<p><strong>ಬಳ್ಳಾರಿ:</strong> ಕಡಿಮೆ ಬಡ್ಡಿ ದರದಲ್ಲಿ ₹ 10 ಸಾವಿರ ಸಾಲ ನೀಡಲಾಗುತ್ತದೆ ಎಂಬ ಪ್ರಕಟಣೆ ಮೇರೆಗೆ ನಗರದ ಗೌತಮ ನಗರದ ನಿವಾಸಿಗಳು ಇಲ್ಲಿನ ಗಡಿಗಿ ಚೆನ್ನಪ್ಪ ವೃತ್ತದಲ್ಲಿರುವ ಸುಕೋ ಬ್ಯಾಂಕ್ ಮುಂಭಾಗ ಗುರುವಾರ ಬೆಳಿಗ್ಗೆಯೇ ನೆರೆದಿದ್ದರು.</p>.<p>ಏಕಾಏಕಿ ಗುಂಪು ಸೇರಿದ ಜನರನ್ನು ವಾಪಸ್ ಕಳಿಸಲು ಪೊಲೀಸರು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.</p>.<p>'ಬ್ಯಾಂಕ್ ತೆರೆಯುವವರೆಗೂ ನಾವು ಇಲ್ಲೇ ಇರುತ್ತೇವೆ. ವ್ಯವಸ್ಥಾಪಕರು ಬರುವವರೆಗೂ ಹೋಗುವುದಿಲ್ಲ' ಎಂದು ಜನ ಪಟ್ಟುಹಿಡಿದು ನಿಂತರು.</p>.<p>'ಗುಂಪು ಸೇರಿದರೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯ ಬೇಕಾಗುತ್ತದೆ' ಎಂದು ಪೊಲೀಸರು ಎಚ್ಚರಿಕೆ ನೀಡಿದ ಜನ ಚದುರಿದರು.</p>.<p><strong>ಅಸಮಾಧಾನ:</strong>'ಸಾಲ ಕೊಡುತ್ತೇವೆ ಎಂದಿದ್ದಕ್ಕೆ ಬಂದಿದ್ದೇವೆ. ಈಗ ನೋಡಿದರೆ ಲಾಕ್ ಡೌನ್ ಮುಗಿವವರೆಗೂ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಅಲ್ಲಿವರೆಗೂ ಬಡವರು ಹೇಗೆ ಬದುಕಬೇಕು' ಎಂದು ಗೌತಮನಗರದ ಹೊನ್ನೂರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ವೆಂಕಟೇಶರಾವ್, ಲಾಕ್ ಡೌನ್ ಅವಧಿ ಮುಗಿದ ಬಳಿಕ ಅರ್ಜಿದಾರ ದಾಖಲೆ, ವಾಸಸ್ಥಳ ಪರಿಶೀಲನೆ ನಡೆಸಿ ಸಾಲ ವಿತರಿಸಲಾಗುವುದು. ಅಲ್ಲಿವರೆಗು ತಾಳ್ಮೆಯಿಂದ ಕಾಯಲೇಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕಡಿಮೆ ಬಡ್ಡಿ ದರದಲ್ಲಿ ₹ 10 ಸಾವಿರ ಸಾಲ ನೀಡಲಾಗುತ್ತದೆ ಎಂಬ ಪ್ರಕಟಣೆ ಮೇರೆಗೆ ನಗರದ ಗೌತಮ ನಗರದ ನಿವಾಸಿಗಳು ಇಲ್ಲಿನ ಗಡಿಗಿ ಚೆನ್ನಪ್ಪ ವೃತ್ತದಲ್ಲಿರುವ ಸುಕೋ ಬ್ಯಾಂಕ್ ಮುಂಭಾಗ ಗುರುವಾರ ಬೆಳಿಗ್ಗೆಯೇ ನೆರೆದಿದ್ದರು.</p>.<p>ಏಕಾಏಕಿ ಗುಂಪು ಸೇರಿದ ಜನರನ್ನು ವಾಪಸ್ ಕಳಿಸಲು ಪೊಲೀಸರು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.</p>.<p>'ಬ್ಯಾಂಕ್ ತೆರೆಯುವವರೆಗೂ ನಾವು ಇಲ್ಲೇ ಇರುತ್ತೇವೆ. ವ್ಯವಸ್ಥಾಪಕರು ಬರುವವರೆಗೂ ಹೋಗುವುದಿಲ್ಲ' ಎಂದು ಜನ ಪಟ್ಟುಹಿಡಿದು ನಿಂತರು.</p>.<p>'ಗುಂಪು ಸೇರಿದರೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯ ಬೇಕಾಗುತ್ತದೆ' ಎಂದು ಪೊಲೀಸರು ಎಚ್ಚರಿಕೆ ನೀಡಿದ ಜನ ಚದುರಿದರು.</p>.<p><strong>ಅಸಮಾಧಾನ:</strong>'ಸಾಲ ಕೊಡುತ್ತೇವೆ ಎಂದಿದ್ದಕ್ಕೆ ಬಂದಿದ್ದೇವೆ. ಈಗ ನೋಡಿದರೆ ಲಾಕ್ ಡೌನ್ ಮುಗಿವವರೆಗೂ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಅಲ್ಲಿವರೆಗೂ ಬಡವರು ಹೇಗೆ ಬದುಕಬೇಕು' ಎಂದು ಗೌತಮನಗರದ ಹೊನ್ನೂರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಬಗ್ಗೆ ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ವೆಂಕಟೇಶರಾವ್, ಲಾಕ್ ಡೌನ್ ಅವಧಿ ಮುಗಿದ ಬಳಿಕ ಅರ್ಜಿದಾರ ದಾಖಲೆ, ವಾಸಸ್ಥಳ ಪರಿಶೀಲನೆ ನಡೆಸಿ ಸಾಲ ವಿತರಿಸಲಾಗುವುದು. ಅಲ್ಲಿವರೆಗು ತಾಳ್ಮೆಯಿಂದ ಕಾಯಲೇಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>