<p><strong>ಬಳ್ಳಾರಿ:</strong> ಬಳ್ಳಾರಿ ಮಾರ್ಗದ ‘18111–ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್’ ರೈಲಿನಲ್ಲಿ ಸಾಗಣೆ ಮಾಡಲಾಗುತ್ತಿದ್ದ ಐದು ಕೆ.ಜಿ ಗಾಂಜಾವನ್ನು ರೈಲ್ವೆ ರಕ್ಷಣಾ ದಳದ (ಆರ್ಪಿಎಫ್) ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. </p>.<p>ನ. 1ರಂದು ಘಟನೆ ನಡೆದಿದ್ದು, ವಶಕ್ಕೆ ಪಡೆದ ಗಾಂಜಾ ಮೌಲ್ಯ ₹50 ಸಾವಿರ ಎಂದು ಅಂದಾಜಿಸಲಾಗಿದೆ. ಈ ಕುರಿತು ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಜಾರ್ಖಂಡ್ನ ಟಾಟಾ ನಗರ ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ನಡುವೆ ವಾರದಲ್ಲಿ ಒಮ್ಮೆ ಮಾತ್ರ ಸಂಚರಿಸುವ ರೈಲನ್ನು ರೈಲ್ವೆ ಪೊಲೀಸರು ಮತ್ತು ಆರ್ಪಿಎಫ್ ಅಧಿಕಾರಿಗಳು ನ. 1ರಂದು ಪರಿಶೀಲನೆ ನಡೆಸಿದ್ದರು. </p>.<p>ಈ ವೇಳೆ ಆಸನವೊಂದರ ಕೆಳಗೆ ಪೊಟ್ಟಣವೊಂದು ಪತ್ತೆಯಾಗಿತ್ತು. ಆದರೆ, ಅದನ್ನು ಸಾಗಿಸಿ ತರುತ್ತಿರುವವರು ಯಾರೂ ಪತ್ತೆಯಾಗಲಿಲ್ಲ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p>ಕಾರ್ಯಚರಣೆಯಲ್ಲಿ ಆರ್ಪಿಎಫ್ ಕಮಾಂಡರ್ ಸಿದ್ದಲಿಂಗಪ್ಪ, ರೈಲ್ವೆ ಪೊಲೀಸ್ನ ಠಾಣಾಧಿಕಾರಿ ಜಿ. ನಾಗರಾಜ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. </p>.<p>18111–ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್ನಲ್ಲಿ ಆಗಿಂದ್ದಾಗೆ ಗಾಂಜಾ ಸಾಗಣೆಯಾಗುತ್ತಿರುವುದರ ಕುರಿತು ರೈಲ್ವೆ ಪೊಲೀಸರು ಮತ್ತು ರಕ್ಷಣಾ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿ ಮಾರ್ಗದ ‘18111–ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್’ ರೈಲಿನಲ್ಲಿ ಸಾಗಣೆ ಮಾಡಲಾಗುತ್ತಿದ್ದ ಐದು ಕೆ.ಜಿ ಗಾಂಜಾವನ್ನು ರೈಲ್ವೆ ರಕ್ಷಣಾ ದಳದ (ಆರ್ಪಿಎಫ್) ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. </p>.<p>ನ. 1ರಂದು ಘಟನೆ ನಡೆದಿದ್ದು, ವಶಕ್ಕೆ ಪಡೆದ ಗಾಂಜಾ ಮೌಲ್ಯ ₹50 ಸಾವಿರ ಎಂದು ಅಂದಾಜಿಸಲಾಗಿದೆ. ಈ ಕುರಿತು ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಜಾರ್ಖಂಡ್ನ ಟಾಟಾ ನಗರ ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ನಡುವೆ ವಾರದಲ್ಲಿ ಒಮ್ಮೆ ಮಾತ್ರ ಸಂಚರಿಸುವ ರೈಲನ್ನು ರೈಲ್ವೆ ಪೊಲೀಸರು ಮತ್ತು ಆರ್ಪಿಎಫ್ ಅಧಿಕಾರಿಗಳು ನ. 1ರಂದು ಪರಿಶೀಲನೆ ನಡೆಸಿದ್ದರು. </p>.<p>ಈ ವೇಳೆ ಆಸನವೊಂದರ ಕೆಳಗೆ ಪೊಟ್ಟಣವೊಂದು ಪತ್ತೆಯಾಗಿತ್ತು. ಆದರೆ, ಅದನ್ನು ಸಾಗಿಸಿ ತರುತ್ತಿರುವವರು ಯಾರೂ ಪತ್ತೆಯಾಗಲಿಲ್ಲ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p>ಕಾರ್ಯಚರಣೆಯಲ್ಲಿ ಆರ್ಪಿಎಫ್ ಕಮಾಂಡರ್ ಸಿದ್ದಲಿಂಗಪ್ಪ, ರೈಲ್ವೆ ಪೊಲೀಸ್ನ ಠಾಣಾಧಿಕಾರಿ ಜಿ. ನಾಗರಾಜ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. </p>.<p>18111–ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್ನಲ್ಲಿ ಆಗಿಂದ್ದಾಗೆ ಗಾಂಜಾ ಸಾಗಣೆಯಾಗುತ್ತಿರುವುದರ ಕುರಿತು ರೈಲ್ವೆ ಪೊಲೀಸರು ಮತ್ತು ರಕ್ಷಣಾ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>