<p><strong>ಹೊಸಪೇಟೆ: </strong>ದೊಡ್ಡ ಖಾತೆ ಕೊಟ್ಟು ಸಣ್ಣ ಖಾತೆ ಕೊಟ್ಟರೆ ನನ್ನ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ. ಅದಕ್ಕೆ ನಾನು ಉತ್ತರಿಸುತ್ತ ಓಡಾಡಬೇಕಾಗುತ್ತದೆ ಎಂದು ಸಚಿವ ಆನಂದ್ ಸಿಂಗ್ ಅವರು ಖಾತೆ ಬದಲಿಸಿರುವುದಕ್ಕೆ ಪ್ರತಿಕ್ರಿಯಿಸಿದರು.</p>.<p>ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಾಗಿ ನನ್ನನ್ನು ಶಾಸಕನಾಗಿಸಿಯೇ ಇರಬೇಕು ಎಂದು ಹೇಳಿದರು.</p>.<p>ಸದ್ಯ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿಯೇ ಇರುವೆ. ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರ ಪಾಲಿಸುತ್ತೇನೆ. ನಾಡಿದ್ದು ಭೇಟಿಯಾಗಲು ತಿಳಿಸಿದ್ದು, ಬೆಂಗಳೂರಿಗೆ ತೆರಳಿ ಭೇಟಿ ಮಾಡುವೆ ಎಂದರು.</p>.<p>ಮುಖ್ಯಮಂತ್ರಿಯವರಿಗೆ ಕೆಲ ತಾಂತ್ರಿಕ ಒತ್ತಡಗಳಿರಬಹುದು. ನನ್ನ ಹಲವು ಬೇಡಿಕೆಗಳನ್ನು ಈಡೇರಿಸಿದ್ದಾರೆ ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/karnataka-state-cabinet-expansion-and-reshuffle-issue-continued-799406.html"><strong>ಮತ್ತೆ ಖಾತೆ ಅದಲು– ಬದಲು: ಸುಧಾಕರ್ಗೆ ವೈದ್ಯಕೀಯ; ಮಾಧುಸ್ವಾಮಿಗೆ ಪ್ರವಾಸೋದ್ಯಮ?</strong></a><br /></p>.<p>ವಿಜಯನಗರ ಜಿಲ್ಲೆ ಘೋಷಣೆಗೂ ಖಾತೆ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಆಕ್ಷೇಪಣೆ ಸ್ವೀಕರಿಸಲಾಗಿದೆ. ಎಲ್ಲ ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಹೊರಬೀಳಬಹುದು ಎಂದರು.</p>.<p>ಆನಂದ್ ಸಿಂಗ್ ಅವರಿಗೆ ಈ ಮೊದಲು ಅರಣ್ಯ ಖಾತೆ ನೀಡಲಾಗಿತ್ತು. ಸಂಪುಟ ವಿಸ್ತರಣೆ ನಂತರ ಆ ಖಾತೆ ಅರವಿಂದ್ ಲಿಂಬಾವಳಿ ಅವರಿಗೆ ಕೊಟ್ಟು ಇವರಿಗೆ ಪ್ರವಾಸೋದ್ಯಮ ಖಾತೆಯನ್ನು ಸಿ.ಎಂ. ನೀಡಿದ್ದರು. ಈಗ ಪ್ರವಾಸೋದ್ಯಮ ಖಾತೆ ಬದಲಿಸಿ ಮೂಲಸೌಕರ್ಯ, ವಕ್ಫ್ ಮತ್ತು ಹಜ್ ಖಾತೆ ನೀಡಲಾಗಿದೆ.</p>.<p><strong>ಆನಂದ್ ಸಿಂಗ್ ಭೇಟಿಯಾದ ರಾಜುಗೌಡ:</strong>ಖಾತೆ ಬದಲಾದ ಬೆನ್ನಲ್ಲೇ ಶಾಸಕ ರಾಜುಗೌಡ ಅವರು ಸಚಿವ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ದೊಡ್ಡ ಖಾತೆ ಕೊಟ್ಟು ಸಣ್ಣ ಖಾತೆ ಕೊಟ್ಟರೆ ನನ್ನ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ. ಅದಕ್ಕೆ ನಾನು ಉತ್ತರಿಸುತ್ತ ಓಡಾಡಬೇಕಾಗುತ್ತದೆ ಎಂದು ಸಚಿವ ಆನಂದ್ ಸಿಂಗ್ ಅವರು ಖಾತೆ ಬದಲಿಸಿರುವುದಕ್ಕೆ ಪ್ರತಿಕ್ರಿಯಿಸಿದರು.</p>.<p>ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಕಟ್ಟಡ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಾಗಿ ನನ್ನನ್ನು ಶಾಸಕನಾಗಿಸಿಯೇ ಇರಬೇಕು ಎಂದು ಹೇಳಿದರು.</p>.<p>ಸದ್ಯ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿಯೇ ಇರುವೆ. ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರ ಪಾಲಿಸುತ್ತೇನೆ. ನಾಡಿದ್ದು ಭೇಟಿಯಾಗಲು ತಿಳಿಸಿದ್ದು, ಬೆಂಗಳೂರಿಗೆ ತೆರಳಿ ಭೇಟಿ ಮಾಡುವೆ ಎಂದರು.</p>.<p>ಮುಖ್ಯಮಂತ್ರಿಯವರಿಗೆ ಕೆಲ ತಾಂತ್ರಿಕ ಒತ್ತಡಗಳಿರಬಹುದು. ನನ್ನ ಹಲವು ಬೇಡಿಕೆಗಳನ್ನು ಈಡೇರಿಸಿದ್ದಾರೆ ಎಂದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/karnataka-state-cabinet-expansion-and-reshuffle-issue-continued-799406.html"><strong>ಮತ್ತೆ ಖಾತೆ ಅದಲು– ಬದಲು: ಸುಧಾಕರ್ಗೆ ವೈದ್ಯಕೀಯ; ಮಾಧುಸ್ವಾಮಿಗೆ ಪ್ರವಾಸೋದ್ಯಮ?</strong></a><br /></p>.<p>ವಿಜಯನಗರ ಜಿಲ್ಲೆ ಘೋಷಣೆಗೂ ಖಾತೆ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ಆಕ್ಷೇಪಣೆ ಸ್ವೀಕರಿಸಲಾಗಿದೆ. ಎಲ್ಲ ಪ್ರಕ್ರಿಯೆ ಮುಗಿದ ನಂತರ ಅಂತಿಮ ಅಧಿಸೂಚನೆ ಹೊರಬೀಳಬಹುದು ಎಂದರು.</p>.<p>ಆನಂದ್ ಸಿಂಗ್ ಅವರಿಗೆ ಈ ಮೊದಲು ಅರಣ್ಯ ಖಾತೆ ನೀಡಲಾಗಿತ್ತು. ಸಂಪುಟ ವಿಸ್ತರಣೆ ನಂತರ ಆ ಖಾತೆ ಅರವಿಂದ್ ಲಿಂಬಾವಳಿ ಅವರಿಗೆ ಕೊಟ್ಟು ಇವರಿಗೆ ಪ್ರವಾಸೋದ್ಯಮ ಖಾತೆಯನ್ನು ಸಿ.ಎಂ. ನೀಡಿದ್ದರು. ಈಗ ಪ್ರವಾಸೋದ್ಯಮ ಖಾತೆ ಬದಲಿಸಿ ಮೂಲಸೌಕರ್ಯ, ವಕ್ಫ್ ಮತ್ತು ಹಜ್ ಖಾತೆ ನೀಡಲಾಗಿದೆ.</p>.<p><strong>ಆನಂದ್ ಸಿಂಗ್ ಭೇಟಿಯಾದ ರಾಜುಗೌಡ:</strong>ಖಾತೆ ಬದಲಾದ ಬೆನ್ನಲ್ಲೇ ಶಾಸಕ ರಾಜುಗೌಡ ಅವರು ಸಚಿವ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>