<p>ಬಳ್ಳಾರಿ: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್)ಯು ಈಚೆಗೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.</p>.<p>ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಸಾರುವ ರಾಜ್ಯವ್ಯಾಪಿ ಆಂದೋಲನದ ಸಮಾರೋಪ ಕಾರ್ಯಕ್ರಮದ ಭಾಗವಾಗಿ ಮನವಿ ಸಲ್ಲಿಸಲಾಯಿತು.</p>.<p>ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಎಂ. ಈಶ್ವರಿ, ‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಎಐಎಂಎಸ್ಎಸ್ನ ರಾಜ್ಯ ಸಮಿತಿಯು 2025ರ ನವೆಂಬರ್ 25ರಿಂದ ಮಾರ್ಚ್ 25ರ ವರೆಗೆ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಹಿ ಸಂಗ್ರಹಣಾ ಅಭಿಯಾನ ನಡೆಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಕೆಲವು ಕಾರ್ಯ ಸೂಚಿಗಳನ್ನು ಮಾಡಿದೆ. ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ‘ಇವ ನಮ್ಮವ’ ಕಾಯ್ದೆಯನ್ನು ಜಾರಿಗೊಳಿಸಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿರ್ಬಂಧಿಸಿದೆ. ಈ ಕ್ರಮಗಳು ಸ್ವಾಗತಾರ್ಹ’ ಎಂದು ಆಗ್ರಹಿಸಿದರು.</p>.<p>‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಸ್ತ್ರೀ ಭ್ರೂಣ ಹತ್ಯೆ, ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಗರ್ಭಧಾರಣೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲಾ - ಕಾಲೇಜು ಸೇರಿದಂತೆ ಎಲ್ಲಾ ಕಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಕೂಡಲೇ ಅನುಷ್ಠಾನಗೊಳಿಸಲು ಕ್ರಮ ಕೈಕೊಳ್ಳಬೇಕು. ಅಶ್ಲೀಲತೆಯ ಪ್ರಚಾರ ತಡೆಗಟ್ಟಿ, ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆಯನ್ನು ಖಾತ್ರಿಪಡಿಸಬೇಕು’ ಎಂದರು.</p>.<p>‘ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ, ಸಮಾನ ಅವಕಾಶಗಳನ್ನು ಕಲ್ಪಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಎಐಎಂಎಸ್ಎಸ್ನ ಪದಾಧಿಕಾರಿಗಳಾದ ವಿಜಯಲಕ್ಷ್ಮೀ, ಪದ್ಮ, ಗಿರಿಜಾ, ಸೌಮ್ಯ, ವಿದ್ಯಾ ಹಾಗೂ ಸದಸ್ಯರಾದ ಸೌಮ್ಯ, ಶೋಭಾ, ಕರಿಬಸಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-25-1292181302</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್)ಯು ಈಚೆಗೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.</p>.<p>ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಸಾರುವ ರಾಜ್ಯವ್ಯಾಪಿ ಆಂದೋಲನದ ಸಮಾರೋಪ ಕಾರ್ಯಕ್ರಮದ ಭಾಗವಾಗಿ ಮನವಿ ಸಲ್ಲಿಸಲಾಯಿತು.</p>.<p>ಎಐಎಂಎಸ್ಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ಕೆ.ಎಂ. ಈಶ್ವರಿ, ‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಎಐಎಂಎಸ್ಎಸ್ನ ರಾಜ್ಯ ಸಮಿತಿಯು 2025ರ ನವೆಂಬರ್ 25ರಿಂದ ಮಾರ್ಚ್ 25ರ ವರೆಗೆ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಹಿ ಸಂಗ್ರಹಣಾ ಅಭಿಯಾನ ನಡೆಸಿದೆ. ಈ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಕೆಲವು ಕಾರ್ಯ ಸೂಚಿಗಳನ್ನು ಮಾಡಿದೆ. ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ‘ಇವ ನಮ್ಮವ’ ಕಾಯ್ದೆಯನ್ನು ಜಾರಿಗೊಳಿಸಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿರ್ಬಂಧಿಸಿದೆ. ಈ ಕ್ರಮಗಳು ಸ್ವಾಗತಾರ್ಹ’ ಎಂದು ಆಗ್ರಹಿಸಿದರು.</p>.<p>‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಸ್ತ್ರೀ ಭ್ರೂಣ ಹತ್ಯೆ, ಬಾಲ್ಯ ವಿವಾಹ, ಅಪ್ರಾಪ್ತ ವಯಸ್ಕರ ಗರ್ಭಧಾರಣೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲಾ - ಕಾಲೇಜು ಸೇರಿದಂತೆ ಎಲ್ಲಾ ಕಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಕೂಡಲೇ ಅನುಷ್ಠಾನಗೊಳಿಸಲು ಕ್ರಮ ಕೈಕೊಳ್ಳಬೇಕು. ಅಶ್ಲೀಲತೆಯ ಪ್ರಚಾರ ತಡೆಗಟ್ಟಿ, ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆಯನ್ನು ಖಾತ್ರಿಪಡಿಸಬೇಕು’ ಎಂದರು.</p>.<p>‘ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣ, ಸಮಾನ ಅವಕಾಶಗಳನ್ನು ಕಲ್ಪಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಎಐಎಂಎಸ್ಎಸ್ನ ಪದಾಧಿಕಾರಿಗಳಾದ ವಿಜಯಲಕ್ಷ್ಮೀ, ಪದ್ಮ, ಗಿರಿಜಾ, ಸೌಮ್ಯ, ವಿದ್ಯಾ ಹಾಗೂ ಸದಸ್ಯರಾದ ಸೌಮ್ಯ, ಶೋಭಾ, ಕರಿಬಸಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-25-1292181302</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>