ಹೊಸಪೇಟೆ (ವಿಜಯನಗರ): ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಬೇವಿನಮರದ ರಾಘವೇಂದ್ರ ಅವರನ್ನು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ಅವರು ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಏ. 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ. ರಾಘವೇಂದ್ರ ಸಾಧನೆಗೆ ಜಿಲ್ಲಾ ಪೊಲೀಸರು ಸಂತಸ ವ್ಯಕ್ತಪಡಿಸಿದ್ದಾರೆ.