<p>ಪ್ರಜಾವಾಣಿ ವಾರ್ತೆ</p>.<p>ಕುರುಗೋಡು: ತಾಲ್ಲೂಕಿನ ಎಚ್. ವೀರಾಪುರ ಗ್ರಾಮದಲ್ಲಿ ಬನಶಂಕರಿ ದೇವಿ ರಥೋತ್ಸವ ಸೋಮವಾರ ಸಡಗರದಿಂದ ಜರುಗಿತು.</p>.<p>ರಥೋತ್ಸವದ ಅಂಗವಾಗಿ ಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ, ಧಾರ್ಮಿಕ ಕಾರ್ಯಗಳು ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ತಾತನವರ ದರ್ಶನ ಪಡೆದು ಹೂ–ಹಣ್ಣು ಮತ್ತು ಕಾಯಿ ಸಮರ್ಪಿಸಿದರು.</p>.<p>ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಎದುರು ಬಸವಣ್ಣ ಕಟ್ಟೆಯವರೆಗೆ ಎಳೆದು ಪುನಃ ಸ್ವಸ್ಥಳಕ್ಕೆ ಎಳೆದು ತಂದರು. ರಥ ಸಾಗಿದ ದಾರಿಯುದ್ದಕ್ಕೂ ಭಕ್ತರು ಬನಶಂಕರಿದೇವಿಗೆ ಜಯಕಾರ ಕೂಗಿದರು. ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು ರಥಕ್ಕೆ ಹೂ ಹಣ್ಣು ಎಸೆದು ಹರಕೆ ತೀರಿಸಿದರು.</p>.<p>ಹೆಚ್ಚಿನ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಸಿಪಿಐ ವಿಶ್ವನಾಥ ಹಿರೇಗೌಡರ್, ಪಿಎಸ್ಐ ಸುಪ್ರಿತ್ ಮತ್ತು ಸಿಬ್ಬಂದಿ ರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಬಂದೋಬಸ್ತ್ ಮಾಡಲಾಗಿತ್ತು.</p>.<p>ಧರ್ಮಸಭೆ: ರಥೋತ್ಸವದ ಅಂಗವಾಗಿ ಮಠದಲ್ಲಿ ಬೆಳಿಗ್ಗೆ 1111 ಮಹಿಳೆಯರಿಗೆ ಉಡಿತುಂಬಲಾಯಿತು.</p>.<p>ನಂತರ ಮಾತನಾಡಿದ ಮಠದ ಪೀಠಾಧಿಪತಿ ಜಡೇಶ ತಾತ, ಆಧ್ಯಾತ್ಮಿಕ ಚಿಂತನೆಗಳು ನೆಮ್ಮದಿಯ ಜೀವನಕ್ಕೆ ಸೋಪಾನವಾಗಲಿದೆ ಎಂದರು.</p>.<p>ಆಧ್ಯಾತ್ಮಿಕ ಬದುಕಿನಲ್ಲಿದ್ದು, ಲೌಕಿಕ ಬದುಕನ್ನು ಜಯಿಸಬೇಕು ಎಂದರು. ಎಮ್ಮಿಗನೂರು ಹಂಪಿ ಸಾವಿರ ದೇವರು ಗುರುಮಹಾಂತಿನ ಮಠದ ವಾಮದೇವ ಶಿವಾಚಾರ್ಯ ಶ್ರೀ, ಸೋಮಸಮುದ್ರ ಗ್ರಾಮದ ಕೊಟ್ಟೂರು ಸ್ವಾಮಿ ಮಠದ ಸಿದ್ದಲಿಂಗ ಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕುರುಗೋಡು: ತಾಲ್ಲೂಕಿನ ಎಚ್. ವೀರಾಪುರ ಗ್ರಾಮದಲ್ಲಿ ಬನಶಂಕರಿ ದೇವಿ ರಥೋತ್ಸವ ಸೋಮವಾರ ಸಡಗರದಿಂದ ಜರುಗಿತು.</p>.<p>ರಥೋತ್ಸವದ ಅಂಗವಾಗಿ ಮಠದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ, ಧಾರ್ಮಿಕ ಕಾರ್ಯಗಳು ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ತಾತನವರ ದರ್ಶನ ಪಡೆದು ಹೂ–ಹಣ್ಣು ಮತ್ತು ಕಾಯಿ ಸಮರ್ಪಿಸಿದರು.</p>.<p>ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಎದುರು ಬಸವಣ್ಣ ಕಟ್ಟೆಯವರೆಗೆ ಎಳೆದು ಪುನಃ ಸ್ವಸ್ಥಳಕ್ಕೆ ಎಳೆದು ತಂದರು. ರಥ ಸಾಗಿದ ದಾರಿಯುದ್ದಕ್ಕೂ ಭಕ್ತರು ಬನಶಂಕರಿದೇವಿಗೆ ಜಯಕಾರ ಕೂಗಿದರು. ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು ರಥಕ್ಕೆ ಹೂ ಹಣ್ಣು ಎಸೆದು ಹರಕೆ ತೀರಿಸಿದರು.</p>.<p>ಹೆಚ್ಚಿನ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಸಿಪಿಐ ವಿಶ್ವನಾಥ ಹಿರೇಗೌಡರ್, ಪಿಎಸ್ಐ ಸುಪ್ರಿತ್ ಮತ್ತು ಸಿಬ್ಬಂದಿ ರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಬಂದೋಬಸ್ತ್ ಮಾಡಲಾಗಿತ್ತು.</p>.<p>ಧರ್ಮಸಭೆ: ರಥೋತ್ಸವದ ಅಂಗವಾಗಿ ಮಠದಲ್ಲಿ ಬೆಳಿಗ್ಗೆ 1111 ಮಹಿಳೆಯರಿಗೆ ಉಡಿತುಂಬಲಾಯಿತು.</p>.<p>ನಂತರ ಮಾತನಾಡಿದ ಮಠದ ಪೀಠಾಧಿಪತಿ ಜಡೇಶ ತಾತ, ಆಧ್ಯಾತ್ಮಿಕ ಚಿಂತನೆಗಳು ನೆಮ್ಮದಿಯ ಜೀವನಕ್ಕೆ ಸೋಪಾನವಾಗಲಿದೆ ಎಂದರು.</p>.<p>ಆಧ್ಯಾತ್ಮಿಕ ಬದುಕಿನಲ್ಲಿದ್ದು, ಲೌಕಿಕ ಬದುಕನ್ನು ಜಯಿಸಬೇಕು ಎಂದರು. ಎಮ್ಮಿಗನೂರು ಹಂಪಿ ಸಾವಿರ ದೇವರು ಗುರುಮಹಾಂತಿನ ಮಠದ ವಾಮದೇವ ಶಿವಾಚಾರ್ಯ ಶ್ರೀ, ಸೋಮಸಮುದ್ರ ಗ್ರಾಮದ ಕೊಟ್ಟೂರು ಸ್ವಾಮಿ ಮಠದ ಸಿದ್ದಲಿಂಗ ಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>