<p>ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ರಾಮೇಶ್ವರ ಬಂಡಿ ಗ್ರಾಮದಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಉಳುಮೆ ಮಾಡುತ್ತಿದ್ದದನ್ನು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ನೇತೃತ್ವದಲ್ಲಿ ತೆರವುಗೊಳಿಸುವ ಕಾರ್ಯ ಮಂಗಳವಾರ ನಡೆಯಿತು.</p>.<p>ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ 67.50 ಎಕರೆ ಭೂಮಿಯನ್ನು ಕೆಲವು ರೈತರು ಒತ್ತುವರಿ ಮಾಡಿದ್ದರು, ಇದರಿಂದಾಗಿ ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ತೊಂದರೆ ಆಗಿತ್ತು. ಆದ್ದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ತಹಶೀಲ್ದಾರ್ ಮಾಹಿತಿ ನೀಡಿದರು.</p>.<p>ಈ ಕುರಿತಂತೆ ರೈತರು ದಾವೆ ಹೂಡಿದ್ದರು. ಉಪವಿಭಾಗಧಿಕಾರಿ, ಜಿಲ್ಲಾಧಿಕಾರಿ ಮತ್ತು ಹೈಕೋರ್ಟ್ಗಳಲ್ಲಿ ಪ್ರಕರಣದ ತೀರ್ಪು ಸರ್ಕಾರದ ಪರವಾಗಿದ್ದರಿಂದ ಭೂಮಿಯನ್ನು ಸರ್ಕಾರದ ವಶ ಪಡೆಯಲಾಗಿದೆ ಎಂದರು.</p>.<p>ಭೂಮಿ ಉಳುಮೆ ಮಾಡುತ್ತಿರುವ ರೈತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ತಾವು ಕೂಲಿಕಾರ್ಮಿಕರಾಗಿದ್ದು ಭೂರಹಿತ ಕೃಷಿಕರಾಗಿದ್ದೇವೆ. ಆದ್ದರಿಂದ ಕೃಷಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.</p>.<p>ಎರಡು ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿ ತೆರವುಗೊಳಿಸಿ ಗಡಿಯನ್ನು ಗುರುತಿಸಲಾಯಿತು. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದರು. ಸರ್ಕಾರಕ್ಕೆ ಸೇರಿದ ಒತ್ತುವರಿ ಜಮೀನು ತೆರವುಗೊಳಿಸುವಂತೆ ಗ್ರಾಮದ ಅನೇಕರು ಹೋರಾಟ ನಡೆಸಿದ್ದರು. ಹಲವು ಬಾರಿ ಮನವಿ ಸಲ್ಲಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕಂದಾಯ ನಿರೀಕ್ಷಕ ಕೊಟ್ರೇಶ್ ಸಾಲ್ಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ರಾಮೇಶ್ವರ ಬಂಡಿ ಗ್ರಾಮದಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿ ಉಳುಮೆ ಮಾಡುತ್ತಿದ್ದದನ್ನು ತಹಶೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ನೇತೃತ್ವದಲ್ಲಿ ತೆರವುಗೊಳಿಸುವ ಕಾರ್ಯ ಮಂಗಳವಾರ ನಡೆಯಿತು.</p>.<p>ಗ್ರಾಮದಲ್ಲಿ ಸರ್ಕಾರಕ್ಕೆ ಸೇರಿದ 67.50 ಎಕರೆ ಭೂಮಿಯನ್ನು ಕೆಲವು ರೈತರು ಒತ್ತುವರಿ ಮಾಡಿದ್ದರು, ಇದರಿಂದಾಗಿ ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಕ್ಕೆ ತೊಂದರೆ ಆಗಿತ್ತು. ಆದ್ದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ತಹಶೀಲ್ದಾರ್ ಮಾಹಿತಿ ನೀಡಿದರು.</p>.<p>ಈ ಕುರಿತಂತೆ ರೈತರು ದಾವೆ ಹೂಡಿದ್ದರು. ಉಪವಿಭಾಗಧಿಕಾರಿ, ಜಿಲ್ಲಾಧಿಕಾರಿ ಮತ್ತು ಹೈಕೋರ್ಟ್ಗಳಲ್ಲಿ ಪ್ರಕರಣದ ತೀರ್ಪು ಸರ್ಕಾರದ ಪರವಾಗಿದ್ದರಿಂದ ಭೂಮಿಯನ್ನು ಸರ್ಕಾರದ ವಶ ಪಡೆಯಲಾಗಿದೆ ಎಂದರು.</p>.<p>ಭೂಮಿ ಉಳುಮೆ ಮಾಡುತ್ತಿರುವ ರೈತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ತಾವು ಕೂಲಿಕಾರ್ಮಿಕರಾಗಿದ್ದು ಭೂರಹಿತ ಕೃಷಿಕರಾಗಿದ್ದೇವೆ. ಆದ್ದರಿಂದ ಕೃಷಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.</p>.<p>ಎರಡು ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿ ತೆರವುಗೊಳಿಸಿ ಗಡಿಯನ್ನು ಗುರುತಿಸಲಾಯಿತು. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದರು. ಸರ್ಕಾರಕ್ಕೆ ಸೇರಿದ ಒತ್ತುವರಿ ಜಮೀನು ತೆರವುಗೊಳಿಸುವಂತೆ ಗ್ರಾಮದ ಅನೇಕರು ಹೋರಾಟ ನಡೆಸಿದ್ದರು. ಹಲವು ಬಾರಿ ಮನವಿ ಸಲ್ಲಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಕಂದಾಯ ನಿರೀಕ್ಷಕ ಕೊಟ್ರೇಶ್ ಸಾಲ್ಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>