ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರ ಅಭಿವೃದ್ಧಿ ಶೂನ್ಯ: ಚೈತನ್ಯಾ ತುಕಾರಾಂ

Published 18 ಏಪ್ರಿಲ್ 2024, 16:27 IST
Last Updated 18 ಏಪ್ರಿಲ್ 2024, 16:27 IST
ಅಕ್ಷರ ಗಾತ್ರ

ಕುಡತಿನಿ (ತೋರಣಗಲ್ಲು): ‘ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬೆಜೆಪಿ ಸಂಸದರು ಹಲವಾರು ವರ್ಷಗಳಿಂದ ಆಡಳಿತ ನಡೆಸಿದ್ದು, ಅವರುಗಳ ಅಭಿವೃದ್ಧಿಯು ಸಂಪೂರ್ಣವಾಗಿ ಶೂನ್ಯವಾಗಿದ್ದು, ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಕಾಂಗ್ರೆಸ್ ಮುಖಂಡರಾದ ಚೈತನ್ಯಾ ತುಕಾರಾಂ ಹೇಳಿದರು.

ಪಟ್ಟಣದಲ್ಲಿ ಲೋಕಸಭಾ ಚುನಾವಣೆಯ ಅಂಗವಾಗಿ ಬುಧವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಂ ಅವರ ಪರ ಚುನಾವಣಾ ಪ್ರಚಾರ ನಡೆಸಿದ ವೇಳೆಯಲ್ಲಿ ಅವರು ಮಾತನಾಡಿದರು.

‘ಬಳ್ಳಾರಿ ಕ್ಷೇತ್ರದಲ್ಲಿ ಶ್ರೀರಾಮುಲು, ಜೆ.ಶಾಂತಾ ಹಾಗೂ ದೇವೇಂದ್ರಪ್ಪ ಅವರು ಬಿಜೆಪಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೇ ಜನರಿ ವಂಚನೆ ಮಾಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT