಲಾಪುರ ಹಾಗೂ ಹೊಸಪೇಟೆ ಮಾರ್ಗವಾಗಿ ಜಲಾಶಯದತ್ತ ಪ್ರಯಾಣ ಆರಂಭಿಸಲಾಗುವುದು.</p>.<p>ಜೂನ್ 2ರಂದು ಜಲಾಶಯದ ಗುಂಡಾ ಅರಣ್ಯದ ಪಕ್ಕದ ಪ್ರದೇಶದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೂಳೆತ್ತುವ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. 105 ಟ್ರಾಕ್ಟರ್ಗಳಿಗೆ ಜೆಸಿಬಿಗಳ ಮೂಲಕ ಡ್ಯಾಂನಲ್ಲಿನ ಹೂಳನ್ನು ತುಂಬಿಸಿ, ಹೊರತೆಗೆದು ‘ಹೂಳಿನ ಜಾತ್ರೆ’ ಮಾಡಲಾಗುವುದು. ಎರಡು ದಿನಗಳ ಕಾಲ ನಡೆಯುವ ಈ ಸಾಂಕೇತಿಕ ಹೋರಾಟದಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದರು.</p>.<p>ಜಾತ್ರೆಯಲ್ಲಿ ಪಾಲ್ಗೊಳ್ಳುವ ಟ್ರಾಕ್ಟರ್, ಬೈಕ್ ಹಾಗೂ ಜೆಸಿಬಿ ವಾಹನಗಳಿಗೆ ಯಾವುದೇ ಅಡ್ಡಿಯಾಗದಂತೆ ಪೊಲೀಸ್, ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದ್ದು, ಅಧಿಕಾರಿಗಳು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ದರೂರು ಸಾಗರ್ ಗೌಡ, ಶ್ರೀಧರ್ ಗೌಡ, ಶಿವಯ್ಯ, ವೀರಭದ್ರ ನಾಯ್ಕ್, ಲಿಂಗಮೂರ್ತಿ, ವೀರನಗೌಡ ಸೇರಿದಂತೆ ಹಲವರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-25-1051623781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>