<p><strong>ಬಳ್ಳಾರಿ</strong>: ‘ಆಗಸ್ಟ್ 16ರಂದು ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಒಳಮೀಸಲಾತಿ ಜಾರಿಗೆ ತರದಿದ್ದರೆ, ರಾಜ್ಯದಲ್ಲಿ ಮಾದಿಗರು ದಂಗೆ ಏಳಲಿದ್ದಾರೆ’ ಎಂದು ಕರ್ನಾಟಕ ಮಾದಿಗ ಮತ್ತು ಉಪ ಜಾತಿ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ. </p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಂಘದ ರಾಜ್ಯ ಘಟಕದ ಪ್ರಧಾನ ಸಂಚಾಲಕ ಹನುಮಂತಪ್ಪ, ‘ಆ.11ರಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಅಸಹಕಾರ ಚಳವಳಿ ಆರಂಭಿಸುತ್ತೇವೆ. ಆಂಧ್ರ ಪ್ರದೇಶದ ಮಂದಕೃಷ್ಣ ಮಾದಿಗ ಅವರೂ ಬರಲಿದ್ದು, ಹೋರಾಟ ತೀವ್ರಗೊಳ್ಳಲಿದೆ’ ಎಂದು ತಿಳಿಸಿದರು. </p>.<p>‘35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಮಾದಿಗರಿಗೆ ಶೇ 6ರಷ್ಟು ಮೀಸಲಾತಿ ನೀಡಿ. ಇತರರನ್ನು ಒಟ್ಟುಗೂಡಿಸಿ ಉಳಿದ ಶೇ 11ರಷ್ಟು ಮೀಸಲಾತಿ ಪಡೆದುಕೊಳ್ಳಲು ತಿಳಿಸಬೇಕು’ ಎಂದು ಆಗ್ರಹಿಸಿದರು. </p>.<p>‘ಕಾಂಗ್ರೆಸ್ ಪಕ್ಷವು 2013 ಮತ್ತು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿ ಕುರಿತು ಭರವಸೆ ನೀಡಿತ್ತು. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಬಳಿಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ಅವರಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ’ ಎಂದರು. </p>.<p>‘ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಮಹದೇವಪ್ಪ ಅವರು ಒಳಮೀಸಲಾತಿ ಬಗ್ಗೆ ಒಳಗೊಂದು ಹೊರಗೊಂದು ಮಾತಾಡುತ್ತಾರೆ. ನ್ಯಾ. ನಾಗಮೋಹನದಾಸ್ ವರದಿ ಸಲ್ಲಿಕೆ ಬಳಿಕವೂ ಹಲವು ವಿದ್ಯಮಾನಗಳು ಸರ್ಕಾರದಲ್ಲಿ ನಡೆದಿವೆ. ವಿರೋಧಿಗಳ ಷಡ್ಯಂತ್ರಕ್ಕೆ ಸಿದ್ದರಾಮಯ್ಯ ತಲೆಬಾಗಿದ್ದಾರೆ’ ಎಂದು ಆರೋಪಿಸಿದರು. </p>.<p>‘ಕಾಂಗ್ರೆಸ್ ಪಕ್ಷ ಸದಾಶಿವ ಆಯೋಗದ ವರದಿ ಮೂಲೆಗೆ ಸರಿಸಿತು, ಮಧುಸ್ವಾಮಿ ಆಯೋಗದ ವರದಿ ತಳ್ಳಿಹಾಕಿತು. ದಲಿತ ಪರ ಎನ್ನುವ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು’ ಎಂದರು. </p>.<p>ಮುಖಂಡರಾದ ಎ.ಕೆ. ಹುಲುಗಪ್ಪ, ಸೋಮಶೇಖರ್, ತಿಪ್ಪೇಸ್ವಾಮಿ, ರುದ್ರಪ್ಪ, ವಸಂತಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಆಗಸ್ಟ್ 16ರಂದು ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಒಳಮೀಸಲಾತಿ ಜಾರಿಗೆ ತರದಿದ್ದರೆ, ರಾಜ್ಯದಲ್ಲಿ ಮಾದಿಗರು ದಂಗೆ ಏಳಲಿದ್ದಾರೆ’ ಎಂದು ಕರ್ನಾಟಕ ಮಾದಿಗ ಮತ್ತು ಉಪ ಜಾತಿ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ. </p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಂಘದ ರಾಜ್ಯ ಘಟಕದ ಪ್ರಧಾನ ಸಂಚಾಲಕ ಹನುಮಂತಪ್ಪ, ‘ಆ.11ರಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಅಸಹಕಾರ ಚಳವಳಿ ಆರಂಭಿಸುತ್ತೇವೆ. ಆಂಧ್ರ ಪ್ರದೇಶದ ಮಂದಕೃಷ್ಣ ಮಾದಿಗ ಅವರೂ ಬರಲಿದ್ದು, ಹೋರಾಟ ತೀವ್ರಗೊಳ್ಳಲಿದೆ’ ಎಂದು ತಿಳಿಸಿದರು. </p>.<p>‘35 ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಮಾದಿಗರಿಗೆ ಶೇ 6ರಷ್ಟು ಮೀಸಲಾತಿ ನೀಡಿ. ಇತರರನ್ನು ಒಟ್ಟುಗೂಡಿಸಿ ಉಳಿದ ಶೇ 11ರಷ್ಟು ಮೀಸಲಾತಿ ಪಡೆದುಕೊಳ್ಳಲು ತಿಳಿಸಬೇಕು’ ಎಂದು ಆಗ್ರಹಿಸಿದರು. </p>.<p>‘ಕಾಂಗ್ರೆಸ್ ಪಕ್ಷವು 2013 ಮತ್ತು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿ ಕುರಿತು ಭರವಸೆ ನೀಡಿತ್ತು. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಬಳಿಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದರು. ಅವರಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ’ ಎಂದರು. </p>.<p>‘ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಮಹದೇವಪ್ಪ ಅವರು ಒಳಮೀಸಲಾತಿ ಬಗ್ಗೆ ಒಳಗೊಂದು ಹೊರಗೊಂದು ಮಾತಾಡುತ್ತಾರೆ. ನ್ಯಾ. ನಾಗಮೋಹನದಾಸ್ ವರದಿ ಸಲ್ಲಿಕೆ ಬಳಿಕವೂ ಹಲವು ವಿದ್ಯಮಾನಗಳು ಸರ್ಕಾರದಲ್ಲಿ ನಡೆದಿವೆ. ವಿರೋಧಿಗಳ ಷಡ್ಯಂತ್ರಕ್ಕೆ ಸಿದ್ದರಾಮಯ್ಯ ತಲೆಬಾಗಿದ್ದಾರೆ’ ಎಂದು ಆರೋಪಿಸಿದರು. </p>.<p>‘ಕಾಂಗ್ರೆಸ್ ಪಕ್ಷ ಸದಾಶಿವ ಆಯೋಗದ ವರದಿ ಮೂಲೆಗೆ ಸರಿಸಿತು, ಮಧುಸ್ವಾಮಿ ಆಯೋಗದ ವರದಿ ತಳ್ಳಿಹಾಕಿತು. ದಲಿತ ಪರ ಎನ್ನುವ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು’ ಎಂದರು. </p>.<p>ಮುಖಂಡರಾದ ಎ.ಕೆ. ಹುಲುಗಪ್ಪ, ಸೋಮಶೇಖರ್, ತಿಪ್ಪೇಸ್ವಾಮಿ, ರುದ್ರಪ್ಪ, ವಸಂತಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>