<p><strong>ಸಂಡೂರು:</strong> ತಾಲ್ಲೂಕಿನ ಕುರೆಕುಪ್ಪ ಪಟ್ಟಣದ ಬಳಿಯ ಎಚ್ಎಲ್ಸಿ ಕಾಲುವೆಗೆ ಟ್ಯ್ರಾಕ್ಟರ್ ಒಂದು ಬುಧವಾರ ಸಂಜೆ ಉರುಳಿಬಿದ್ದು ಕಾಲುವೆಯ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆ ಬಳ್ಳಾರಿಯ ಕೊಳಗಲ್ಲು ಗ್ರಾಮದ ಬಳಿ ಕಾಲುವೆಯಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.</p>.<p>ಕಂಪ್ಲಿ ತಾಲ್ಲೂಕಿನ ದೇವಲಾಪುರ ಗ್ರಾಮದ ನಿವಾಸಿ ಕಾಮಾಕ್ಷಮ್ಮ (42) ಮೃತ ಮಹಿಳೆ.</p>.<p>ಮಹಿಳೆ ಹಾಗೂ ಟ್ರ್ಯಾಕ್ಟರ್ ಚಾಲಕ ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದಿಂದ ದೇವಲಾಪುರ ಗ್ರಾಮಕ್ಕೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯ್ರಾಕ್ಟರ್ ಕಾಲುವೆಗೆ ಉರುಳಿದೆ. ತಕ್ಷಣ ಸ್ಥಳೀಯರು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಮಹಿಳೆಯ ರಕ್ಷಣೆ ಸಾಧ್ಯವಾಗಿರಲಿಲ್ಲ.</p>.<p>ಸಂಡೂರಿನ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬ್ಬಂದಿ, ತೋರಣಗಲ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಕಾಲುವೆಯ ನೀರಿನಲ್ಲಿದ್ದ ಟ್ಯ್ರಾಕ್ಟರ್ಅನ್ನು ಹೊರ ತೆಗೆದಿದ್ದಾರೆ.</p>.<p>ಮೃತಎ ಸಂಬಂಧಿ ಷಣ್ಮುಖಪ್ಪ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ತಾಲ್ಲೂಕಿನ ಕುರೆಕುಪ್ಪ ಪಟ್ಟಣದ ಬಳಿಯ ಎಚ್ಎಲ್ಸಿ ಕಾಲುವೆಗೆ ಟ್ಯ್ರಾಕ್ಟರ್ ಒಂದು ಬುಧವಾರ ಸಂಜೆ ಉರುಳಿಬಿದ್ದು ಕಾಲುವೆಯ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆ ಬಳ್ಳಾರಿಯ ಕೊಳಗಲ್ಲು ಗ್ರಾಮದ ಬಳಿ ಕಾಲುವೆಯಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.</p>.<p>ಕಂಪ್ಲಿ ತಾಲ್ಲೂಕಿನ ದೇವಲಾಪುರ ಗ್ರಾಮದ ನಿವಾಸಿ ಕಾಮಾಕ್ಷಮ್ಮ (42) ಮೃತ ಮಹಿಳೆ.</p>.<p>ಮಹಿಳೆ ಹಾಗೂ ಟ್ರ್ಯಾಕ್ಟರ್ ಚಾಲಕ ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದಿಂದ ದೇವಲಾಪುರ ಗ್ರಾಮಕ್ಕೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯ್ರಾಕ್ಟರ್ ಕಾಲುವೆಗೆ ಉರುಳಿದೆ. ತಕ್ಷಣ ಸ್ಥಳೀಯರು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಮಹಿಳೆಯ ರಕ್ಷಣೆ ಸಾಧ್ಯವಾಗಿರಲಿಲ್ಲ.</p>.<p>ಸಂಡೂರಿನ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬ್ಬಂದಿ, ತೋರಣಗಲ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಕಾಲುವೆಯ ನೀರಿನಲ್ಲಿದ್ದ ಟ್ಯ್ರಾಕ್ಟರ್ಅನ್ನು ಹೊರ ತೆಗೆದಿದ್ದಾರೆ.</p>.<p>ಮೃತಎ ಸಂಬಂಧಿ ಷಣ್ಮುಖಪ್ಪ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>