<p><strong>ಸಿರುಗುಪ್ಪ:</strong> ತಾಲ್ಲೂಕಿನ ಕೊತ್ತಲಚಿಂತ ಗ್ರಾಮದ ಹನುಮಂತಾವಧೂತರ ಆರಾಧನಾ ಉತ್ಸವದಲ್ಲಿ ಸೋಮವಾರ ಬೆಳಗಿನ ಜಾವ ನಡೆದ ಮಡಿತೇರು (ಉಚ್ಚಾಯ) ಎಳೆಯುವ ಸಂದರ್ಭದಲ್ಲಿ ತೇರಿನ ಒಂದು ಭಾಗ ಮುರಿದು ವಾಲಿದ್ದರಿಂದ ಐವರು ಗಾಯಗೊಂಡು, ಒಬ್ಬನ ಸ್ಥಿತಿ ಗಂಭೀರವಾಗಿದೆ.</p>.<p>ಗ್ರಾಮದ ರಾಘವೇಂದ್ರರೆಡ್ಡಿ, ಗುಂಡಪ್ಪಸ್ವಾಮಿ, ಲಕ್ಷೀಕಾಂತರೆಡ್ಡಿ, ತಿಕ್ಕಯ್ಯ, ತಾಯಪ್ಪ ಗಾಯಗೊಂಡವರು. ಅವರನ್ನು ಸಿರುಗುಪ್ಪದಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹೇಶ ಎಂಬುವವರನ್ನು ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ.</p>.<p>‘ಸರ್ಕಾರದ ಆದೇಶ ಉಲ್ಲಂಘಿಸಿ ತೇರು ಎಳೆದಿದ್ದರಿಂದ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲು ಹಚ್ಚೊಳ್ಳಿ ಪಿಎಸ್ಐಗೆ ಸೂಚಿಸಲಾಗಿದೆ’ ಎಂದು ಸಿರುಗುಪ್ಪ ಸಿಪಿಐ ಟಿ.ಆರ್.ಪವಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ತಾಲ್ಲೂಕಿನ ಕೊತ್ತಲಚಿಂತ ಗ್ರಾಮದ ಹನುಮಂತಾವಧೂತರ ಆರಾಧನಾ ಉತ್ಸವದಲ್ಲಿ ಸೋಮವಾರ ಬೆಳಗಿನ ಜಾವ ನಡೆದ ಮಡಿತೇರು (ಉಚ್ಚಾಯ) ಎಳೆಯುವ ಸಂದರ್ಭದಲ್ಲಿ ತೇರಿನ ಒಂದು ಭಾಗ ಮುರಿದು ವಾಲಿದ್ದರಿಂದ ಐವರು ಗಾಯಗೊಂಡು, ಒಬ್ಬನ ಸ್ಥಿತಿ ಗಂಭೀರವಾಗಿದೆ.</p>.<p>ಗ್ರಾಮದ ರಾಘವೇಂದ್ರರೆಡ್ಡಿ, ಗುಂಡಪ್ಪಸ್ವಾಮಿ, ಲಕ್ಷೀಕಾಂತರೆಡ್ಡಿ, ತಿಕ್ಕಯ್ಯ, ತಾಯಪ್ಪ ಗಾಯಗೊಂಡವರು. ಅವರನ್ನು ಸಿರುಗುಪ್ಪದಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮಹೇಶ ಎಂಬುವವರನ್ನು ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ.</p>.<p>‘ಸರ್ಕಾರದ ಆದೇಶ ಉಲ್ಲಂಘಿಸಿ ತೇರು ಎಳೆದಿದ್ದರಿಂದ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲು ಹಚ್ಚೊಳ್ಳಿ ಪಿಎಸ್ಐಗೆ ಸೂಚಿಸಲಾಗಿದೆ’ ಎಂದು ಸಿರುಗುಪ್ಪ ಸಿಪಿಐ ಟಿ.ಆರ್.ಪವಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>