<p><strong>ಸಂಡೂರು</strong>: ತಾಲ್ಲೂಕಿನ ತೋರಣಗಲ್ಲು ಗ್ರಾಮದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಕಾರುವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮಗುಚಿದ ಪರಿಣಾಮ ಚಾಲಕ ಸೇರಿದಂತೆ ಮೂರು ಜನ ಗಾಯಗೊಂಡಿದ್ದು, ಕಾರಿನ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.</p>.<p>ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದ ನಿವಾಸಿ ತಿಪ್ಪೇಸ್ವಾಮಿ(37) ಮೃತ ವ್ಯಕ್ತಿ. ಬೆಳಗಿನ ಜಾವ ಕಾರಿನಲ್ಲಿ ಕುಡತಿನಿ ಪಟ್ಟಣದಿಂದ ವಡ್ಡು ಗ್ರಾಮದ ಬಳಿ ಎಚ್ಎಸ್ಟಿ ಕಾಲೊನಿಗೆ ತಿಪ್ಪೇಸ್ವಾಮಿ ಅವರು ತೆರಳುವಾಗ ಈ ಘಟನೆ ಸಂಭವಿಸಿದೆ.</p>.<p>ಕಾರಿನ ಚಾಲಕ ಗೌತಮನು ಅಜಾಗುರುಕತೆ, ಅತಿವೇಗವಾಗಿ ಚಾಲನೆ ಮಾಡಿದ್ದರಿಂದ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಜಿಂದಾಲ್ ಕಾರ್ಖಾನೆಯ ಸಂಜಿವಿನಿ ಆಸ್ಪತ್ರೆಗೆ ಸಾಗಿಸಿದ್ದಾರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿದ್ದಾನೆ ತಿಳಿಸಿದ್ದಾರೆ.</p>.<p>ಮೃತನ ಸ್ನೇಹಿತ ಪ್ರವೀಣಕುಮಾರ್ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ತಾಲ್ಲೂಕಿನ ತೋರಣಗಲ್ಲು ಗ್ರಾಮದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಕಾರುವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮಗುಚಿದ ಪರಿಣಾಮ ಚಾಲಕ ಸೇರಿದಂತೆ ಮೂರು ಜನ ಗಾಯಗೊಂಡಿದ್ದು, ಕಾರಿನ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.</p>.<p>ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದ ನಿವಾಸಿ ತಿಪ್ಪೇಸ್ವಾಮಿ(37) ಮೃತ ವ್ಯಕ್ತಿ. ಬೆಳಗಿನ ಜಾವ ಕಾರಿನಲ್ಲಿ ಕುಡತಿನಿ ಪಟ್ಟಣದಿಂದ ವಡ್ಡು ಗ್ರಾಮದ ಬಳಿ ಎಚ್ಎಸ್ಟಿ ಕಾಲೊನಿಗೆ ತಿಪ್ಪೇಸ್ವಾಮಿ ಅವರು ತೆರಳುವಾಗ ಈ ಘಟನೆ ಸಂಭವಿಸಿದೆ.</p>.<p>ಕಾರಿನ ಚಾಲಕ ಗೌತಮನು ಅಜಾಗುರುಕತೆ, ಅತಿವೇಗವಾಗಿ ಚಾಲನೆ ಮಾಡಿದ್ದರಿಂದ ಕಾರು ರಸ್ತೆಯ ವಿಭಜಕಕ್ಕೆ ಡಿಕ್ಕಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಜಿಂದಾಲ್ ಕಾರ್ಖಾನೆಯ ಸಂಜಿವಿನಿ ಆಸ್ಪತ್ರೆಗೆ ಸಾಗಿಸಿದ್ದಾರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿದ್ದಾನೆ ತಿಳಿಸಿದ್ದಾರೆ.</p>.<p>ಮೃತನ ಸ್ನೇಹಿತ ಪ್ರವೀಣಕುಮಾರ್ ನೀಡಿದ ದೂರು ಆಧರಿಸಿ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>