ನಗರದ ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು. ಗ್ರೇಡ್– 2 ತಹಶೀಲ್ದಾರ್ ಮೇಘನಾ, ಶಿರಸ್ತೇದಾರ ಶ್ರೀಧರ್, ರಮೇಶ್, ಆಹಾರ ಇಲಾಖೆಯ ಮಂಜುನಾಥ್, ಬಸವ ಬಳಗದ ಸದಸ್ಯ ಬಸವಲಿಂಗಪ್ಪ ಇದ್ದರು.