<p><strong>ಬಳ್ಳಾರಿ:</strong> ಗುರುವಾರ ಒಂದೇ ದಿನ ಎರಡು ಘರ್ಷಣೆಗಳು ನಡೆದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ಅವ್ವಂಬಾವಿಯ ನಿವಾಸದ ಬಳಿ ಭಾರಿ ಬಂದೋಬಸ್ತ್ ಮಾಡಲಾಗಿದೆ. </p><p>ವಾಲ್ಮೀಕಿ ಪ್ರತಿಮೆ ಇರಿಸಿರುವ ನಗರದ ವಾಲ್ಮೀಕಿ ವೃತ್ತದ ಬಳಿಯ ಭದ್ರತೆ ಹೆಚ್ಚಿಸಲಾಗಿದೆ. </p><p>ನಗರದಲ್ಲಿ ಪ್ರಕ್ಷುಬ್ಧತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ವಿಜಯನಗರ, ಚಿತ್ರದುರ್ಗ, ಕೊಪ್ಪಳ ಎಸ್ಪಿಗಳನ್ನು, ಪೊಲೀಸ್ ಸಿಬ್ಬಂದಿಯನ್ನು ಬಳ್ಳಾರಿಗೆ ಕರೆಸಿಕೊಳ್ಳಲಾಗಿದೆ. ಹೀಗಾಗಿ ನಗರದ ಎಲ್ಲ ಕಡೆ ಪೊಲೀಸರ ದಂಡೇ ಕಾಣುತ್ತಿದೆ.</p><p><strong>ಇಬ್ಬರಿಂದಲೂ ಒಂದೇ ಸಮಯಕ್ಕೆ ಪತ್ರಿಕಾಗೋಷ್ಠಿ</strong></p><p>ಘಟನೆ ಸಂಬಂಧಿಸಿದಂತೆ ವಿವರಣೆ ನೀಡಲು ಶಾಸಕ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಇಬ್ಬರೂ ಬೆಳಿಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದಾರೆ. </p>.ಜನಾರ್ದನ ರೆಡ್ಡಿ ಮನೆ ಎದುರು ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಬಲಿ, ನಿಷೇಧಾಜ್ಞೆ.ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ.<div><div class="bigfact-title">ವಿಮ್ಸ್ಗೆ ಭೇಟಿ</div><div class="bigfact-description">ಗುರುವಾರ ರಾತ್ರಿ ನಡೆದ ಎರಡನೇ ಘರ್ಷಣೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಅಂತಿಮ ದರ್ಶನ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ನಗರ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಗುರುವಾರ ಒಂದೇ ದಿನ ಎರಡು ಘರ್ಷಣೆಗಳು ನಡೆದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ಅವ್ವಂಬಾವಿಯ ನಿವಾಸದ ಬಳಿ ಭಾರಿ ಬಂದೋಬಸ್ತ್ ಮಾಡಲಾಗಿದೆ. </p><p>ವಾಲ್ಮೀಕಿ ಪ್ರತಿಮೆ ಇರಿಸಿರುವ ನಗರದ ವಾಲ್ಮೀಕಿ ವೃತ್ತದ ಬಳಿಯ ಭದ್ರತೆ ಹೆಚ್ಚಿಸಲಾಗಿದೆ. </p><p>ನಗರದಲ್ಲಿ ಪ್ರಕ್ಷುಬ್ಧತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ವಿಜಯನಗರ, ಚಿತ್ರದುರ್ಗ, ಕೊಪ್ಪಳ ಎಸ್ಪಿಗಳನ್ನು, ಪೊಲೀಸ್ ಸಿಬ್ಬಂದಿಯನ್ನು ಬಳ್ಳಾರಿಗೆ ಕರೆಸಿಕೊಳ್ಳಲಾಗಿದೆ. ಹೀಗಾಗಿ ನಗರದ ಎಲ್ಲ ಕಡೆ ಪೊಲೀಸರ ದಂಡೇ ಕಾಣುತ್ತಿದೆ.</p><p><strong>ಇಬ್ಬರಿಂದಲೂ ಒಂದೇ ಸಮಯಕ್ಕೆ ಪತ್ರಿಕಾಗೋಷ್ಠಿ</strong></p><p>ಘಟನೆ ಸಂಬಂಧಿಸಿದಂತೆ ವಿವರಣೆ ನೀಡಲು ಶಾಸಕ ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ಇಬ್ಬರೂ ಬೆಳಿಗ್ಗೆ 10.30ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದಾರೆ. </p>.ಜನಾರ್ದನ ರೆಡ್ಡಿ ಮನೆ ಎದುರು ಗಲಾಟೆ: ಕಾಂಗ್ರೆಸ್ ಕಾರ್ಯಕರ್ತ ಬಲಿ, ನಿಷೇಧಾಜ್ಞೆ.ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ.<div><div class="bigfact-title">ವಿಮ್ಸ್ಗೆ ಭೇಟಿ</div><div class="bigfact-description">ಗುರುವಾರ ರಾತ್ರಿ ನಡೆದ ಎರಡನೇ ಘರ್ಷಣೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಅಂತಿಮ ದರ್ಶನ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ನಗರ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>