<p><strong>ಬಳ್ಳಾರಿ</strong>: ‘ಗನ್, ಗುಂಡು ನಿಮ್ಮದು, ಗುಂಡು ಹಾರಿಸಿದವರು ನಿಮ್ಮವರು, ಸತ್ತವರು ನಿಮ್ಮವರು, ಕೇಸು ಮಾತ್ರ ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆನಾ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. </p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುಂಡಿನ ದಾಳಿ ನಡೆಸಿದ ಅಂಗರಕ್ಷಕ ಹಾಗೂ ಅವರನ್ನು ಕೆಲಸಕ್ಕೆ ಇಟ್ಟುಕೊಂಡವರನ್ನು ಸರ್ಕಾರ ಬಂಧಿಸಬೇಕಿತ್ತು. ಆದರೆ, ಗನ್ನುಗಳನ್ನು ಬಂಧಿಸಲಾಗಿದೆಯಂತೆ’ ಎಂದು ವ್ಯಂಗ್ಯವಾಡಿದರು. </p>.<p>‘ಜನಾರ್ದನ ರೆಡ್ಡಿ ಮನೆ ಎದುರಿನ ಬ್ಯಾನರ್ ತೆಗೆದಿದ್ದು ಪೊಲೀಸರು. ಆ ಕಾರಣಕ್ಕೆ ಶಾಸಕ ಭರತ್, ಸಾವಿರಾರು ಜನರನ್ನು ಕರೆದುಕೊಂಡು ಬಂದಿದ್ದರು. ಅವರಿಗೆ ಡಿಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಬೆಂಗಾವಲು ನೀಡಿದ್ದರು. ಅವರನ್ನೇಕೆ ಅಮಾನತು ಮಾಡಲಿಲ್ಲ. ಎಸ್ಪಿಯನ್ನೇ ಏಕೆ ಬಲಿಪಶು ಮಾಡಲಾಯಿತು?’ ಎಂದು ಕೇಳಿದರು. </p>.<p>‘ಇದು ಗಾಂಜಾ ಗುಂಗಿನಲ್ಲಿ ಆದ ಜಗಳ. ಇಡೀ ರಾಜ್ಯ ಗಾಂಜಾ ಬೀಡಾಗಿದೆ. ಗೃಹ ಸಚಿವ ಪಾರ್ಟ್ಟೈಮ್ ಮಿನಿಸ್ಟರ್ ಆಗಿದ್ದಾರೆ. ಫುಲ್ ಟೈಮ್ ಆಗಿದ್ದರೆ ಹೀಗಾಗುತ್ತಿರಲಿಲ್ಲ. ರಾಜ್ಯದ ಎಲ್ಲ ಶಾಸಕರೂ ಗೃಹಸಚಿವರೇ ಆಗಿದ್ದಾರೆ’ ಎಂದು ಹೇಳಿದರು. </p>.<p>‘ಜನಾರ್ದನ ರೆಡ್ಡಿಯನ್ನು ಮುಗಿಸುತ್ತೇನೆ, ತಾಳ್ಮೆ ಕೆಟ್ಟರೆ ಬಳ್ಳಾರಿಯನ್ನೇ ಸುಟ್ಟು ಹಾಕುತ್ತೇನೆಂದು ಶಾಸಕನೊಬ್ಬ ಹೇಳುತ್ತಾನೆ. ಅವನ ಸ್ಥಾನಕ್ಕೆ ಏನಾದರೂ ಮಾನ್ಯತೆ ಇದೆಯೇ? ಆ ಶಾಸಕನನ್ನೂ ಕಾಂಗ್ರೆಸ್ ಅಮಾನತು ಮಾಡಬೇಕಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಗನ್, ಗುಂಡು ನಿಮ್ಮದು, ಗುಂಡು ಹಾರಿಸಿದವರು ನಿಮ್ಮವರು, ಸತ್ತವರು ನಿಮ್ಮವರು, ಕೇಸು ಮಾತ್ರ ಜನಾರ್ದನ ರೆಡ್ಡಿ, ಶ್ರೀರಾಮುಲು ಮೇಲೆನಾ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ. </p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುಂಡಿನ ದಾಳಿ ನಡೆಸಿದ ಅಂಗರಕ್ಷಕ ಹಾಗೂ ಅವರನ್ನು ಕೆಲಸಕ್ಕೆ ಇಟ್ಟುಕೊಂಡವರನ್ನು ಸರ್ಕಾರ ಬಂಧಿಸಬೇಕಿತ್ತು. ಆದರೆ, ಗನ್ನುಗಳನ್ನು ಬಂಧಿಸಲಾಗಿದೆಯಂತೆ’ ಎಂದು ವ್ಯಂಗ್ಯವಾಡಿದರು. </p>.<p>‘ಜನಾರ್ದನ ರೆಡ್ಡಿ ಮನೆ ಎದುರಿನ ಬ್ಯಾನರ್ ತೆಗೆದಿದ್ದು ಪೊಲೀಸರು. ಆ ಕಾರಣಕ್ಕೆ ಶಾಸಕ ಭರತ್, ಸಾವಿರಾರು ಜನರನ್ನು ಕರೆದುಕೊಂಡು ಬಂದಿದ್ದರು. ಅವರಿಗೆ ಡಿಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಬೆಂಗಾವಲು ನೀಡಿದ್ದರು. ಅವರನ್ನೇಕೆ ಅಮಾನತು ಮಾಡಲಿಲ್ಲ. ಎಸ್ಪಿಯನ್ನೇ ಏಕೆ ಬಲಿಪಶು ಮಾಡಲಾಯಿತು?’ ಎಂದು ಕೇಳಿದರು. </p>.<p>‘ಇದು ಗಾಂಜಾ ಗುಂಗಿನಲ್ಲಿ ಆದ ಜಗಳ. ಇಡೀ ರಾಜ್ಯ ಗಾಂಜಾ ಬೀಡಾಗಿದೆ. ಗೃಹ ಸಚಿವ ಪಾರ್ಟ್ಟೈಮ್ ಮಿನಿಸ್ಟರ್ ಆಗಿದ್ದಾರೆ. ಫುಲ್ ಟೈಮ್ ಆಗಿದ್ದರೆ ಹೀಗಾಗುತ್ತಿರಲಿಲ್ಲ. ರಾಜ್ಯದ ಎಲ್ಲ ಶಾಸಕರೂ ಗೃಹಸಚಿವರೇ ಆಗಿದ್ದಾರೆ’ ಎಂದು ಹೇಳಿದರು. </p>.<p>‘ಜನಾರ್ದನ ರೆಡ್ಡಿಯನ್ನು ಮುಗಿಸುತ್ತೇನೆ, ತಾಳ್ಮೆ ಕೆಟ್ಟರೆ ಬಳ್ಳಾರಿಯನ್ನೇ ಸುಟ್ಟು ಹಾಕುತ್ತೇನೆಂದು ಶಾಸಕನೊಬ್ಬ ಹೇಳುತ್ತಾನೆ. ಅವನ ಸ್ಥಾನಕ್ಕೆ ಏನಾದರೂ ಮಾನ್ಯತೆ ಇದೆಯೇ? ಆ ಶಾಸಕನನ್ನೂ ಕಾಂಗ್ರೆಸ್ ಅಮಾನತು ಮಾಡಬೇಕಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>