<p><strong>ಬಳ್ಳಾರಿ: </strong>ಶ್ರೀರಾಮುಲುಗೆ, ಬದಾಮಿ ಮತ್ತು ಮೊಳಕಾಲ್ಮೂರುಗೆ ಏನು ಸಂಬಂಧ ಎಂದು ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪ್ರಶ್ನಿಸಿದರು.</p>.<p>ನಾಮಪತ್ರ ಸಲ್ಲಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಣ್ಣ ಫಕ್ಕೀರಪ್ಪ ರಾಯಚೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದರು. ಇತ್ತೀಚೆಗೆ, ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ನನ್ನ ಸ್ಥಳೀಯತೆಯನ್ನು ಪ್ರಶ್ನಿಸುವ ಬಿಜೆಪಿಯವರು ಇದೆಲ್ಲವನ್ನು ಮರೆಯಬಾರದು ಎಂದರು.</p>.<p>ಎಲ್ಲಾ ಕಾಂಗ್ರೆಸ್ ಮುಖಂಡರು ನನ್ನ ಜತೆ ಚೆನ್ನಾಗಿದ್ದಾರೆ. ನಾನು ಈ ಮಣ್ಣಿನ ಮಗ, ಪಕ್ಕದ ಪಾವಗಡದವನು. ಅಲ್ಲಂ ವೀರಭದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನಾನು ಕಾರ್ಯದರ್ಶಿಯಾಗಿದ್ದೆ.ಬಳ್ಳಾರಿ ಉಸ್ತುವಾರಿಯಾಗಿ 10ವರ್ಷಗಳುಕೆಲಸ ಮಾಡಿದ್ದೇನೆಎಂದರು.</p>.<p>ಕೆಲವರು ಸಮಯಕ್ಕೆ ತಕ್ಕಂತೆ ಮಾತನಾಡುತ್ತಾರೆ.ನಾನು ಸ್ಥಳೀಯವಾಗಿ ಇದ್ದು ಕೆಲಸ ಮಾಡುವೆ, ಇಲ್ಲೆ ಉಳಿಯುವೆ, ಪಕ್ಷದ ನಿರ್ಣಯ ಪಾಲನೆ ಮಾಡುವೆ- ಉತ್ತಮ ಕೆಲಸ ಮಾಡಿ, ಲೋಕಸಭೆಯಲ್ಲಿ ಹೆಸರು ತರುವೆ.ಕಾಂಗ್ರೆಸ್, ಬಿಜೆಪಿ ನಡುವೆ ಮಾತ್ರ ಸ್ಪರ್ಧೆ ನಡೆಯುತ್ತದೆ. ಲೋಕಸಭೆಗೆ ಆಯ್ಕೆಯಾಗುವವರಿಗೆಪರಿಪೂರ್ಣ ಜ್ಞಾನ ಇರಬೇಕು ಎಂದರು.</p>.<p>ನಮ್ಮ ಪಕ್ಷದಲ್ಲಿ ಗೊಂದಲಕ್ಕೆ ಅವಕಾಶವಿಲ್ಲ. ಪಕ್ಷಕ್ಕೆ 130ವರ್ಷಗಳ ಇತಿಹಾಸವಿದೆ. ಪಕ್ಷ ಸೂಕ್ತ ನಿರ್ಣಯ ಮಾಡಿದೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎರಡೂ ಸಿದ್ಧಾಂತಗಳ ನಡುವಿನ ಹೋರಾಟ ಇದು ಎಂದರು.</p>.<p>ನಾನು ಯಾವ ಟ್ರಬಲ್ ಶೂಟರೂ ಅಲ್ಲ ಎಂದು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.<br /><br />ದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಉಗ್ರಪ್ಪ ತೆರದ ವಾಹನದಲ್ಲಿ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.<br />ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್, ಶಾಸಕ ಈ.ತುಕಾರಾಂ ಜೊತೆಗಿದ್ದರು.</p>.<p>ಸಹೋದರ ವೆಂಕಟೇಶ ಪ್ರಸಾದ್ಗೆ ಟಿಕೆಟ್ ಬಯಸಿದ್ದ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಗೈರು ಎದ್ದು ಕಾಣುತ್ತಿತ್ತು.</p>.<p><strong>ಡಿ.ಕೆ.ಶಿವಕುಮಾರ್ ಅವರಿಂದ ನೀತಿಸಂಹಿತೆ ಉಲ್ಲಂಘನೆ?</strong></p>.<p>ನಾಮಪತ್ರ ಸಲ್ಲಿಸುವ ಮುನ್ನ ಅಭ್ಯರ್ಥಿ ಉಗ್ರಪ್ಪ ಅವರೊಂದಿಗೆ ನಗರದ ಕನಕದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಆಡಳಿತ ಮಂಡಳಿಯ ಕಚೇರಿಯಲ್ಲಿ ಮಾತನಾಡಿರುವುದು ಚುನಾವಣೆ ನೀತಿಸಂಹಿತೆಯ ಉಲ್ಲಂಘನೆ ಎಂಬ ಆರೋಪ ಕೇಳಿ ಬಂದಿದೆ.</p>.<p><em>(ಬಿಜೆಪಿ ಅಭ್ಯರ್ಥಿ ಜೆ.ಶಾಂತ)</em></p>.<p><strong>ಕುರುಬ ಸಮುದಾಯದ ಮಹಿಳೆ ಕಾಲು ಮುಗಿದ ಜೆ.ಶಾಂತ</strong></p>.<p>ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಜೆ.ಶಾಂತ ನಾಮಪತ್ರ ಸಲ್ಲಿಸುವ ಮುನ್ನ ನಗರದ ದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕುರುಬ ಸಮುದಾಯದ ಮಹಿಳೆ ಹಾಗೂ ಬಿಜೆಪಿಯ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಅವರ ಕಾಲು ಮುಗಿದರು.</p>.<p>ಕುರುಬರ ಕಾಲಿಗೆ ಬಿದ್ದರೆ ಶುಭವಾಗುತ್ತದೆ ಎಂಬ ಉದ್ದೇಶದಿಂದ ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಶ್ರೀರಾಮುಲುಗೆ, ಬದಾಮಿ ಮತ್ತು ಮೊಳಕಾಲ್ಮೂರುಗೆ ಏನು ಸಂಬಂಧ ಎಂದು ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪ್ರಶ್ನಿಸಿದರು.</p>.<p>ನಾಮಪತ್ರ ಸಲ್ಲಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಣ್ಣ ಫಕ್ಕೀರಪ್ಪ ರಾಯಚೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದರು. ಇತ್ತೀಚೆಗೆ, ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ನನ್ನ ಸ್ಥಳೀಯತೆಯನ್ನು ಪ್ರಶ್ನಿಸುವ ಬಿಜೆಪಿಯವರು ಇದೆಲ್ಲವನ್ನು ಮರೆಯಬಾರದು ಎಂದರು.</p>.<p>ಎಲ್ಲಾ ಕಾಂಗ್ರೆಸ್ ಮುಖಂಡರು ನನ್ನ ಜತೆ ಚೆನ್ನಾಗಿದ್ದಾರೆ. ನಾನು ಈ ಮಣ್ಣಿನ ಮಗ, ಪಕ್ಕದ ಪಾವಗಡದವನು. ಅಲ್ಲಂ ವೀರಭದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನಾನು ಕಾರ್ಯದರ್ಶಿಯಾಗಿದ್ದೆ.ಬಳ್ಳಾರಿ ಉಸ್ತುವಾರಿಯಾಗಿ 10ವರ್ಷಗಳುಕೆಲಸ ಮಾಡಿದ್ದೇನೆಎಂದರು.</p>.<p>ಕೆಲವರು ಸಮಯಕ್ಕೆ ತಕ್ಕಂತೆ ಮಾತನಾಡುತ್ತಾರೆ.ನಾನು ಸ್ಥಳೀಯವಾಗಿ ಇದ್ದು ಕೆಲಸ ಮಾಡುವೆ, ಇಲ್ಲೆ ಉಳಿಯುವೆ, ಪಕ್ಷದ ನಿರ್ಣಯ ಪಾಲನೆ ಮಾಡುವೆ- ಉತ್ತಮ ಕೆಲಸ ಮಾಡಿ, ಲೋಕಸಭೆಯಲ್ಲಿ ಹೆಸರು ತರುವೆ.ಕಾಂಗ್ರೆಸ್, ಬಿಜೆಪಿ ನಡುವೆ ಮಾತ್ರ ಸ್ಪರ್ಧೆ ನಡೆಯುತ್ತದೆ. ಲೋಕಸಭೆಗೆ ಆಯ್ಕೆಯಾಗುವವರಿಗೆಪರಿಪೂರ್ಣ ಜ್ಞಾನ ಇರಬೇಕು ಎಂದರು.</p>.<p>ನಮ್ಮ ಪಕ್ಷದಲ್ಲಿ ಗೊಂದಲಕ್ಕೆ ಅವಕಾಶವಿಲ್ಲ. ಪಕ್ಷಕ್ಕೆ 130ವರ್ಷಗಳ ಇತಿಹಾಸವಿದೆ. ಪಕ್ಷ ಸೂಕ್ತ ನಿರ್ಣಯ ಮಾಡಿದೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎರಡೂ ಸಿದ್ಧಾಂತಗಳ ನಡುವಿನ ಹೋರಾಟ ಇದು ಎಂದರು.</p>.<p>ನಾನು ಯಾವ ಟ್ರಬಲ್ ಶೂಟರೂ ಅಲ್ಲ ಎಂದು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.<br /><br />ದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಉಗ್ರಪ್ಪ ತೆರದ ವಾಹನದಲ್ಲಿ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.<br />ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್, ಶಾಸಕ ಈ.ತುಕಾರಾಂ ಜೊತೆಗಿದ್ದರು.</p>.<p>ಸಹೋದರ ವೆಂಕಟೇಶ ಪ್ರಸಾದ್ಗೆ ಟಿಕೆಟ್ ಬಯಸಿದ್ದ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಗೈರು ಎದ್ದು ಕಾಣುತ್ತಿತ್ತು.</p>.<p><strong>ಡಿ.ಕೆ.ಶಿವಕುಮಾರ್ ಅವರಿಂದ ನೀತಿಸಂಹಿತೆ ಉಲ್ಲಂಘನೆ?</strong></p>.<p>ನಾಮಪತ್ರ ಸಲ್ಲಿಸುವ ಮುನ್ನ ಅಭ್ಯರ್ಥಿ ಉಗ್ರಪ್ಪ ಅವರೊಂದಿಗೆ ನಗರದ ಕನಕದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಆಡಳಿತ ಮಂಡಳಿಯ ಕಚೇರಿಯಲ್ಲಿ ಮಾತನಾಡಿರುವುದು ಚುನಾವಣೆ ನೀತಿಸಂಹಿತೆಯ ಉಲ್ಲಂಘನೆ ಎಂಬ ಆರೋಪ ಕೇಳಿ ಬಂದಿದೆ.</p>.<p><em>(ಬಿಜೆಪಿ ಅಭ್ಯರ್ಥಿ ಜೆ.ಶಾಂತ)</em></p>.<p><strong>ಕುರುಬ ಸಮುದಾಯದ ಮಹಿಳೆ ಕಾಲು ಮುಗಿದ ಜೆ.ಶಾಂತ</strong></p>.<p>ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಜೆ.ಶಾಂತ ನಾಮಪತ್ರ ಸಲ್ಲಿಸುವ ಮುನ್ನ ನಗರದ ದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕುರುಬ ಸಮುದಾಯದ ಮಹಿಳೆ ಹಾಗೂ ಬಿಜೆಪಿಯ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಶಶಿಕಲಾ ಅವರ ಕಾಲು ಮುಗಿದರು.</p>.<p>ಕುರುಬರ ಕಾಲಿಗೆ ಬಿದ್ದರೆ ಶುಭವಾಗುತ್ತದೆ ಎಂಬ ಉದ್ದೇಶದಿಂದ ಆಶೀರ್ವಾದ ಪಡೆದಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>