<p><strong>ತೋರಣಗಲ್ಲು</strong>: ಬಿಟಿಪಿಎಸ್ನಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ವಜಾ ಮಾಡದೇ ಮತ್ತೆ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿ ಗುತ್ತಿಗೆ ಕಾರ್ಮಿಕರ ಸಂಘದ ಮುಖಂಡರು ಕುಡುತಿನಿಯ ಕೆಪಿಸಿಎಲ್ ಗೇಟ್ ಮುಂದೆ ಬುಧವಾರ ಧರಣಿ ನಡೆಸಿದರು.</p>.<p>‘ನೌಕರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದರ ಜೊತೆಗೆ, ಲಾಕ್ಡೌನ್ ಅವಧಿಯಲ್ಲಿನ ಎಂಟು ತಿಂಗಳ ವೇತನವನ್ನು ತಕ್ಷಣ ಪಾವತಿಸಬೇಕು’ ಎಂದು ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯಿಸಿದರು.</p>.<p>‘ಸುಮಾರು 550 ನೌಕರರು ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಏಕಾಏಕಿ ವಜಾಗೊಳಿಸಲಾಗಿದೆ. ಕಾರ್ಮಿಕ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿ ಕ್ರಮ ಕೈಗೊಳ್ಳಲಾಗಿದೆ’ ಎಂದು ದೂರಿದರು.</p>.<p>‘ಗುತ್ತಿಗೆ ಕಾರ್ಮಿಕರಿಗೆ 8 ತಿಂಗಳ ವೇತನವನ್ನು ನಿಗಮವು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಬಡ ಕಾರ್ಮಿಕರ ಅನುಕೂಲಕ್ಕಾಗಿ ಇಎಸ್ಐ ವ್ಯವಸ್ಥೆಯನ್ನು ತಕ್ಷಣ ಜಾರಿಗೆ ತರಬೇಕು’ ಎಂದು ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಜೆ.ಸತ್ಯಬಾಬು ಒತ್ತಾಯಿಸಿದರು.</p>.<p>ಮುಖಂಡರಾದ ಜಗದೀಶ್, ಮಲಿಯಪ್ಪ, ಪ್ರಕಾಶ್ಬಾಬು, ವೆಂಕಟೇಶ್, ಅಂಜಿನಿ, ಪ್ರಸಾದ್, ವೆಂಕಟೇಶ್, ರಾಮು, ರುದ್ರಮ್ಮ, ಮಲ್ಲಮ್ಮ, ಪದ್ಮಜಾ, ಹುಚ್ಚಮ್ಮ ಮತ್ತು ಕುಡುತಿನಿಯ ಪೋಲಪ್ಪ, ಗುರುಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು</strong>: ಬಿಟಿಪಿಎಸ್ನಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ವಜಾ ಮಾಡದೇ ಮತ್ತೆ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿ ಗುತ್ತಿಗೆ ಕಾರ್ಮಿಕರ ಸಂಘದ ಮುಖಂಡರು ಕುಡುತಿನಿಯ ಕೆಪಿಸಿಎಲ್ ಗೇಟ್ ಮುಂದೆ ಬುಧವಾರ ಧರಣಿ ನಡೆಸಿದರು.</p>.<p>‘ನೌಕರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದರ ಜೊತೆಗೆ, ಲಾಕ್ಡೌನ್ ಅವಧಿಯಲ್ಲಿನ ಎಂಟು ತಿಂಗಳ ವೇತನವನ್ನು ತಕ್ಷಣ ಪಾವತಿಸಬೇಕು’ ಎಂದು ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯಿಸಿದರು.</p>.<p>‘ಸುಮಾರು 550 ನೌಕರರು ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಏಕಾಏಕಿ ವಜಾಗೊಳಿಸಲಾಗಿದೆ. ಕಾರ್ಮಿಕ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿ ಕ್ರಮ ಕೈಗೊಳ್ಳಲಾಗಿದೆ’ ಎಂದು ದೂರಿದರು.</p>.<p>‘ಗುತ್ತಿಗೆ ಕಾರ್ಮಿಕರಿಗೆ 8 ತಿಂಗಳ ವೇತನವನ್ನು ನಿಗಮವು ಶೀಘ್ರವಾಗಿ ಬಿಡುಗಡೆ ಮಾಡಬೇಕು. ಬಡ ಕಾರ್ಮಿಕರ ಅನುಕೂಲಕ್ಕಾಗಿ ಇಎಸ್ಐ ವ್ಯವಸ್ಥೆಯನ್ನು ತಕ್ಷಣ ಜಾರಿಗೆ ತರಬೇಕು’ ಎಂದು ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಜೆ.ಸತ್ಯಬಾಬು ಒತ್ತಾಯಿಸಿದರು.</p>.<p>ಮುಖಂಡರಾದ ಜಗದೀಶ್, ಮಲಿಯಪ್ಪ, ಪ್ರಕಾಶ್ಬಾಬು, ವೆಂಕಟೇಶ್, ಅಂಜಿನಿ, ಪ್ರಸಾದ್, ವೆಂಕಟೇಶ್, ರಾಮು, ರುದ್ರಮ್ಮ, ಮಲ್ಲಮ್ಮ, ಪದ್ಮಜಾ, ಹುಚ್ಚಮ್ಮ ಮತ್ತು ಕುಡುತಿನಿಯ ಪೋಲಪ್ಪ, ಗುರುಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>