<p><strong>ಬಳ್ಳಾರಿ:</strong> ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣವನ್ನು ವಿಶ್ಲೇಷಿಸಿ ಸಮೀರ್ ಎಂಬುವರು ಸಾಮಾಜಿಕ ಮಾಧ್ಯಮ ಯೂಟ್ಯೂಬ್ನಲ್ಲಿ ವಿಡಿಯೊ ಹಂಚಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. </p>.<p>‘ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)–2023ರ ಸೆಕ್ಷೆನ್ 299’ (ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆಗಳನ್ನು ಉದ್ದೇಶಪೂರ್ವಕವಾಗಿ ಅಪಮಾನಿಸುವುದು) ಅಡಿಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ.</p>.<p>‘ದೂತ: ಸಮೀರ್ ಎಂಡಿ/ದೂತ’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಹೊರಡಿಸಲಾದ ವಿಡಿಯೊದಿಂದ ಜನರು ಹೊಂದಿರುವ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಪ್ರಕರಣ ದಾಖಲಾಗಿದ್ದು, ಪೊಲೀಸ್ ಇಲಾಖೆಯಿಂದ ನೋಟಿಸ್ ಕೂಡ ಕೊಡಲಾಗಿದ್ದು, ಸಮೀರ್ ವಿಚಾರಣೆಗೆ ಹಾಜರಾಗಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದರು.</p>.<p>ಸಮೀರ್ ಬಂಧನಕ್ಕೆ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದಲ್ಲಿ ಹಾಕಲಾಗಿರುವ ಸೆಕ್ಷನ್ಗಳ ಪ್ರಕಾರ. ಬಂಧನಕ್ಕೆ ಅವಕಾಶ ಇಲ್ಲ’ ಎಂದರು.</p>.<p>ಯೂಟ್ಯೂಬರ್ ಸಮೀರ್ ಮೂಲತಃ ಬಳ್ಳಾರಿಯ ಬಂಡಿಹಟ್ಟಿಯವರು. ಅವರ ತಾಯಿ ಆಂಧ್ರ ಪ್ರದೇಶದ ಗುಂತಕಲ್ನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ. ಸಮೀರ್ ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ ಎಂಬ ಮಾಹಿತಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣವನ್ನು ವಿಶ್ಲೇಷಿಸಿ ಸಮೀರ್ ಎಂಬುವರು ಸಾಮಾಜಿಕ ಮಾಧ್ಯಮ ಯೂಟ್ಯೂಬ್ನಲ್ಲಿ ವಿಡಿಯೊ ಹಂಚಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. </p>.<p>‘ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)–2023ರ ಸೆಕ್ಷೆನ್ 299’ (ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆಗಳನ್ನು ಉದ್ದೇಶಪೂರ್ವಕವಾಗಿ ಅಪಮಾನಿಸುವುದು) ಅಡಿಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ.</p>.<p>‘ದೂತ: ಸಮೀರ್ ಎಂಡಿ/ದೂತ’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಹೊರಡಿಸಲಾದ ವಿಡಿಯೊದಿಂದ ಜನರು ಹೊಂದಿರುವ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಪ್ರಕರಣ ದಾಖಲಾಗಿದ್ದು, ಪೊಲೀಸ್ ಇಲಾಖೆಯಿಂದ ನೋಟಿಸ್ ಕೂಡ ಕೊಡಲಾಗಿದ್ದು, ಸಮೀರ್ ವಿಚಾರಣೆಗೆ ಹಾಜರಾಗಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ತಿಳಿಸಿದರು.</p>.<p>ಸಮೀರ್ ಬಂಧನಕ್ಕೆ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ಪ್ರಕರಣದಲ್ಲಿ ಹಾಕಲಾಗಿರುವ ಸೆಕ್ಷನ್ಗಳ ಪ್ರಕಾರ. ಬಂಧನಕ್ಕೆ ಅವಕಾಶ ಇಲ್ಲ’ ಎಂದರು.</p>.<p>ಯೂಟ್ಯೂಬರ್ ಸಮೀರ್ ಮೂಲತಃ ಬಳ್ಳಾರಿಯ ಬಂಡಿಹಟ್ಟಿಯವರು. ಅವರ ತಾಯಿ ಆಂಧ್ರ ಪ್ರದೇಶದ ಗುಂತಕಲ್ನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ. ಸಮೀರ್ ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ ಎಂಬ ಮಾಹಿತಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>