<p><strong>ಹರಪನಹಳ್ಳಿ</strong><strong>: ‘</strong>ಬಿಜೆಪಿ, ಜೆಡಿಎಸ್ ಪಕ್ಷಗಳು ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಾರೆ ಆದರೆ ನನ್ನ ಇಲಾಖೆಯಿಂದ ₹14 ಸಾವಿರ ಕೋಟಿ ಅನುದಾನದಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಅನುದಾನ ಆಕಾಶದಿಂದ ಇಳಿದು ಬಂದಿದೆಯಾ’ ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ ಪ್ರಶ್ನಿಸಿದರು.</p>.<p>ನಗರದ ಹಳೇ ಬಸ್ ನಿಲ್ದಾಣದಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ತಾಲ್ಲೂಕು ಆಡಳಿತ, ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ₹ 54.72 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಶುದ್ದ ಕುಡಿಯುವ ನೀರಿನ ಘಟಕಗಳು, 87 ಸ್ಮಶಾನಗಳು, 889 ಜನರಿಗೆ ಕಿಟ್ ವಿತರಣೆ, ಆದೇಶ ಪತ್ರ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬಿಜೆಪಿ ಅವರಂತೆ ನಾವು ಜಾತಿ ಮಾಡಲ್ಲ, ಸಂವಿಧಾನದ ಆಶಯದಂತೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದೇವೆ. ಕುಡಿಯುವ ನೀರಿಗಾಗಿ ₹ 360 ಕೋಟಿ ಹಣ ಖರ್ಚು ಮಾಡಲಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಹೊಸ ವಸತಿ ಬಡಾವಣೆ ಒಳಗೊಂಡು 22 ಕಿ.ಮೀ. ಪೈಪ್ ಲೈನ್ ಕಾಮಗಾರಿಗೆ ಹಾಗೂ ಯುಜಿಡಿ ವೈಜ್ಞಾನೀಕರಣಗೊಳಿಸಲು ₹ 61 ಕೋಟಿ, ಕೆರೆಗಳ ಸ್ವಚ್ಚಗೊಳಿಸಲು ₹ 63 ಕೋಟಿ ಅನುದಾನದ ಡಿಪಿಆರ್, ಹೊಸ ಬಸ್ ನಿಲ್ದಾಣ ಸೇರಿ ವಿವಿಧ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮುಂಜೂರು ಮಾಡಿಸಿಕೊಡಬೇಕು ಎಂದು ಸಚಿವ ಸುರೇಶ ಅವರಿಗೆ ಮನವಿ ಮಾಡಿದರು.</p>.<p>ಅಮೃತ್ 2.0 ಯೋಜನೆಯಡಿ ₹ 43.36 ಕೋಟಿ ವೆಚ್ಚದ ಸಗಟು ನೀರು ಸರಬರಾಜು ಯೋಜನೆ. ಚೆನ್ನಹಳ್ಳಿ ತಾಂಡದಲ್ಲಿ 5 ಕೋಟಿ ವೆಚ್ಚದಲ್ಲಿ ಜಿನುಗು ಕೆರೆ ನಿರ್ಮಾಣ. 4.56 ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>889 ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು. ಮೀನುಗಾರಿಕೆ ಇಲಾಖೆಯಿಂದ 25 ಜನರಿಗೆ ಮನೆ ನಿರ್ಮಾಣ ಅದೇಶ. ₹ 2 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳಿಗೆ ಚಾಲನೆ ನೀಡಲಾಯಿತು.</p>.<p>ತೆಗ್ಗಿನಮಠ ವರಸದ್ಯೋಜಾತ ಸ್ವಾಮೀಜಿ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉದಯಶಂಕರ ಯಡಿಹಳ್ಳಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ದ್ವಾರುಕೇಶ್, ಮುಖಂಡರಾದ ಎಚ್.ಎಂ.ಮಲ್ಲಿಕಾರ್ಜುನ, ಮನೋಹರ, ಎಇಇ ಮಂಜುನಾಥ, ದ್ವಾರಕೇಶ್, ತಹಶೀಲ್ದಾರ ಬಿ.ವಿ.ಗಿರೀಶ ಬಾಬು, ರೇಣುಕಾ ಎಸ್.ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong><strong>: ‘</strong>ಬಿಜೆಪಿ, ಜೆಡಿಎಸ್ ಪಕ್ಷಗಳು ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳುತ್ತಾರೆ ಆದರೆ ನನ್ನ ಇಲಾಖೆಯಿಂದ ₹14 ಸಾವಿರ ಕೋಟಿ ಅನುದಾನದಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಅನುದಾನ ಆಕಾಶದಿಂದ ಇಳಿದು ಬಂದಿದೆಯಾ’ ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ ಪ್ರಶ್ನಿಸಿದರು.</p>.<p>ನಗರದ ಹಳೇ ಬಸ್ ನಿಲ್ದಾಣದಲ್ಲಿ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ತಾಲ್ಲೂಕು ಆಡಳಿತ, ನಗರಸಭೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ₹ 54.72 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಶುದ್ದ ಕುಡಿಯುವ ನೀರಿನ ಘಟಕಗಳು, 87 ಸ್ಮಶಾನಗಳು, 889 ಜನರಿಗೆ ಕಿಟ್ ವಿತರಣೆ, ಆದೇಶ ಪತ್ರ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬಿಜೆಪಿ ಅವರಂತೆ ನಾವು ಜಾತಿ ಮಾಡಲ್ಲ, ಸಂವಿಧಾನದ ಆಶಯದಂತೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದೇವೆ. ಕುಡಿಯುವ ನೀರಿಗಾಗಿ ₹ 360 ಕೋಟಿ ಹಣ ಖರ್ಚು ಮಾಡಲಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಹೊಸ ವಸತಿ ಬಡಾವಣೆ ಒಳಗೊಂಡು 22 ಕಿ.ಮೀ. ಪೈಪ್ ಲೈನ್ ಕಾಮಗಾರಿಗೆ ಹಾಗೂ ಯುಜಿಡಿ ವೈಜ್ಞಾನೀಕರಣಗೊಳಿಸಲು ₹ 61 ಕೋಟಿ, ಕೆರೆಗಳ ಸ್ವಚ್ಚಗೊಳಿಸಲು ₹ 63 ಕೋಟಿ ಅನುದಾನದ ಡಿಪಿಆರ್, ಹೊಸ ಬಸ್ ನಿಲ್ದಾಣ ಸೇರಿ ವಿವಿಧ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮುಂಜೂರು ಮಾಡಿಸಿಕೊಡಬೇಕು ಎಂದು ಸಚಿವ ಸುರೇಶ ಅವರಿಗೆ ಮನವಿ ಮಾಡಿದರು.</p>.<p>ಅಮೃತ್ 2.0 ಯೋಜನೆಯಡಿ ₹ 43.36 ಕೋಟಿ ವೆಚ್ಚದ ಸಗಟು ನೀರು ಸರಬರಾಜು ಯೋಜನೆ. ಚೆನ್ನಹಳ್ಳಿ ತಾಂಡದಲ್ಲಿ 5 ಕೋಟಿ ವೆಚ್ಚದಲ್ಲಿ ಜಿನುಗು ಕೆರೆ ನಿರ್ಮಾಣ. 4.56 ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.</p>.<p>889 ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು. ಮೀನುಗಾರಿಕೆ ಇಲಾಖೆಯಿಂದ 25 ಜನರಿಗೆ ಮನೆ ನಿರ್ಮಾಣ ಅದೇಶ. ₹ 2 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳಿಗೆ ಚಾಲನೆ ನೀಡಲಾಯಿತು.</p>.<p>ತೆಗ್ಗಿನಮಠ ವರಸದ್ಯೋಜಾತ ಸ್ವಾಮೀಜಿ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉದಯಶಂಕರ ಯಡಿಹಳ್ಳಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ದ್ವಾರುಕೇಶ್, ಮುಖಂಡರಾದ ಎಚ್.ಎಂ.ಮಲ್ಲಿಕಾರ್ಜುನ, ಮನೋಹರ, ಎಇಇ ಮಂಜುನಾಥ, ದ್ವಾರಕೇಶ್, ತಹಶೀಲ್ದಾರ ಬಿ.ವಿ.ಗಿರೀಶ ಬಾಬು, ರೇಣುಕಾ ಎಸ್.ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>