ಕುಡತಿನಿ (ತೋರಣಗಲ್ಲು): ‘ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬೆಜೆಪಿ ಸಂಸದರು ಹಲವಾರು ವರ್ಷಗಳಿಂದ ಆಡಳಿತ ನಡೆಸಿದ್ದು, ಅವರುಗಳ ಅಭಿವೃದ್ಧಿಯು ಸಂಪೂರ್ಣವಾಗಿ ಶೂನ್ಯವಾಗಿದ್ದು, ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಕಾಂಗ್ರೆಸ್ ಮುಖಂಡರಾದ ಚೈತನ್ಯಾ ತುಕಾರಾಂ ಹೇಳಿದರು.