<p><strong>ಬಳ್ಳಾರಿ</strong>: ನಗರ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ನಂದಾರೆಡ್ಡಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಬುಧವಾರ ಆದೇಶಿಸಿದೆ. </p>.<p>ಬಳ್ಳಾರಿ ನಗರ ಡಿಎಸ್ಪಿಯಾಗಿದ್ದ ಚಂದ್ರಕಾಂತ ನಂದಾರೆಡ್ಡಿ ಅವರನ್ನು ರಾಜ್ಯ ಗುಪ್ತವಾರ್ತೆಗೆ ನಿಯೋಜಿಸಲಾಗಿದೆ. ಆದರೆ, ನಿರ್ದಿಷ್ಟ ಜಾಗ ತೋರಿಸಿಲ್ಲ. ಅವರ ವರ್ಗಾವಣೆಯಿಂದ ತೆರವಾಗಿದ್ದ ನಗರ ಡಿಎಸ್ಪಿ ಸ್ಥಾನಕ್ಕೆ ಬೆಂಗಳೂರು ನಗರ ಸಿಸಿಬಿ ಡಿಎಸ್ಪಿಯಾಗಿದ್ದ ಗೋವಿಂದರಾಜು ವಿ. ಅವರನ್ನು ನಿಯೋಜಿಸಲಾಗಿದೆ. </p>.<p>ಕುರುಗೋಡು ವೃತ್ತದ ಇನ್ಸ್ಪೆಕ್ಟರ್ ವಿಶ್ವನಾಥ ಹಿರೇಗೌಡರ್ ಅವರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ವೃತ್ತಕ್ಕೆ ವರ್ಗಾಯಿಸಲಾಗಿದ್ದು, ಕುರುಗೋಡಿಗೆ ಬಾಳನಗೌಡ ಎಸ್. ಮಾನಶೆಟ್ಟರ್ ಅವರನ್ನು ನಿಯೋಜಿಸಲಾಗಿದೆ. </p>.<p>ಬಳ್ಳಾರಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಅಯ್ಯನಗೌಡ ವಿ. ಪಾಟೀಲ ಅವರನ್ನು ವಿಜಯನಗರದ ಡಿ.ಎಸ್.ಬಿಗೆ ಕಳುಹಿಸಲಾಗಿದೆ. ಪಿ.ಡಿ ಹಳ್ಳಿ ಠಾಣೆಯಲ್ಲಿದ್ದ ರುದ್ರಪ್ಪ ಎಲ್. ಅವರನ್ನು ಸಂಚಾರ ಠಾಣೆಗೆ ನಿಯೋಜನೆ ಮಾಡಲಾಗಿದೆ. </p>.<p>ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದ ಇನ್ಸ್ಪೆಕ್ಟರ್ ಸುಭಾಷ್ ಚಂದ್ರ ಅವರನ್ನು ಪಿ.ಡಿ ಹಳ್ಳಿ ಠಾಣೆಗೆ ನಿಯೋಜಿಸಲಾಗಿದೆ. </p>.<p>ಸಿಇಎನ್ ಠಾಣೆಯಲ್ಲಿದ್ದ ಇನ್ಸ್ಪೆಕ್ಟರ್ ರಮಾಕಾಂತ್ ಯಲ್ಲಪ್ಪ ಹುಲ್ಲೂರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ನಗರ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ನಂದಾರೆಡ್ಡಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಬುಧವಾರ ಆದೇಶಿಸಿದೆ. </p>.<p>ಬಳ್ಳಾರಿ ನಗರ ಡಿಎಸ್ಪಿಯಾಗಿದ್ದ ಚಂದ್ರಕಾಂತ ನಂದಾರೆಡ್ಡಿ ಅವರನ್ನು ರಾಜ್ಯ ಗುಪ್ತವಾರ್ತೆಗೆ ನಿಯೋಜಿಸಲಾಗಿದೆ. ಆದರೆ, ನಿರ್ದಿಷ್ಟ ಜಾಗ ತೋರಿಸಿಲ್ಲ. ಅವರ ವರ್ಗಾವಣೆಯಿಂದ ತೆರವಾಗಿದ್ದ ನಗರ ಡಿಎಸ್ಪಿ ಸ್ಥಾನಕ್ಕೆ ಬೆಂಗಳೂರು ನಗರ ಸಿಸಿಬಿ ಡಿಎಸ್ಪಿಯಾಗಿದ್ದ ಗೋವಿಂದರಾಜು ವಿ. ಅವರನ್ನು ನಿಯೋಜಿಸಲಾಗಿದೆ. </p>.<p>ಕುರುಗೋಡು ವೃತ್ತದ ಇನ್ಸ್ಪೆಕ್ಟರ್ ವಿಶ್ವನಾಥ ಹಿರೇಗೌಡರ್ ಅವರನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ವೃತ್ತಕ್ಕೆ ವರ್ಗಾಯಿಸಲಾಗಿದ್ದು, ಕುರುಗೋಡಿಗೆ ಬಾಳನಗೌಡ ಎಸ್. ಮಾನಶೆಟ್ಟರ್ ಅವರನ್ನು ನಿಯೋಜಿಸಲಾಗಿದೆ. </p>.<p>ಬಳ್ಳಾರಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಅಯ್ಯನಗೌಡ ವಿ. ಪಾಟೀಲ ಅವರನ್ನು ವಿಜಯನಗರದ ಡಿ.ಎಸ್.ಬಿಗೆ ಕಳುಹಿಸಲಾಗಿದೆ. ಪಿ.ಡಿ ಹಳ್ಳಿ ಠಾಣೆಯಲ್ಲಿದ್ದ ರುದ್ರಪ್ಪ ಎಲ್. ಅವರನ್ನು ಸಂಚಾರ ಠಾಣೆಗೆ ನಿಯೋಜನೆ ಮಾಡಲಾಗಿದೆ. </p>.<p>ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದ ಇನ್ಸ್ಪೆಕ್ಟರ್ ಸುಭಾಷ್ ಚಂದ್ರ ಅವರನ್ನು ಪಿ.ಡಿ ಹಳ್ಳಿ ಠಾಣೆಗೆ ನಿಯೋಜಿಸಲಾಗಿದೆ. </p>.<p>ಸಿಇಎನ್ ಠಾಣೆಯಲ್ಲಿದ್ದ ಇನ್ಸ್ಪೆಕ್ಟರ್ ರಮಾಕಾಂತ್ ಯಲ್ಲಪ್ಪ ಹುಲ್ಲೂರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>