<p><strong>ಹೂವಿನಹಡಗಲಿ</strong>: ‘ಬಳ್ಳಾರಿಯಲ್ಲಿ ನಡೆದ ಗಲಭೆ, ಗೂಂಡಾಗಿರಿ ಪ್ರಕರಣ ಪ್ರಜಾಪ್ರಭುತ್ವದ ಕಗ್ಗೊಲೆಯಂತಹ ಹೀನ ಕೃತ್ಯವಾಗಿದೆ’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪ್ರತಿನಿಧಿಗಳ ನಡೆನುಡಿ ಆದರ್ಶವಾಗಿರಬೇಕು. ಬಳ್ಳಾರಿಯ ಗೂಂಡಾಗಿರಿ ಜನಪ್ರತಿನಿಧಿಗಳನ್ನು ಅಸಹ್ಯದಿಂದ ನೋಡುವಂತೆ ಮಾಡಿದೆ. ಮಾಜಿ ಸಚಿವ, ಹಿರಿಯ ಶಾಸಕ ಜನಾರ್ದನರೆಡ್ಡಿ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದರು.</p>.<p>‘ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ವ್ಯಕ್ತಿಯ ಜೀವ ತೆಗೆದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವವರ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಕಾಯ್ದೆ ಜಾರಿಗೆ ತಂದಿದೆ. ಇದು ವಿರೋಧ ಪಕ್ಷಗಳ ಸಾಂವಿಧಾನಿಕ ಹಕ್ಕು ಕಸಿಯುವ ಪ್ರಯತ್ನ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ‘ಬಳ್ಳಾರಿಯಲ್ಲಿ ನಡೆದ ಗಲಭೆ, ಗೂಂಡಾಗಿರಿ ಪ್ರಕರಣ ಪ್ರಜಾಪ್ರಭುತ್ವದ ಕಗ್ಗೊಲೆಯಂತಹ ಹೀನ ಕೃತ್ಯವಾಗಿದೆ’ ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನಪ್ರತಿನಿಧಿಗಳ ನಡೆನುಡಿ ಆದರ್ಶವಾಗಿರಬೇಕು. ಬಳ್ಳಾರಿಯ ಗೂಂಡಾಗಿರಿ ಜನಪ್ರತಿನಿಧಿಗಳನ್ನು ಅಸಹ್ಯದಿಂದ ನೋಡುವಂತೆ ಮಾಡಿದೆ. ಮಾಜಿ ಸಚಿವ, ಹಿರಿಯ ಶಾಸಕ ಜನಾರ್ದನರೆಡ್ಡಿ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದರು.</p>.<p>‘ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ವ್ಯಕ್ತಿಯ ಜೀವ ತೆಗೆದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವವರ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಕಾಯ್ದೆ ಜಾರಿಗೆ ತಂದಿದೆ. ಇದು ವಿರೋಧ ಪಕ್ಷಗಳ ಸಾಂವಿಧಾನಿಕ ಹಕ್ಕು ಕಸಿಯುವ ಪ್ರಯತ್ನ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>