ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರು ರಾತ್ರಿ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದರು. ‘ಈ ಮೊದಲೇ ದೂರದ ಊರುಗಳಿಗೆ ಟಿಕೆಟ್ ಕಾಯ್ದಿರಿಸಿದವರು ನಿಲ್ದಾಣಕ್ಕೆ ಬಂದು ಬಸ್ಸಿನಲ್ಲಿ ಹೋಗಿದ್ದಾರೆ. ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಬೇರೆಡೆಯೂ ಬಸ್ ಬಿಡಲಾಗುವುದು. ಈಗ ಪ್ರಯಾಣಿಕರು ಬರುವುದು ಅನುಮಾನ. ಹಾಗಾಗಿ ಬೆಳಿಗ್ಗೆ ಎಲ್ಲ ಕಡೆ ಬಸ್ ಬಿಡಲಾಗುವುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.