<p><strong>ಬಳ್ಳಾರಿ:</strong> ಬಳ್ಳಾರಿಯಲ್ಲಿ ನಡೆದಿದ್ದ ಘರ್ಷಣೆ ಮತ್ತು ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ತನಿಖೆ ಹೊಣೆ ಹೊತ್ತಿರುವ ಸಿಐಡಿ ಅಧಿಕಾರಿಗಳು, ಭಾನುವಾರ ಘಟನಾ ಸ್ಥಳ ಪರಿಶೀಲಿಸಿದರು. ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು </p>.<p>ಸಿಐಡಿ ಎಸ್ಪಿ ಡಾ.ಹರ್ಷಾ ಪ್ರಿಯಂವದಾ ಅವರ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರೊಂದಿಗೆ ಚರ್ಚೆ ನಡೆಸಿತು. ನಾಲ್ಕೂ ಪ್ರಕರಣಗಳ ತನಿಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು. </p>.<p>ಘಟನೆ ನಡೆದ ಅವ್ವಂಬಾವಿಯಲ್ಲಿ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ತೆರಳಿದ ಅಧಿಕಾರಿಗಳು ಪರಿಶೀಲಿಸಿದರು. ಬ್ರೂಸ್ಪೇಟೆ ಪೊಲೀಸ್ ಠಾಣೆ ಅಧಿಕಾರಿಗಳು ಸಿಐಡಿ ತಂಡಕ್ಕೆ ಮಾಹಿತಿ ಒದಗಿಸಿದರು. ತನಿಖೆ ಮತ್ತು ಇತರ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಲು ಹರ್ಷಾ ಪ್ರಿಯಂವದಾ ನಿರಾಕರಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ಸಿಐಡಿ ತಂಡ ಬಳ್ಳಾರಿಗೆ ಬಂದಿದೆ. ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ತಿಳಿಸಿದರು. </p>.<p>Quote - ಪೊಲೀಸರು ಸಿಐಡಿ ಅಧಿಕಾರಿಗಳು ಸರ್ಕಾರದ ಕೈಗೊಂಬೆಗಳೇ. ಅವರು ಧಕ್ಷರಾಗಿದ್ದಿದ್ದರೆ ಇಷ್ಟೊತ್ತಿಗೆ ಶಾಸಕ ಭರತ್ ರೆಡ್ಡಿ ಸತೀಶ್ ರೆಡ್ಡಿ ಬಂಧನವಾಗಬೇಕಿತ್ತು. ಸಿಬಿಐ ಅಥವಾ ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ ಜನಾರ್ದನ ರೆಡ್ಡಿ ಶಾಸಕ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿಯಲ್ಲಿ ನಡೆದಿದ್ದ ಘರ್ಷಣೆ ಮತ್ತು ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ತನಿಖೆ ಹೊಣೆ ಹೊತ್ತಿರುವ ಸಿಐಡಿ ಅಧಿಕಾರಿಗಳು, ಭಾನುವಾರ ಘಟನಾ ಸ್ಥಳ ಪರಿಶೀಲಿಸಿದರು. ನಂತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು </p>.<p>ಸಿಐಡಿ ಎಸ್ಪಿ ಡಾ.ಹರ್ಷಾ ಪ್ರಿಯಂವದಾ ಅವರ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲಾ ಪೊಲೀಸ್ ಕಚೇರಿಗೆ ಆಗಮಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರೊಂದಿಗೆ ಚರ್ಚೆ ನಡೆಸಿತು. ನಾಲ್ಕೂ ಪ್ರಕರಣಗಳ ತನಿಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು. </p>.<p>ಘಟನೆ ನಡೆದ ಅವ್ವಂಬಾವಿಯಲ್ಲಿ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ತೆರಳಿದ ಅಧಿಕಾರಿಗಳು ಪರಿಶೀಲಿಸಿದರು. ಬ್ರೂಸ್ಪೇಟೆ ಪೊಲೀಸ್ ಠಾಣೆ ಅಧಿಕಾರಿಗಳು ಸಿಐಡಿ ತಂಡಕ್ಕೆ ಮಾಹಿತಿ ಒದಗಿಸಿದರು. ತನಿಖೆ ಮತ್ತು ಇತರ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಲು ಹರ್ಷಾ ಪ್ರಿಯಂವದಾ ನಿರಾಕರಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ಸಿಐಡಿ ತಂಡ ಬಳ್ಳಾರಿಗೆ ಬಂದಿದೆ. ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ತಿಳಿಸಿದರು. </p>.<p>Quote - ಪೊಲೀಸರು ಸಿಐಡಿ ಅಧಿಕಾರಿಗಳು ಸರ್ಕಾರದ ಕೈಗೊಂಬೆಗಳೇ. ಅವರು ಧಕ್ಷರಾಗಿದ್ದಿದ್ದರೆ ಇಷ್ಟೊತ್ತಿಗೆ ಶಾಸಕ ಭರತ್ ರೆಡ್ಡಿ ಸತೀಶ್ ರೆಡ್ಡಿ ಬಂಧನವಾಗಬೇಕಿತ್ತು. ಸಿಬಿಐ ಅಥವಾ ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ ಜನಾರ್ದನ ರೆಡ್ಡಿ ಶಾಸಕ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>