‘ರಸ್ತೆ ಮೇಲೆ ಬಿಡಾಡಿ ದನಗಳು ಬೇಕಾಬಿಟ್ಟಿ ಓಡಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ವಯಸ್ಸಾದ ಹಿರಿಯ ನಾಗರಿಕರು, ಮಕ್ಕಳಿಗೆ ಓಡಾಡಲು ತೊಂದರೆಯಾಗುತ್ತಿದೆ. ಇದರಿಂದಾಗಿ ಬಿಡಾಡಿ ದನಗಳನ್ನು ವಶಕ್ಕೆ ಪಡೆದು ತಾಲ್ಲೂಕಿನ ಮಲಪನಗುಡಿ ಗೋಶಾಲೆಗೆ ಸಾಗಿಸಿದ್ದೇವೆ’ ಎಂದು ಕಮಲಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಫಣಿರಾಜ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.