<p><strong>ಬಳ್ಳಾರಿ:</strong> ‘ಬಳ್ಳಾರಿ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸ್ಥಳೀಯ ಸಂಸ್ಥೆಯೂ ಕೂಡ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದೆ. ಆದರೆ ಸಾರ್ವಜನಿಕ ಸೌಲಭ್ಯಗಳು ಮಾತ್ರ ಅಭಿವೃದ್ಧಿಯಾಗಿಲ್ಲ’ ಎಂದು ಡಾ.ಅರವಿಂದ್ ಪಟೇಲ್ ಅಭಿಪ್ರಾಯಪಟ್ಟರು. </p>.<p>ಬಳ್ಳಾರಿಯಲ್ಲಿ ರಿಂಗ್ ರಸ್ತೆ, ಸುಧಾ ಕ್ರಾಸ್ ಮೇಲ್ಸೇತುವೆ, ನಗರದ ಸ್ವಚ್ಛತೆ, ಉತ್ತಮ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ (ಬಿಎನ್ಎಚ್ಎಸ್) ವತಿಯಿಂದ ಭಾನುವಾರ ಗಾಂಧಿ ಭವನದಲ್ಲಿ ಜನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ನಗರದಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡುತ್ತಿಲ್ಲ, ಧೂಳು ತುಂಬಿದ ರಸ್ತೆಗಳು ಹೆಚ್ಚುತ್ತಿವೆ, ಶುದ್ಧ ಕುಡಿಯುವ ನೀರಿಲ್ಲ. ಇಂಥ ಹಲವು ಸಮಸ್ಯೆಗಳು ಜನರ ಆರೋಗ್ಯದೊಂದಿಗೆ ತಳಕುಹಾಕಿಕೊಂಡಿವೆ. ಇದರಿಂದ ಅನಾರೋಗ್ಯ ಹೆಚ್ಚುತ್ತಿದೆ’ ಎಂದರು. </p>.<p>ಡಾ.ಗೋವರ್ಧನ್ ರೆಡ್ಡಿ ಮಾತನಾಡಿ, ‘ಬಳ್ಳಾರಿ ಇನ್ನೂ ಮೂಲ ಸೌಲಭ್ಯಗಳಿಲ್ಲದೆ ಸೊರಗುತ್ತಿದೆ. ನಗರದ ರಸ್ತೆಗಳು ಅವೈಜ್ಞಾನಿಕವಾಗಿವೆ. ಅಲ್ಪ ಮಳೆ ಬಂದರೂ ಮನೆಗಳಿಗೆ ನೀರು ನುಗ್ಗುತ್ತಿದೆ. ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಇಲ್ಲಿ ಎಲ್ಲವೂ ಅಸ್ತವ್ಯಸ್ತ. ಇದರ ವಿರುದ್ಧ ಜನ ಧ್ವನಿ ಎತ್ತಬೇಕು’ ಎಂದರು. </p>.<p>ಬಿಎನ್ಎಚ್ಎಸ್ ಜಿಲ್ಲಾ ಸಂಚಾಲಕ ಸೋಮಶೇಖರ್ ಗೌಡ ಮಾತನಾಡಿ, ‘ಕೋಟ್ಯಂತರ ರೂಪಾಯಿ ತೆರಿಗೆ ಹಣ ಕಟ್ಟಿಸಿಕೊಳ್ಳುತ್ತಿರುವ ಪಾಲಿಕೆ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಬದಲು, ದುಂದುವೆಚ್ಚ ಮಾಡುತ್ತಿದೆ. ಜನತೆ ಇದನ್ನೆಲ್ಲ ಮೂಕ ಪ್ರೇಕ್ಷಕರಾಗಿ ನೋಡುತ್ತಾ ಕುಳಿತುಕೊಳ್ಳಬಾರದು‘ ಎಂದರು. </p>.<p>ಸಂಘಟನೆಯ ತಾಂತ್ರಿಕ ಸಲಹೆಗಾರ ಉದ್ದೀಹಾಳ್ ಮತ್ತು ಮುರ್ತುಜಾ ಸಾಬ್ , ಕಾರ್ಯಕಾರಿ ಸಮಿತಿ ಸದಸ್ಯ ಡಾ.ಎನ್.ಪ್ರಮೋದ್ ಮಾತನಾಡಿದರು. ಸಮಿತಿಯ ಸಲಹೆಗಾರರಾಗಿ ಡಾ.ಯೋಗಾನಂದ ರೆಡ್ಡಿ, ನರಸಣ್ಣ, ಶಾಮಸುಂದರ್, ಗುರುರಾಜ್, ಸಂಚಾಲಕ ಆರ್. ಸೋಮಶೇಖರ್ ಗೌಡ ಸೇರಿದಂತೆ ಒಟ್ಟು 17 ಸದಸ್ಯರುಗಳ ಹೊಸ ಸಮಿತಿ ರಚಿಸಲಾಯಿತು.</p>.<p>ಸಮಿತಿ ಸದಸ್ಯರು ಸೇರಿದಂತೆ ವಿವಿಧ ಬಡಾವಣೆಗಳ ನಾಗರಿಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಬಳ್ಳಾರಿ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸ್ಥಳೀಯ ಸಂಸ್ಥೆಯೂ ಕೂಡ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದೆ. ಆದರೆ ಸಾರ್ವಜನಿಕ ಸೌಲಭ್ಯಗಳು ಮಾತ್ರ ಅಭಿವೃದ್ಧಿಯಾಗಿಲ್ಲ’ ಎಂದು ಡಾ.ಅರವಿಂದ್ ಪಟೇಲ್ ಅಭಿಪ್ರಾಯಪಟ್ಟರು. </p>.<p>ಬಳ್ಳಾರಿಯಲ್ಲಿ ರಿಂಗ್ ರಸ್ತೆ, ಸುಧಾ ಕ್ರಾಸ್ ಮೇಲ್ಸೇತುವೆ, ನಗರದ ಸ್ವಚ್ಛತೆ, ಉತ್ತಮ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ (ಬಿಎನ್ಎಚ್ಎಸ್) ವತಿಯಿಂದ ಭಾನುವಾರ ಗಾಂಧಿ ಭವನದಲ್ಲಿ ಜನ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ನಗರದಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡುತ್ತಿಲ್ಲ, ಧೂಳು ತುಂಬಿದ ರಸ್ತೆಗಳು ಹೆಚ್ಚುತ್ತಿವೆ, ಶುದ್ಧ ಕುಡಿಯುವ ನೀರಿಲ್ಲ. ಇಂಥ ಹಲವು ಸಮಸ್ಯೆಗಳು ಜನರ ಆರೋಗ್ಯದೊಂದಿಗೆ ತಳಕುಹಾಕಿಕೊಂಡಿವೆ. ಇದರಿಂದ ಅನಾರೋಗ್ಯ ಹೆಚ್ಚುತ್ತಿದೆ’ ಎಂದರು. </p>.<p>ಡಾ.ಗೋವರ್ಧನ್ ರೆಡ್ಡಿ ಮಾತನಾಡಿ, ‘ಬಳ್ಳಾರಿ ಇನ್ನೂ ಮೂಲ ಸೌಲಭ್ಯಗಳಿಲ್ಲದೆ ಸೊರಗುತ್ತಿದೆ. ನಗರದ ರಸ್ತೆಗಳು ಅವೈಜ್ಞಾನಿಕವಾಗಿವೆ. ಅಲ್ಪ ಮಳೆ ಬಂದರೂ ಮನೆಗಳಿಗೆ ನೀರು ನುಗ್ಗುತ್ತಿದೆ. ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಇಲ್ಲಿ ಎಲ್ಲವೂ ಅಸ್ತವ್ಯಸ್ತ. ಇದರ ವಿರುದ್ಧ ಜನ ಧ್ವನಿ ಎತ್ತಬೇಕು’ ಎಂದರು. </p>.<p>ಬಿಎನ್ಎಚ್ಎಸ್ ಜಿಲ್ಲಾ ಸಂಚಾಲಕ ಸೋಮಶೇಖರ್ ಗೌಡ ಮಾತನಾಡಿ, ‘ಕೋಟ್ಯಂತರ ರೂಪಾಯಿ ತೆರಿಗೆ ಹಣ ಕಟ್ಟಿಸಿಕೊಳ್ಳುತ್ತಿರುವ ಪಾಲಿಕೆ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಬದಲು, ದುಂದುವೆಚ್ಚ ಮಾಡುತ್ತಿದೆ. ಜನತೆ ಇದನ್ನೆಲ್ಲ ಮೂಕ ಪ್ರೇಕ್ಷಕರಾಗಿ ನೋಡುತ್ತಾ ಕುಳಿತುಕೊಳ್ಳಬಾರದು‘ ಎಂದರು. </p>.<p>ಸಂಘಟನೆಯ ತಾಂತ್ರಿಕ ಸಲಹೆಗಾರ ಉದ್ದೀಹಾಳ್ ಮತ್ತು ಮುರ್ತುಜಾ ಸಾಬ್ , ಕಾರ್ಯಕಾರಿ ಸಮಿತಿ ಸದಸ್ಯ ಡಾ.ಎನ್.ಪ್ರಮೋದ್ ಮಾತನಾಡಿದರು. ಸಮಿತಿಯ ಸಲಹೆಗಾರರಾಗಿ ಡಾ.ಯೋಗಾನಂದ ರೆಡ್ಡಿ, ನರಸಣ್ಣ, ಶಾಮಸುಂದರ್, ಗುರುರಾಜ್, ಸಂಚಾಲಕ ಆರ್. ಸೋಮಶೇಖರ್ ಗೌಡ ಸೇರಿದಂತೆ ಒಟ್ಟು 17 ಸದಸ್ಯರುಗಳ ಹೊಸ ಸಮಿತಿ ರಚಿಸಲಾಯಿತು.</p>.<p>ಸಮಿತಿ ಸದಸ್ಯರು ಸೇರಿದಂತೆ ವಿವಿಧ ಬಡಾವಣೆಗಳ ನಾಗರಿಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>