ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಸರಬರಾಜು ಸ್ಥಗಿತ: ಬಳ್ಳಾರಿ ಬಂದ್‌ ಆರಂಭ

Published 10 ನವೆಂಬರ್ 2023, 5:54 IST
Last Updated 10 ನವೆಂಬರ್ 2023, 5:54 IST
ಅಕ್ಷರ ಗಾತ್ರ

ಬಳ್ಳಾರಿ: ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು ಖಂಡಿಸಿ ರೈತ ಸಂಘ ಶುಕ್ರವಾರ ಕರೆ ನೀಡಿರುವ ಬಳ್ಳಾರಿ ಬಂದ್‌ ಶುರುವಾಗಿದೆ.

ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ ವರೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಮಾಧವರೆಡ್ಡಿ ನೇತೃತ್ವದ ರೈತ ಸಂಘ ಬಳ್ಳಾರಿ ಬಂದ್‌ಗೆ ಕರೆ ನೀಡಿದೆ. 

ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನವೆಂಬರ್ ಅಂತ್ಯದವರೆಗೆ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ನಂತರ ಬೆಂಗಳೂರಿನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ನ.10ರ ವರೆಗೆ ಮಾತ್ರ ನೀಡಲಿದೆ ಎಂದು ಹೇಳಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.

ಪೆಟ್ರೋಲ್‌ ಬಂಕ್‌, ಹಾಲಿನ ಅಂಗಡಿಗಳು ಸೇರಿ ಅಗತ್ಯ ಸೇವೆಗಳು ಆರಂಭಗೊಂಡಿವೆ. ಹೊಟೇಲ್‌ಗಳು ವಿರಳ ಸಂಖ್ಯೆಯಲ್ಲಿ ತೆರೆದಿವೆ. ಬೀದಿ ಬದಿ ವ್ಯಾಪಾರಸ್ಥರು ವಹಿವಾಟನ್ನು ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ.

ರೈತ ಸಂಘದ ಬಂದ್‌ಗೆ ವಿವಿಧ ಸಂಘಟನೆಗಳಿಗೆಬೆಂಬಲ ವ್ಯಕ್ತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT