ಹೊಸಪೇಟೆ ವಿಭಾಗ ವ್ಯಾಪ್ತಿಯ ಸಂಡೂರು, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ನಿಲ್ದಾಣದಿಂದ ಬಹುತೇಕ ಎಲ್ಲ ಕಡೆಗಳಿಗೆ ಬಸ್ಗಳು ಸಂಚರಿಸುತ್ತಿವೆ. ಆದರೆ, ಹೂವಿನಹಡಗಲಿ, ಹರಪನಹಳ್ಳಿಯಲ್ಲಿ ಇನ್ನು ಕೆಲ ನೌಕರರು ಮುಷ್ಕರ ಬೆಂಬಲಿಸಿ ಕೆಲಸಕ್ಕೆ ಗೈರಾಗಿದ್ದಾರೆ. ಹಾಗಾಗಿ ಅಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಇದುವರೆಗೆ ಆರಂಭಗೊಂಡಿಲ್ಲ. ಬೆರಳೆಣಿಕೆಯಷ್ಟೇ ಬಸ್ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಪರದಾಟ ತಪ್ಪಿಲ್ಲ.