<p><strong>ಬಳ್ಳಾರಿ</strong>: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಸ್ಸಿ, ಎಸ್ಟಿ ವಸತಿ ನಿಲಯಗಳಲ್ಲಿ ಕಳಪೆ ಆಹಾರ ಮತ್ತು ಮೂಲಸೌಕರ್ಯ ಕೊರತೆ ಖಂಡಿಸಿ ಎಐಡಿಎಸ್ಒನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.</p>.<p>ಶನಿವಾರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಸ್ವಚ್ಛತೆಯ ಕೊರತೆ ಹಾಗೂ ವಿದ್ಯಾರ್ಥಿಗಳ ಚರ್ಮದ ಸಮಸ್ಯೆಗಳನ್ನು ಪರಿಶೀಲಿಸಿದರು.</p>.<p>ಈ ವೇಳೆ ವಿದ್ಯಾರ್ಥಿಗಳು ತಮಗಾಗುತ್ತಿರುವ ತೊಂದರೆಗಳ ಬಗ್ಗೆ ಮನವಿ ಸಲ್ಲಿಸಿದರು. ಸಮಸ್ಯೆಗಳ ನಿವಾರಣೆ ಹಾಗೂ ವಸತಿನಿಲಯದ ನಿರ್ವಹಣೆಯನ್ನು ಇಲಾಖೆಗೆ ವಹಿಸುವ ಕುರಿತು ಮೇ 19ರಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.</p>.<p>ವಿದ್ಯಾರ್ಥಿ ಮುಖಂಡರಾದ ನಿಹಾರಿಕಾ ಆರ್., ಅರುಣ್ ಭಗತ್ ಹಾಗೂ ಮಂಜುನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-25-127608814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಸ್ಸಿ, ಎಸ್ಟಿ ವಸತಿ ನಿಲಯಗಳಲ್ಲಿ ಕಳಪೆ ಆಹಾರ ಮತ್ತು ಮೂಲಸೌಕರ್ಯ ಕೊರತೆ ಖಂಡಿಸಿ ಎಐಡಿಎಸ್ಒನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ.</p>.<p>ಶನಿವಾರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಸ್ವಚ್ಛತೆಯ ಕೊರತೆ ಹಾಗೂ ವಿದ್ಯಾರ್ಥಿಗಳ ಚರ್ಮದ ಸಮಸ್ಯೆಗಳನ್ನು ಪರಿಶೀಲಿಸಿದರು.</p>.<p>ಈ ವೇಳೆ ವಿದ್ಯಾರ್ಥಿಗಳು ತಮಗಾಗುತ್ತಿರುವ ತೊಂದರೆಗಳ ಬಗ್ಗೆ ಮನವಿ ಸಲ್ಲಿಸಿದರು. ಸಮಸ್ಯೆಗಳ ನಿವಾರಣೆ ಹಾಗೂ ವಸತಿನಿಲಯದ ನಿರ್ವಹಣೆಯನ್ನು ಇಲಾಖೆಗೆ ವಹಿಸುವ ಕುರಿತು ಮೇ 19ರಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.</p>.<p>ವಿದ್ಯಾರ್ಥಿ ಮುಖಂಡರಾದ ನಿಹಾರಿಕಾ ಆರ್., ಅರುಣ್ ಭಗತ್ ಹಾಗೂ ಮಂಜುನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-25-127608814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>