<p><strong>ಬಳ್ಳಾರಿ: </strong>ನಗರದ ಜನತೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಸಿಹಿ ಸುದ್ದಿ ನೀಡಲು ಸಿದ್ಧತೆಗಳನ್ನು ನಡೆಸಿದೆ.</p>.<p>ನಗರದ ವಿವಿಧೆಡೆ ಮಾರಾಟವಾಗದೇ ಇರುವ ಖಾಲಿ ನಿವೇಶನಗಳನ್ನು ಬಹಿರಂಗವಾಗಿ ಹರಾಜು ಹಾಕಲು ಪ್ರಾಧಿಕಾರದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.<p>ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಧೀರ್ಘ ಚರ್ಚೆ ನಡೆಯಿತು.</p>.<p>ರಾಘವೇಂದ್ರ ಕಾಲೋನಿ 2ನೇ ಹಂತದಲ್ಲಿ 26, ಕನಕ ದುರ್ಗಮ್ಮ ಬಡಾವಣೆ , ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 7 ವಸತಿ ನಿವೇಶನ ಹಾಗೂ 1 ವಾಣಿಜ್ಯ ನಿವೇಶನ, ಡಾ.ಸರ್.ಎಂ.ವಿ. ಲಾರಿ ತಂಗುದಾಣದಲ್ಲಿ 11 ವಾಣಿಜ್ಯ ನಿವೇಶನಗಳು, ಕುವೆಂಪುನಗರದಲ್ಲಿ 3 ವಸತಿ ನಿವೇಶನಗಳು, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿ 3 ನಿವೇಶನಗಳ ಮಾರಾಟ ನಡೆಯಲಿದೆ ಎಂದು ಶೇಖರ ತಿಳಿಸಿದ್ದಾರೆ.</p>.<p>ಬಿ.ಗೋನಾಳ್ ಗ್ರಾಮದಲ್ಲಿ ಪ್ರಾಧಿಕಾರ ಮತ್ತು ರೈತರ ಸಹಭಾಗಿತ್ವದಲ್ಲಿ 101.98 ಎಕರೆ ಜಮೀನಿನಲ್ಲಿ 50:50 ಅನುಪಾತದಂತೆ, ವಸತಿ ಬಡಾವಣೆಯನ್ನು ನಿರ್ಮಿಸಲು ಇ-ಟೆಂಡರ್ ಕರೆಯಲು ನಿರ್ಧರಿಸಲಾಯಿತು.</p>.<p>ಪ್ರಾಧಿಕಾರದ ವ್ಯಾಪ್ತಿಯಲ್ಲಿ 20 ಜಾಹೀರಾತು ಫಲಕಗಳನ್ನು ತಲಾ ₹10 ಲಕ್ಷದಲ್ಲಿ ನಿರ್ಮಿಸಲು ಸಭೆ ಅನುಮೋದನೆ ನೀಡಿತು.</p>.<p>ಶಾಸಕ ಜಿ.ಸೋಮಶೇಖರ್ ರೆಡ್ಡಿ, ಪ್ರಾಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ಕಾರ್ಯನಿರ್ವಾಹಕ ಎಂಜಿನಿಯರ್ ರವಿಶಂಕರ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ನಗರದ ಜನತೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಸಿಹಿ ಸುದ್ದಿ ನೀಡಲು ಸಿದ್ಧತೆಗಳನ್ನು ನಡೆಸಿದೆ.</p>.<p>ನಗರದ ವಿವಿಧೆಡೆ ಮಾರಾಟವಾಗದೇ ಇರುವ ಖಾಲಿ ನಿವೇಶನಗಳನ್ನು ಬಹಿರಂಗವಾಗಿ ಹರಾಜು ಹಾಕಲು ಪ್ರಾಧಿಕಾರದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.</p>.<p>ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಧೀರ್ಘ ಚರ್ಚೆ ನಡೆಯಿತು.</p>.<p>ರಾಘವೇಂದ್ರ ಕಾಲೋನಿ 2ನೇ ಹಂತದಲ್ಲಿ 26, ಕನಕ ದುರ್ಗಮ್ಮ ಬಡಾವಣೆ , ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 7 ವಸತಿ ನಿವೇಶನ ಹಾಗೂ 1 ವಾಣಿಜ್ಯ ನಿವೇಶನ, ಡಾ.ಸರ್.ಎಂ.ವಿ. ಲಾರಿ ತಂಗುದಾಣದಲ್ಲಿ 11 ವಾಣಿಜ್ಯ ನಿವೇಶನಗಳು, ಕುವೆಂಪುನಗರದಲ್ಲಿ 3 ವಸತಿ ನಿವೇಶನಗಳು, ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿ 3 ನಿವೇಶನಗಳ ಮಾರಾಟ ನಡೆಯಲಿದೆ ಎಂದು ಶೇಖರ ತಿಳಿಸಿದ್ದಾರೆ.</p>.<p>ಬಿ.ಗೋನಾಳ್ ಗ್ರಾಮದಲ್ಲಿ ಪ್ರಾಧಿಕಾರ ಮತ್ತು ರೈತರ ಸಹಭಾಗಿತ್ವದಲ್ಲಿ 101.98 ಎಕರೆ ಜಮೀನಿನಲ್ಲಿ 50:50 ಅನುಪಾತದಂತೆ, ವಸತಿ ಬಡಾವಣೆಯನ್ನು ನಿರ್ಮಿಸಲು ಇ-ಟೆಂಡರ್ ಕರೆಯಲು ನಿರ್ಧರಿಸಲಾಯಿತು.</p>.<p>ಪ್ರಾಧಿಕಾರದ ವ್ಯಾಪ್ತಿಯಲ್ಲಿ 20 ಜಾಹೀರಾತು ಫಲಕಗಳನ್ನು ತಲಾ ₹10 ಲಕ್ಷದಲ್ಲಿ ನಿರ್ಮಿಸಲು ಸಭೆ ಅನುಮೋದನೆ ನೀಡಿತು.</p>.<p>ಶಾಸಕ ಜಿ.ಸೋಮಶೇಖರ್ ರೆಡ್ಡಿ, ಪ್ರಾಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ಕಾರ್ಯನಿರ್ವಾಹಕ ಎಂಜಿನಿಯರ್ ರವಿಶಂಕರ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>