<p><strong>ಬಳ್ಳಾರಿ</strong>: ‘ನಟನೊಬ್ಬ ಹೇಗಿರಬೇಕು ಎಂಬ ಪ್ರಶ್ನೆಗೆ ಬಳ್ಳಾರಿಯ ರಾಘವರೇ ಉತ್ತರ’ ಎಂದು ಬಾಂಬೆ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಅಭಿಪ್ರಾಯ ಪಟ್ಟರು.</p>.<p>ಬಳ್ಳಾರಿ ರಾಘವರ 144ನೇ ಜಯಂತಿಯ ಅಂಗವಾಗಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ನಾಟಕೋತ್ಸವ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಒಂದು ಕಣ್ಣಿನಲ್ಲಿ ಶಾಂತಿಯನ್ನೂ, ಮತ್ತೊಂದು ಕಣ್ಣಲ್ಲಿ ಕ್ರೋಧವನ್ನು ತೋರಿಸಬಲ್ಲ ನಟನೆ ರಾಘವರಿಗೆ ಮಾತ್ರ ಸಾಧ್ಯ. ಕಾಲಕ್ಕೆ ತಕ್ಕ ಹಾಗೆ ನಾಟಕಗಳು ಸಹ ಬದಲಾಗಬೇಕು. ಯುವಕರು ನಾಟಕ ರಂಗಕ್ಕೆ ಬರಲು ಪೋಷಕರು ಪ್ರೋತ್ಸಾಹಿಸಬೇಕು’ ಎಂದು ಹೇಳಿದರು. </p>.<p>‘ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ತಿಂಗಳು ತೆಲುಗು ಮತ್ತು ಕನ್ನಡ ನಾಟಕಗಳನ್ನು ಪ್ರದರ್ಶಿಸಿ ಕಲಾವಿದರಿಗೆ ಬೇಕಾಗುವ ಎಲ್ಲಾ ಸಹಕಾರವನ್ನು ನಾವು ಒದಗಿಸುತ್ತಿದ್ದೇವೆ’ ಎಂದು ರಾಘವ ಮೆಮೋರಿಯಲ್ ಅಸೋಸಿಯೇಷನ್ನ ಅಧ್ಯಕ್ಷ ಕೆ.ಕೋಟೇಶ್ವರರಾವ್ ಹೇಳಿದರು.</p>.<p>ನಟ, ಪಶ್ಚಿಮ ಗೋದಾವರಿ ಜಿಲ್ಲೆಯ ವಾಡ್ರೇವು ಸುಂದರರಾವ್ ಮಾತನಾಡಿ, ‘ಬಳ್ಳಾರಿಯಲ್ಲಿ ರಾಘವ ಕಲಾಮಂದಿರ ಸ್ಥಾಪನೆಯಾದ ದಿನದಿಂದ ನಾಟಕಕ್ಕೆ, ಕಲಾವಿದರಿಗೆ ಮರು ಜೀವ ಬಂದಿದೆ’ ಎಂದರು. </p>.<p>ಈ ವರ್ಷದ ಬಳ್ಳಾರಿ ರಾಘವ ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಕೊನೇಟಿ ಸುಬ್ಬರಾಜು ಮಾತನಾಡಿ, ‘ರಂಗಭೂಮಿಯಲ್ಲಿ ರಾಘವರು ಬಹುದೊಡ್ಡ ಸಾಧಕರು. ಅಂಥವರ ಹೆಸರಿನಲ್ಲಿ ನನಗೆ ಪ್ರಶಸ್ತಿ ಲಭಿಸಿರುವುದು ನನ್ನ ಜನ್ಮ ಜನ್ಮದ ಪುಣ್ಯ’ ಎಂದರು. </p>.<p>ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಕೆ. ಚನ್ನಪ್ಪ, ಉಪಾಧ್ಯಕ್ಷ ರಮೇಶ್ ಗೌಡ ಪಾಟೀಲ, ಕಾರ್ಯದರ್ಶಿ ಎಚ್. ವಿಷ್ಣುವರ್ಧನ ರೆಡ್ಡಿ, ನಾಮ ಪ್ರಕಾಶ ಜಂಟಿ ಕಾರ್ಯದರ್ಶಿ ಎಂ ರಾಮಾಂಜನೇಯಲು, ಖಜಾಂಚಿ ಪಿ.ಧನಂಜಯ ಇದ್ದರು. </p>.<p>ಗುಂಟೂರಿನ ಶ್ರೀ ಅಮೃತ ಲಹರಿ ಥಿಯೇಟರ್ ಆರ್ಟ್ಸ್ ತಂಡದವರು ‘ನಾನ್ನ ನೇನು ವಚ್ಚೇಸ್ತ’ ಎಂಬ ಸಾಮಾಜಿಕ ನಾಟಕ ಪ್ರಸ್ತುತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ನಟನೊಬ್ಬ ಹೇಗಿರಬೇಕು ಎಂಬ ಪ್ರಶ್ನೆಗೆ ಬಳ್ಳಾರಿಯ ರಾಘವರೇ ಉತ್ತರ’ ಎಂದು ಬಾಂಬೆ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಅಭಿಪ್ರಾಯ ಪಟ್ಟರು.</p>.<p>ಬಳ್ಳಾರಿ ರಾಘವರ 144ನೇ ಜಯಂತಿಯ ಅಂಗವಾಗಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ನಾಟಕೋತ್ಸವ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಒಂದು ಕಣ್ಣಿನಲ್ಲಿ ಶಾಂತಿಯನ್ನೂ, ಮತ್ತೊಂದು ಕಣ್ಣಲ್ಲಿ ಕ್ರೋಧವನ್ನು ತೋರಿಸಬಲ್ಲ ನಟನೆ ರಾಘವರಿಗೆ ಮಾತ್ರ ಸಾಧ್ಯ. ಕಾಲಕ್ಕೆ ತಕ್ಕ ಹಾಗೆ ನಾಟಕಗಳು ಸಹ ಬದಲಾಗಬೇಕು. ಯುವಕರು ನಾಟಕ ರಂಗಕ್ಕೆ ಬರಲು ಪೋಷಕರು ಪ್ರೋತ್ಸಾಹಿಸಬೇಕು’ ಎಂದು ಹೇಳಿದರು. </p>.<p>‘ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ತಿಂಗಳು ತೆಲುಗು ಮತ್ತು ಕನ್ನಡ ನಾಟಕಗಳನ್ನು ಪ್ರದರ್ಶಿಸಿ ಕಲಾವಿದರಿಗೆ ಬೇಕಾಗುವ ಎಲ್ಲಾ ಸಹಕಾರವನ್ನು ನಾವು ಒದಗಿಸುತ್ತಿದ್ದೇವೆ’ ಎಂದು ರಾಘವ ಮೆಮೋರಿಯಲ್ ಅಸೋಸಿಯೇಷನ್ನ ಅಧ್ಯಕ್ಷ ಕೆ.ಕೋಟೇಶ್ವರರಾವ್ ಹೇಳಿದರು.</p>.<p>ನಟ, ಪಶ್ಚಿಮ ಗೋದಾವರಿ ಜಿಲ್ಲೆಯ ವಾಡ್ರೇವು ಸುಂದರರಾವ್ ಮಾತನಾಡಿ, ‘ಬಳ್ಳಾರಿಯಲ್ಲಿ ರಾಘವ ಕಲಾಮಂದಿರ ಸ್ಥಾಪನೆಯಾದ ದಿನದಿಂದ ನಾಟಕಕ್ಕೆ, ಕಲಾವಿದರಿಗೆ ಮರು ಜೀವ ಬಂದಿದೆ’ ಎಂದರು. </p>.<p>ಈ ವರ್ಷದ ಬಳ್ಳಾರಿ ರಾಘವ ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಕೊನೇಟಿ ಸುಬ್ಬರಾಜು ಮಾತನಾಡಿ, ‘ರಂಗಭೂಮಿಯಲ್ಲಿ ರಾಘವರು ಬಹುದೊಡ್ಡ ಸಾಧಕರು. ಅಂಥವರ ಹೆಸರಿನಲ್ಲಿ ನನಗೆ ಪ್ರಶಸ್ತಿ ಲಭಿಸಿರುವುದು ನನ್ನ ಜನ್ಮ ಜನ್ಮದ ಪುಣ್ಯ’ ಎಂದರು. </p>.<p>ರಾಘವ ಮೆಮೋರಿಯಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಕೆ. ಚನ್ನಪ್ಪ, ಉಪಾಧ್ಯಕ್ಷ ರಮೇಶ್ ಗೌಡ ಪಾಟೀಲ, ಕಾರ್ಯದರ್ಶಿ ಎಚ್. ವಿಷ್ಣುವರ್ಧನ ರೆಡ್ಡಿ, ನಾಮ ಪ್ರಕಾಶ ಜಂಟಿ ಕಾರ್ಯದರ್ಶಿ ಎಂ ರಾಮಾಂಜನೇಯಲು, ಖಜಾಂಚಿ ಪಿ.ಧನಂಜಯ ಇದ್ದರು. </p>.<p>ಗುಂಟೂರಿನ ಶ್ರೀ ಅಮೃತ ಲಹರಿ ಥಿಯೇಟರ್ ಆರ್ಟ್ಸ್ ತಂಡದವರು ‘ನಾನ್ನ ನೇನು ವಚ್ಚೇಸ್ತ’ ಎಂಬ ಸಾಮಾಜಿಕ ನಾಟಕ ಪ್ರಸ್ತುತಪಡಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>