<p><strong>ಕಂಪ್ಲಿ</strong>: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಬೆಳೆದಿದ್ದ ಸುಗಂಧಿ, ಏಲಕ್ಕಿ, ಜಿ-9 ತಳಿ ಬಾಳೆ ಫಸಲು ಭಾನುವಾರ ರಾತ್ರಿ ಬೀಸಿದ ಬಿರುಗಾಳಿ ರಭಸಕ್ಕೆ ನೆಲಕ್ಕೊರಗಿದೆ.</p>.<p>ಅರಳಿಹಳ್ಳಿ ತಾಂಡಾ, ಶಂಕರಸಿಂಗ್ ಕ್ಯಾಂಪ್, ನೆಲ್ಲೂಡಿ ಕೊಟ್ಟಾಲು ಭಾಗದಲ್ಲಿ ಬೆಳೆದಿದ್ದ ಜಿ-9ತಳಿ ಬಾಳೆ ಪ್ರಥಮ(ಕನ್ಯಾ) ಫಲ ನೆಲಕಚ್ಚಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ.</p>.<p>‘8 ಎಕರೆ ಏಲಕ್ಕಿ, 12 ಎಕರೆ ಜಿ-9ತಳಿ ಬಾಳೆ ಬೆಳೆದಿದ್ದೆ. ಅದರಲ್ಲಿ ಎಕರೆಗೆ ಅಂದಾಜು 300 ಬಾಳೆಕಂಬಗಳು ಬಿದ್ದಿವೆ. ಈ ಮುನ್ನ ಸುಗಂಧಿ ಬಾಳೆ ಕೆ.ಜಿಗೆ ₹18ರಿಂದ ₹20, ಏಲಕ್ಕಿ ಬಾಳೆ ₹50ರಿಂದ ₹60ಕ್ಕೆ ಮಾರಾಟವಾಗುತ್ತಿತ್ತು. ಆದರೆ, ಈಗ ಬಾಳೆ ನೆಲಕಚ್ಚಿದ್ದರಿಂದ ಮಾರುಕಟ್ಟೆಯಲ್ಲಿ ಕ್ರಮವಾಗಿ ಕೆ.ಜಿಗೆ ₹13, ₹36ಕ್ಕೆ ಕುಸಿದಿದೆ’ ಎಂದು ಬಾಳೆ ಬೆಳೆಗಾರ ಕಾಕರ್ಲ ಭಾಸ್ಕರರಾವ್ ಬೇಸರ ವ್ಯಕ್ತಪಡಿಸಿದರು.</p>.<p>‘1,500 ಹೆಕ್ಟೇರ್ನಲ್ಲಿ ಬಾಳೆ ಬೆಳೆಯಲಾಗಿದ್ದು, ಅದರಲ್ಲಿ ಶೇ 20ರಷ್ಟು ಹಾನಿಯಾಗಿದೆ. ಕೂಡಲೇ ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ರೈತರಾದ ಚಲ್ಲಾ ರಂಗಯ್ಯ ಮತ್ತು ಅಯ್ಯೋದಿ ವೆಂಕಟೇಶ ಒತ್ತಾಯಿಸಿದರು.</p>.<p>‘ಬಾಳೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸಹಾಯಕ ತೋಟಗಾರಿಕೆ ಅಧಿಕಾರಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮಕ್ಕಾಗಿ ಹಿರಿಯ ಅಧಿಕಾರಿಗಳಿಗೆ ರವಾನಿಸುತ್ತೇನೆ’ ಎಂದು ಹಿರಿಯ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯ ಎರಗಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಬೆಳೆದಿದ್ದ ಸುಗಂಧಿ, ಏಲಕ್ಕಿ, ಜಿ-9 ತಳಿ ಬಾಳೆ ಫಸಲು ಭಾನುವಾರ ರಾತ್ರಿ ಬೀಸಿದ ಬಿರುಗಾಳಿ ರಭಸಕ್ಕೆ ನೆಲಕ್ಕೊರಗಿದೆ.</p>.<p>ಅರಳಿಹಳ್ಳಿ ತಾಂಡಾ, ಶಂಕರಸಿಂಗ್ ಕ್ಯಾಂಪ್, ನೆಲ್ಲೂಡಿ ಕೊಟ್ಟಾಲು ಭಾಗದಲ್ಲಿ ಬೆಳೆದಿದ್ದ ಜಿ-9ತಳಿ ಬಾಳೆ ಪ್ರಥಮ(ಕನ್ಯಾ) ಫಲ ನೆಲಕಚ್ಚಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ.</p>.<p>‘8 ಎಕರೆ ಏಲಕ್ಕಿ, 12 ಎಕರೆ ಜಿ-9ತಳಿ ಬಾಳೆ ಬೆಳೆದಿದ್ದೆ. ಅದರಲ್ಲಿ ಎಕರೆಗೆ ಅಂದಾಜು 300 ಬಾಳೆಕಂಬಗಳು ಬಿದ್ದಿವೆ. ಈ ಮುನ್ನ ಸುಗಂಧಿ ಬಾಳೆ ಕೆ.ಜಿಗೆ ₹18ರಿಂದ ₹20, ಏಲಕ್ಕಿ ಬಾಳೆ ₹50ರಿಂದ ₹60ಕ್ಕೆ ಮಾರಾಟವಾಗುತ್ತಿತ್ತು. ಆದರೆ, ಈಗ ಬಾಳೆ ನೆಲಕಚ್ಚಿದ್ದರಿಂದ ಮಾರುಕಟ್ಟೆಯಲ್ಲಿ ಕ್ರಮವಾಗಿ ಕೆ.ಜಿಗೆ ₹13, ₹36ಕ್ಕೆ ಕುಸಿದಿದೆ’ ಎಂದು ಬಾಳೆ ಬೆಳೆಗಾರ ಕಾಕರ್ಲ ಭಾಸ್ಕರರಾವ್ ಬೇಸರ ವ್ಯಕ್ತಪಡಿಸಿದರು.</p>.<p>‘1,500 ಹೆಕ್ಟೇರ್ನಲ್ಲಿ ಬಾಳೆ ಬೆಳೆಯಲಾಗಿದ್ದು, ಅದರಲ್ಲಿ ಶೇ 20ರಷ್ಟು ಹಾನಿಯಾಗಿದೆ. ಕೂಡಲೇ ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನಷ್ಟ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ರೈತರಾದ ಚಲ್ಲಾ ರಂಗಯ್ಯ ಮತ್ತು ಅಯ್ಯೋದಿ ವೆಂಕಟೇಶ ಒತ್ತಾಯಿಸಿದರು.</p>.<p>‘ಬಾಳೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಸಹಾಯಕ ತೋಟಗಾರಿಕೆ ಅಧಿಕಾರಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮಕ್ಕಾಗಿ ಹಿರಿಯ ಅಧಿಕಾರಿಗಳಿಗೆ ರವಾನಿಸುತ್ತೇನೆ’ ಎಂದು ಹಿರಿಯ ತೋಟಗಾರಿಕೆ ನಿರ್ದೇಶಕರಾದ ರತ್ನಪ್ರಿಯ ಎರಗಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>