ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಬಯಲಾಟದಲ್ಲಿ ಶ್ರೀರಾಮುಲು ಕುಣಿತ

Published 24 ಮೇ 2024, 5:09 IST
Last Updated 24 ಮೇ 2024, 5:09 IST
ಅಕ್ಷರ ಗಾತ್ರ

ಬಳ್ಳಾರಿ: ಕಂಪ್ಲಿ ತಾಲೂಕಿನ ಹೀರೆಹಡಗಲಿ ಗ್ರಾಮದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಬಯಲಾಟ (ಪಾರ್ಥ ವಿಜಯ) ಕಾರ್ಯ್ರಮದಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಭರ್ಜರಿಯಾಗಿ ಕುಣಿದು ಪ್ರೇಕ್ಷಕರನ್ನು ರಂಜಿಸಿದರು.

ಬಯಲಾಟದ ಪಾತ್ರಧಾರಿಗಳ ಜೊತೆ ಖಡ್ಗ ಹಿಡಿದ ರಾಮುಲು ಹೆಜ್ಜೆ ಹಾಕಿದರು. ಅಭಿಮಾನಿಗಳು ಶಿಳ್ಳೆ, ತಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಶ್ರೀರಾಮುಲು ಕುಣಿತದ ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶ್ರೀರಾಮುಲು ಕ್ಷೇತ್ರದಲ್ಲೇ ಉಳಿದು ದೇವಾಲಯ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT