ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀಗಳು ಮಾತನಾಡಿ, ‘ಮಕ್ಕಳಿಗೆ ಹುಟ್ಟಿನಿಂದಲೇ ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಈ ಜಗತ್ತನ್ನು ಸ್ವರ್ಗವನ್ನಾಗಿ ಮಾಡುವ ಸಾಮರ್ಥ್ಯ ಧರ್ಮಕ್ಕಿದೆ. ಎಷ್ಟೇ ಆಸ್ತಿ ಅಂತಸ್ತು ಗಳಿಸಿದರೂ ಮನಸ್ಸು, ಆತ್ಮ ಮಾತ್ರ ನೆಮ್ಮದಿಯಿಂದಿರುವುದಿಲ್ಲ. ನೆಮ್ಮದಿ, ಶಾಂತಿ ಹೊಂದಿದವರೇ ದೇವಮಾನವ. ಧರ್ಮದಿಂದ ನಡೆದರೆ ಮಾತ್ರ ಮನುಷ್ಯನ ಜೀವನ ಸಾರ್ಥಕ’ ಎಂದು ತಿಳಿಸಿದರು.