ಕುರುಗೋಡು: ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಉಂಟಾಗಿ ಗುಡಿಸಲು ಮನೆ ಸುಟ್ಟು ಭಸ್ಮವಾದ ಘಟನೆ ತಾಲ್ಲೂಕಿನ ಎಚ್.ವೀರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಯಲ್ಲಪ್ಪ ಎನ್ನುವ ರೈತರಿಗೆ ಸೇರಿದ ಗುಡಿಸಲು ಇದಾಗಿದ್ದು, ರೈತ ಕುಟುಂಬದ ಸದಸ್ಯರೊಂದಿಗೆ ಜಮೀನಿಗೆ ತೆರಳಿದ ಸಂದರ್ಭದಲ್ಲಿ ಗುಡಿಸಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನವರು ಬೆಂಕಿ ಕಾಣಿಸಿಕೊಂಡಿರುವುದು ಕಂಡು ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹೆಚ್ಚಿಗೆ ಸಂಭವಿಸಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.
ಗುಡಿಸಲು ಮನೆಯ ಕಪಾಟಿನಲ್ಲಿ ಸಂಗ್ರಹಿಸಿದ್ದ ₹50 ಸಾವಿರ ನಗದು, 20 ಗ್ರಾಂ ತೂಕದ ವಿವಿಧ ಚಿನ್ನದ ಒಡವೆ, ಆಹಾರ ಪದಾರ್ಥ, ಬಟ್ಟೆ ಮತ್ತು ಇತರೇ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿ ನಷ್ಟ ಸಂಭವಿಸಿದೆ ಎಂದು ತಿಳಿಸಲಾಗಿದೆ.