<p><strong>ಬಳ್ಳಾರಿ:</strong> ಜಿಲ್ಲೆಯ ಗಣಿ ಬಾಧಿತ ತಾಲ್ಲೂಕುಗಳಾದ ಸಂಡೂರು ಮತ್ತು ಬಳ್ಳಾರಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವಾಗಿ ಉಸ್ಲಿ, ಹಣ್ಣು ವಿತರಿಸುವ ಕಾರ್ಯ ಸೋಮವಾರದಿಂದ ಆರಂಭವಾಗಿದೆ. </p>.<p>ರಾಜ್ಯದ ಗಣಿಬಾಧಿತ ಜಿಲ್ಲೆಗಳ ತಲಾ ಒಂದೊಂದು ತಾಲ್ಲೂಕುಗಳಲ್ಲಿ ‘ಗಣಿಗಾರಿಕೆ ಪರಿಸರ ಪುನಃಸ್ಥಾಪನೆ ನಿಗಮ’ ಮಕ್ಕಳ ಅಪೌಷ್ಠಿಕತೆ ನಿವಾರಣೆ ಕಾರ್ಯಕ್ರಮವಾಗಿ ಉಸ್ಲಿ, ಹಣ್ಣು ವಿತರಣೆ ಯೋಜನೆಯನ್ನು ಜಾರಿಗೆ ತಂದಿದೆ. ಇದಕ್ಕಾಗಿ ಕೋಟ್ಯಂತರ ಅನುದಾನವನ್ನೂ ಮೀಸಲಿಟ್ಟಿದೆ. </p>.<p>‘ಈ ಕಾರ್ಯಕ್ರಮವನ್ನು ಕೃತಿ ರೂಪಕ್ಕಿಳಿಸಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಬಳ್ಳಾರಿ ಜಿಲ್ಲೆ ಪಾತ್ರವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ಸುಮೇರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ಸಂಡೂರು ಮತ್ತು ಬಳ್ಳಾರಿ ತಾಲೂಕುಗಳ ಅಂದಾಜು 400 ಶಾಲೆಗಳಲ್ಲಿ ಉಸ್ಲಿ, ಹಣ್ಣು ವಿತರಣೆ ನಡೆಯುತ್ತಿದೆ. ಎಲ್ಲೆಲ್ಲಿ ಇಸ್ಕಾನ್ನಿಂದ ಮಧ್ಯಾಹ್ನದ ಬಿಸಿಯೂಟ ಪೂರೈಕೆಯಾಗುತ್ತಿದೆಯೋ ಅಲ್ಲಿ, ಇಸ್ಕಾನ್ನಿಂದಲೇ ಉಸ್ಲಿ, ಹಣ್ಣು ವಿತರಣೆ ಮಾಡಿಸಲಾಗುತ್ತದೆ. ಉಳಿದ ಕಡೆ ಶಾಲಾ ಅಭಿವೃದ್ಧಿ ಸಮಿತಿಯಿಂದ ಇದನ್ನು ಕೊಡಲಾಗುತ್ತಿದೆ. </p>.<p>ಉಸ್ಲಿ ತಯಾರಿಸುವುದಕ್ಕೆ ಅಡುಗೆ ಸಹಾಯಕರಿಗೆ ತರಬೇತಿಯನ್ನೂ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಜಿಲ್ಲೆಯ ಗಣಿ ಬಾಧಿತ ತಾಲ್ಲೂಕುಗಳಾದ ಸಂಡೂರು ಮತ್ತು ಬಳ್ಳಾರಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವಾಗಿ ಉಸ್ಲಿ, ಹಣ್ಣು ವಿತರಿಸುವ ಕಾರ್ಯ ಸೋಮವಾರದಿಂದ ಆರಂಭವಾಗಿದೆ. </p>.<p>ರಾಜ್ಯದ ಗಣಿಬಾಧಿತ ಜಿಲ್ಲೆಗಳ ತಲಾ ಒಂದೊಂದು ತಾಲ್ಲೂಕುಗಳಲ್ಲಿ ‘ಗಣಿಗಾರಿಕೆ ಪರಿಸರ ಪುನಃಸ್ಥಾಪನೆ ನಿಗಮ’ ಮಕ್ಕಳ ಅಪೌಷ್ಠಿಕತೆ ನಿವಾರಣೆ ಕಾರ್ಯಕ್ರಮವಾಗಿ ಉಸ್ಲಿ, ಹಣ್ಣು ವಿತರಣೆ ಯೋಜನೆಯನ್ನು ಜಾರಿಗೆ ತಂದಿದೆ. ಇದಕ್ಕಾಗಿ ಕೋಟ್ಯಂತರ ಅನುದಾನವನ್ನೂ ಮೀಸಲಿಟ್ಟಿದೆ. </p>.<p>‘ಈ ಕಾರ್ಯಕ್ರಮವನ್ನು ಕೃತಿ ರೂಪಕ್ಕಿಳಿಸಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಬಳ್ಳಾರಿ ಜಿಲ್ಲೆ ಪಾತ್ರವಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ಸುಮೇರ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>ಸಂಡೂರು ಮತ್ತು ಬಳ್ಳಾರಿ ತಾಲೂಕುಗಳ ಅಂದಾಜು 400 ಶಾಲೆಗಳಲ್ಲಿ ಉಸ್ಲಿ, ಹಣ್ಣು ವಿತರಣೆ ನಡೆಯುತ್ತಿದೆ. ಎಲ್ಲೆಲ್ಲಿ ಇಸ್ಕಾನ್ನಿಂದ ಮಧ್ಯಾಹ್ನದ ಬಿಸಿಯೂಟ ಪೂರೈಕೆಯಾಗುತ್ತಿದೆಯೋ ಅಲ್ಲಿ, ಇಸ್ಕಾನ್ನಿಂದಲೇ ಉಸ್ಲಿ, ಹಣ್ಣು ವಿತರಣೆ ಮಾಡಿಸಲಾಗುತ್ತದೆ. ಉಳಿದ ಕಡೆ ಶಾಲಾ ಅಭಿವೃದ್ಧಿ ಸಮಿತಿಯಿಂದ ಇದನ್ನು ಕೊಡಲಾಗುತ್ತಿದೆ. </p>.<p>ಉಸ್ಲಿ ತಯಾರಿಸುವುದಕ್ಕೆ ಅಡುಗೆ ಸಹಾಯಕರಿಗೆ ತರಬೇತಿಯನ್ನೂ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮದ್ ಹ್ಯಾರಿಸ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>